ಗದಗ | ಪ್ರವಾಸೋದ್ಯಮ ಅಭಿವೃದ್ಧಿಗೆ ಆಳವಾದ ಅಧ್ಯಯನವಾಗಲಿ: ಸಚಿವ ಎಚ್‌ ಕೆ ಪಾಟೀಲ್

Date:

  • ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ
  • ತಿಂಗಳಲ್ಲಿ ಸರ್ಕಾರಕ್ಕೆ ವರದಿ ನೀಡುವಂತೆ ಸಮಿತಿಗೆ ಸೂಚನೆ

ಗದಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸಮಗ್ರ ಅಭಿವೃದ್ಧಿಗಾಗಿ ಪೂರಕ ವಾತಾವರಣ ನಿರ್ಮಿಸಲು ಯೋಜನೆಗಳನ್ನು ರೂಪಿಸುವ ಕುರಿತು ಆಳವಾದ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ ಸೂಚಿಸಿದರು.

ಗದಗ ನಗರದ ರೈತರ ಭವನದಲ್ಲಿ ಜರುಗಿದ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ತಳಮಟ್ಟದಲ್ಲಿ ಅಧ್ಯಯನ ಮಾಡಿ ಉತ್ತಮ ವರದಿಯನ್ನು ಒಂದು ತಿಂಗಳೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು. ಗದಗ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸಲು ಪೂರಕ ವಾತಾವರಣವಿದೆ. ಇರುವ ಸಂಪನ್ಮೂಲ ಸಮರ್ಪಕವಾಗಿ ಬಳಸಿ ಜಿಲ್ಲೆಯನ್ನು ಪ್ರಮುಖ ಪ್ರವಾಸಿ ತಾಣವಾಗಿಸೋಣ ಎಂದರು.

ಜಿಲ್ಲೆಯಲ್ಲಿ ವಾಸ್ತುಶಿಲ್ಪಕ್ಕೆ ಪ್ರಸಿದ್ದಿ ಪಡೆದಿರುವ ಲಕ್ಕುಂಡಿ, ಹರ್ತಿ, ಡಂಬಳ, ಹುಲಕೋಟಿ ಸೇರಿದಂತೆ ಇತರೆ ಸ್ಥಳಗಳು ಐತಿಹಾಸಿಕ ದೇವಾಲಯಗಳನ್ನು ಹೊಂದಿದ್ದು, ಈ ಕುರಿತು ಈಗಾಗಲೇ ರಚಿಸಿರುವ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಆಳವಾದ ಅಧ್ಯಯನ ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಣ, ಗಜೇಂದ್ರಗಡ, ನರಗುಂದ, ಶ್ರೀಮಂತಗಡ ಕೋಟೆಗಳು ಐತಿಹಾಸಿಕ ಚಾರಿತ್ರ್ಯ ಸಾರುವ ಕೋಟೆಗಳಾಗಿವೆ. ಹತ್ತಿರದ ಕಪ್ಪತಗುಡ್ಡ ಔಷಧಿ ಗುಣವುಳ್ಳ ಸಸ್ಯ ಸಂಪತ್ತನ್ನು ತನ್ನ ಒಡಲಲ್ಲಿ ಅಡಗಿಸಿಕೊಂಡು ಸಹ್ಯಾದ್ರಿಯಾಗಿದೆ. ಬಿಂಕದಕಟ್ಟಿಯಲ್ಲಿ ಇರುವ ಪ್ರಾಣಿ ಸಂಗ್ರಹಾಲಯವು 50 ವರ್ಷಗಳನ್ನು ಪೂರೈಸಿ ಸುವರ್ಣ ಸಂಭ್ರಮ ಆಚರಣೆ ಮಾಡಿದೆ. ನಗರದ ಭೀಷ್ಮಕೆರೆ, ಜುಮ್ಮಾ ಮಸೀದಿ, ತಿರಂಗಾ ಪಾರ್ಕ್‌, ಬೆಟಗೇರಿಯ ತಾರಾಲಯ, ಪ್ರಾಚ್ಯ ವಸ್ತು ಸಂಗ್ರಹಾಲಯ, ನೇಕಾರಿಕೆ ಇವೆಲ್ಲವುಗಳು ಪ್ರವಾಸಿಗರ ಆಕರ್ಷಣೆಗೆ ಪೂರಕವಾಗಿವೆ ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೆಣ್ಣುಮಕ್ಕಳು ಸ್ವಾವಲಂಬನೆಯತ್ತ ಹೆಜ್ಜೆ ಹಾಕಿ; ಬಿ ವಾಮದೇವಪ್ಪ ಸಲಹೆ

ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಹಿರಿಯ ಐಎಎಸ್ ಅಧಿಕಾರಿ ಮನೋಜ ಕುಮಾರ್, ಕಾರ್ಯದರ್ಶಿಯಾಗಿ ಜಿ. ಜಗದೀಶ, ಸದಸ್ಯರಾಗಿ ಮಂಜುನಾಥ ಚವ್ಹಾಣ, ಜೆ ಕೆ ಜಮಾದಾರ, ವಿವೇಕಾನಂದಗೌಡ ಪಾಟೀಲ, ಡಾ. ಎಸ್ ಜಿ ಚಲವಾದಿ, ಕಿಶೋರ ಬಾಬು ನಾಗರಕಟ್ಟೆ, ಎ ದೇವರಾಜ, ಎಫ್ ಎನ್ ಹುಡೇದ ಸೇರಿದಂತೆ ಒಟ್ಟು 16 ತಜ್ಞರು ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಎಂ ಎಲ್‌ ವೈಶಾಲಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಬಿ ಸುಶೀಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ದೀಪಿಕಾ ಬಾಜಪೇಯಿ, ಉಪವಿಭಾಗಾಧಿಕಾರಿ ಎಂ ಅನ್ನಪೂರ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ, ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗಣ್ಣವರ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...