“ಕರ್ನಾಟಕ ರಾಜ್ಯದ ಸಾಮಾಜಿಕ ದೌರ್ಜನ್ಯ ಹಾಗೂ ಬಹಿಷ್ಕಾರಕ್ಕೊಳಗಾದ ಮತ್ತು ಆರ್ಥಿಕವಾಗಿ ಪರಾವಲಂಬಿಗಳಾದ ದಲಿತರು, ದಲಿತ ದೇವದಾಸಿ ಮಹಿಳೆಯರು ಮತ್ತು ಒಂಟಿ ಮಹಿಳೆಯರು ಹಾಗೂ ಬಿಟ್ಟಿ ಚಾಕರಿಯಲ್ಲಿ ತೊಡಗಿರುವ ಮಸಣ ಕಾರ್ಮಿಕರು ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿಸೆಂಬರ 20 ರಂದು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲು ನಿರ್ಧರಿಸಲಾಗಿದೆ” ಎಂದು ಸಂಘಟನೆಯ ಮಾಳವ್ವ ಅರಳಿಗಿಡದ ತಿಳಿಸಿದರು.
ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯ ಸರಕಾರಗಳು ನಮ್ಮನ್ನು ಕಡೆಗಣಿಸುತ್ತಿವೆ. ದೇಶ ಹಾಗೂ ರಾಜ್ಯದಲ್ಲಿ ಸಾಮಾಜಿಕ ಮತ್ತುಆರ್ಥಿಕ ತಾರತಮ್ಯ, ಬಹಿಷ್ಕಾರಗಳನ್ನು ನಿವಾರಿಸುವಲ್ಲಿ ಬಹುತೇಕ ವಿಫಲವಾಗಿವೆ. ಇದರಿಂದ ಅತ್ಯಂತ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು 78 ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲೂ ರಾಜ್ಯದಲ್ಲಿ ಶೇ 80ಕ್ಕೂ ಅಧಿಕ ಸಮುದಾಯಗಳು ಈಗಲೂ ಜಾತಿ, ಲಿಂಗ ತಾರತಮ್ಯ, ಅಸ್ಪೃಶ್ಯತೆ, ದೇವದಾಸಿ ಪದ್ದತಿ, ಬಿಟ್ಟ ಚಾಕರಿ ಮತ್ತು ಬಹಿಷ್ಕಾರಕ್ಕೊಳಗಾದ ಒಂಟಿ ಮಹಿಳೆಯಾಗಿ ಜೀವನ ನಡೆಸುತ್ತಿದ್ದಾರೆ” ಎಂದರು.
ಜಿಲ್ಲಾ ಗೌರವಾಧ್ಯಕ್ಷರು ಬಾಲು ರಾಠೋಡ ಮಾತನಾಡಿ, “ದೇವದಾಸಿ ಮಹಿಳೆಯರ ಸಂಪೂರ್ಣ ಗಣತಿ, ವಯೋಮಿತಿ ಹಾಕದೆ ಎಲ್ಲರನ್ನು ಸೇರಿಸಬೇಕು. ಎಲ್ಲರಿಗೂ ಪುನರ್ವಸತಿ ಮಾಡಬೇಕು. ಮೂರು ತಲೆಮಾರಿನ ಸದಸ್ಯರನ್ನು ತಕ್ಷಣವೇ ಗಣತಿ ಮಾಡಬೇಕು. ದೇವದಾಸಿ ಪದ್ದತಿ ನಿಷೇಧದ ಹಳೆಯ ಕಾಯ್ದೆಗಳನ್ನು ತೋರಿಸಿ ದೇವದಾಸಿ ಮಹಿಳೆಯರನ್ನು ಗಣತಿಯಾಚೆ ಇಡುವುದನ್ನು ತಡೆಯಬೇಕು. ಇವರು ತೀರ್ವ ಆರ್ಥಿಕ ದುಸ್ಥಿತಿ ಮತ್ತು ಹಿರಿತನದ ಆಧಾರದಲ್ಲಿ ಕಾಲಮಿತಿಯೊಳಗೆ ಸ್ವಾವಲಂಬಿ ಬದುಕನ್ನು ಸಾಧಿಸುವಂತೆ ಪುನರ್ವಸತಿಗೆ ಕ್ರಮವಹಿಸಬೇಕು” ಎಂದು ಒತ್ತಾಯಿಸಲಾಗುವುದು.
“ಒಂಟಿ ಮಹಿಳೆಯರು, ಮಸಣ ಕಾರ್ಮಿಕರು ಮತ್ತು ದೇವದಾಸಿ ಮಹಿಳೆಯರಿಗೆ, ಬಡ ದಲಿತರಿಗೆ ಮಾಸಿಕ ಸಾಮಾಜಿಕ ಪಿಂಚಣಿಯನ್ನು 6000 ರೂ ನೀಡಬೇಕು” ಎಂದು ಒತ್ತಾಯಿಸಲಾಗುವದು
ಪತ್ರಿಕಾ ಗೋಷ್ಠಿಯಲ್ಲಿ ದೇವದಾಸಿ ಮಕ್ಕಳ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರು ಮಲ್ಲಿಕಾರ್ಜುನ ಮಾದರ, ಕನಕಪ್ಪ ರಾಂಪೂರ, ಗೀರಿಜವ್ವ ಪೂಜಾರ, ಆನಂದ ಮಾದರ, ಅಂದವ್ವ ನಂದಾಪೂರ, ಶಾಂತವ್ವ ಮಾದರ, ಕನಕರಾಯ ಹಾದಿಮನಿ ಲ್, ಬಸವರಾಜ ಮಾದರ ಉಪಸ್ಥಿತರಿದ್ದರು.





