“ನ್ಯಾಯಮೂರ್ತಿ ಬಿ. ಆರ್ ಗವಾಯಿ ಅವರಿಗೆ ಅವಮಾನ ಮಾಡಿದ ಮಬ್ಬಕ್ತ, ಸನಾತನಿ, ಆರ್.ಎಸ್.ಎಸ್ ಚೇಲಾ, ದಲಿತ ವಿರೋಧಿ, ದೇಶದ್ರೋಹಿ, ವಕೀಲನನ್ನು ವಿಚಾರಣೆ ಮಾಡಬೇಕು. ಈ ಘಟನೆ ನಡೆಯಲು ಪ್ರೇರೆಪಿಸಿದವರನ್ನು ಹಾಗೂ ಇವನ ಹಿಂದಿರುವವರನ್ನು ವಿಚಾರಿಸಿ ದೇಶದ್ರೋಹ ಪ್ರಕರಣ ದಾಖಲಿಸಿ, ದೇಶದಿಂದ ಗಡಿಪಾರು ಮಾಡಬೇಕು” ಎಂದು ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷರು ಶಿವಾನಂದ ತಮ್ಮಣ್ಣನವರ ಅಗ್ರಹಿಸಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ವತಿಯಿಂದ ಸುಪ್ರಿಂ ಕೋರ್ಟಿನ ಸಭಾಂಗಣದಲ್ಲಿ ನ್ಯಾಯಮೂರ್ತಿಗಳು ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ವಕೀಲರನ್ನು ದೇಶದಿಂದ ಗಡಿಪಾರು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.
“ಸುಪ್ರೀಂ ಕೋರ್ಟಿನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆ ನಿಜಕ್ಕು ಖಂಡನಿಯ. ನ್ಯಾಯಮೂರ್ತಿಗಳಿಗೆ ಈ ರೀತಿ ಆದರೆ ಇನನ್ನೂ ಜನಸಾಮಾನ್ಯರ ಗತಿಯೇನು” ಎಂದು ಪ್ರಶ್ನಿಸಿದರು.
“ಈ ನೇಲದ ಕಾನೂನು ಹಾಗೂ ಸಂವಿಧಾನಿಕ ಸ್ಥಾನಗಳನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ದೇಶದ ಸರ್ವೋಚ್ಚ ನ್ಯಾಯಾಪಿಠಕ್ಕಾದ ದೊಡ್ಡ ಅಪಮಾನ. ದಲಿತ ಸಮುದಾಯದಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋದಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದ್ದಾರೆ. ಆದರೆ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದು ಎಪ್ಪತೈದು ವರ್ಷಗಳ ನಂತರವು ಮನುವಾದಿಗಳ ಮನಸಿನಲ್ಲಿ ಭದ್ರವಾಗಿ ಉಳಿದುಕೊಂಡಿದೆ, ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ” ಎಂದು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ : ಎಂಟು ಎಕರೆ ಕಬ್ಬು ಸುಟ್ಟು ಕರಕಲು
“ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಗವಾಯಿ ಅವರ ತಾಯಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮವೊಂದರ ಆಹ್ವಾನ ಸ್ವೀಕರಿಸದಿದ್ದಕ್ಕೆ ಶೂ ಎಸೆಯಲು ಯತ್ನಿಸಿರಬಹುದು ಎಂದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಕೃತ್ಯ ಎಸಗಿದ ವಕೀಲನ ಮೇಲೆ ಕ್ರಮ ತೆಗೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.
ಮನವಿ ಸಂದರ್ಭದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯು ಮುಖಂಡರು ಉಪಸ್ಥಿತರಿದ್ದರು.





