ಗದಗ | ರಾಜ್ಯೋತ್ಸವ ಪ್ರಶಸ್ತಿ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರನ್ನೂ ನೇಮಕ ಮಾಡಲು ಆಗ್ರಹ

Date:

2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರನ್ನೂ ನೇಮಕ ಮಾಡುವಂತೆ ಆಗ್ರಹಿಸಿ ಮಂಗಳವಾರ ಬಯಲಾಟ ಕಲಾವಿದರು ಗದಗ ಪಟ್ಟಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದರು.

ಸುತಾರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಅಶೋಕ ಸುತಾರ ಮಾತನಾಡಿ, “ರಾಜ್ಯೋತ್ಸವ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲು ಸರ್ಕಾರ ಸಲಹಾ ಸಮಿತಿ ರಚಿಸಲಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯದ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ಸಾಹಿತಿಗಳು ಹಾಗೂ ಜಾನಪದ, ರಂಗಭೂಮಿ, ಮಾಧ್ಯಮ ವಿಭಾಗ, ವೈದ್ಯಕೀಯ, ಸಂಗೀತ ನೃತ್ಯ, ಚಿತ್ರಕಲೆ, ನ್ಯಾಯಾಂಗ, ಕಿರುತೆರೆ, ಚಲನಚಿತ್ರ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಪದನಿಮಿತ್ಯ ಸದಸ್ಯರನ್ನು ಒಳಗೊಂಡಂತೆ ಎಲ್ಲ ವಿಭಾಗದ ತಜ್ಞರನ್ನು ಸಲಹಾ ಸಮಿತಿಯ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

“ಆದರೆ, ಉತ್ತರ ಕರ್ನಾಟಕದ ಗಂಡು ಕಲೆಯಾಗಿರುವ ಬಯಲಾಟಕ್ಕೆ ಸಂಬಂಧಿಸಿದಂತೆ ಯಾವೊಬ್ಬ ತಜ್ಞರು ಅಥವಾ ಬಯಲಾಟ ಅಕಾಡೆಮಿಯ ಅಧ್ಯಕ್ಷರನ್ನು 2024-25 ಹಾಗೂ 2025-26ನೇ ಸಾಲಿನಲ್ಲಿ ಸಲಹಾ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಿಲ್ಲ. ಇದರಿಂದ ಉತ್ತರ ಕರ್ನಾಟಕದ ಗಂಡು ಕಲೆಯಾದ ಬಯಲಾಟ ಕಲೆಗೆ ಹಾಗೂ ಕಲಾವಿದರಿಗೆ ಅವಮಾನಿಸಿದಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಕ್ಷಣವೇ ಈ ಲೋಪ ಸರಿಪಡಿಸಿ, ಬಯಲಾಟ ಅಕಾಡೆಮಿ ಅಧ್ಯಕ್ಷ ಕೆ.ಆ‌ರ್.ದುರ್ಗಾದಾಸ ಅವರನ್ನು ನೇಮಕ ಮಾಡಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಬೀದರ್‌ ಜಿಲ್ಲೆಗೆ 14 ಕೆಪಿಎಸ್‌ ಶಾಲೆ ಮಂಜೂರು

ಮನವಿ ಸಂದರ್ಭದಲ್ಲಿ ಬಯಲಾಟ ಕಲಾವಿದರು ರಾಮಚಂದ್ರ ಅರ್ಕಸಾಲಿ, ಮನೋಜ್‌ಕುಮಾರ ಸುತಾರ, ಮಲ್ಲೇಶಗೌಡ ತಿಮ್ಮನಗೌಡ್ರ, ಶಂಕರಪ್ಪ ವಿ. ಬಡಿಗೇರ, ಸುಭಾಸ ಮಳಗಿ, ಸಿದ್ಧಲಿಂಗೇಶ್ವರ ಮುಳ್ಳಾಳ, ನಿಖಿತಾ ಸುತಾರ, ಸುಭಾಷ ಕದಡಿ, ರಂಗಪ್ಪ ಮಡ್ಡಿಕಾರ, ಬಾಳಪ್ಪ ಮನಗೂಳಿ, ಪ್ರಕಾಶ ಬೆಣಕಲ್ಲ, ಖಾಜೇಸಾಬ ನಾರಾಯಣಕೇರಿ, ವಿರುಪಾಕ್ಷಪ್ಪ ಕ್ಷೇತ್ರಿ, ಉಮೇಶ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...