ಗದಗ | ಲೋಕಾಯುಕ್ತ ನ್ಯಾ. ಬಿ.ಎಸ್ ಪಾಟೀಲ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ

Date:

ಸರ್ಕಾರಿ ನೌಕರರು ತಮ್ಮ ದೈನಂದಿನ ಕರ್ತವ್ಯದಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ನೌಕರರು ಸೇವಾ ಕರ್ತವ್ಯದಲ್ಲಿ ಶ್ರೇಷ್ಠ ಸಾಧನೆ ಮಾಡಬೇಕು ಎಂದು ಅಧಿಕಾರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ ಸೂಚನೆ ನೀಡಿದರು.

ಗದಗ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.”ಸರ್ಕಾರಿ ನೌಕರಿಗೆ ಸೇರುವಾಗ ಅಪಾರ ಶ್ರಮಪಟ್ಟು ವಿದ್ಯಾಭ್ಯಾಸ ನೀಡಿ ನೌಕರಿ ಪಡೆದಿರುತ್ತೀರಿ. ಸೇರಿದ ತಕ್ಷಣ ಎಲ್ಲರಂತೆ ಸರ್ಕಾರಿ ಸೇವೆಯನ್ನು ನಿರಾಸಕ್ತಿಯಿಂದ ನಿರ್ವಹಿಸುವುದು, ಬೇಜವಾಬ್ದಾರಿ ಹಾಗೂ ಅಕ್ರಮ ವ್ಯವಹಾರದಲ್ಲಿ ತೊಡಗಿಕೊಳ್ಳುವುದನ್ನು ಬಿಟ್ಟು ಹೆತ್ತವರ ಆಶೋತ್ತರಗಳಿಗೆ ಬೆಲೆ ನೀಡಿ ಕರ್ತವ್ಯದಲ್ಲಿ ಸೇವಾ ಮನೋಭಾವನೆಯನ್ನು ಹಾಗೂ ಪ್ರಾಮಾಣಿಕತೆಯನ್ನು ನಿರಂತರವಾಗಿ ಪಾಲಿಸಬೇಕು” ಎಂದರು.

“ಸರ್ಕಾರಿ ನೌಕರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸದೇ ಇದ್ದಲ್ಲಿ, ಭೃಷ್ಟಾಚಾರದಲ್ಲಿ ಪಾಲ್ಗೊಂಡರೆ, ಸಾರ್ವಜನಿಕರಿಗೆ ಕಿರುಕುಳ ನೀಡಿದರೆ, ಲಂಚ ಪಡೆದರೆ ಅಥವಾ ಲಂಚಕ್ಕೆ ಸರಿಸಮಾನವಾಗಿ ಬೇರೆ ಸಹಾಯ ಪಡೆದರೆ ನಿಮ್ಮ ಮೇಲೆ ದೂರುಗಳು ಖಂಡಿತವಾಗಿಯೂ ಬರುತ್ತವೆ. ಆಗ ನಿಮ್ಮನ್ನು ತನಿಖೆಗೆ ಒಳಪಡಿಸಬೇಕಾಗುತ್ತದೆ. ತನಿಖೆಯಲ್ಲಿ ತಪ್ಪಿತಸ್ಥರಾದರೆ ಅಥವಾ ಆರೋಪ ಸಾಬೀತಾದರೆ ಸರ್ಕಾರಿ ನೌಕರಿಗೆ ತೊಂದರೆಯಾಗುತ್ತದೆ ಅಲ್ಲದೇ ಸಮಾಜದಲ್ಲಿ ನಿಮ್ಮ ಗೌರವಕ್ಕೆ ನೀವೇ ಧಕ್ಕೆ ತಂದುಕೊಳ್ಳುತ್ತೀರಿ. ಆದಷ್ಟು ಕರ್ತವ್ಯದಲ್ಲಿ ಶ್ರದ್ಧೆ, ಪ್ರಾಮಾಣಿಕತೆ, ಸಹಾಯ ಮಾಡುವ ಮನೋಭಾವ ರೂಢಿಸಿಕೊಳ್ಳಬೇಕು. ಜೊತೆಗೆ ನಿಮ್ಮನ್ನು ನೀವು ಸಂಪೂರ್ಣವಾಗಿ ಸೇವೆಗೆ ಅರ್ಪಿಸಿಕೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂಲಭೂತ ಹಕ್ಕುಗಳಂತೆ ಮೂಲಭೂತ ಕರ್ತವ್ಯಗಳ ಪಾಲನೆ ಮಾಡಬೇಕು. ಸರ್ಕಾರಿ ನೌಕರಿ ಕಾರ್ಯ ವ್ಯಾಪ್ತಿಯಲ್ಲಿ ಶ್ರೇಷ್ಠತೆ ಕಾಯ್ದುಕೊಳ್ಳಬೇಕು. ಜೊತೆಗೆ ನಮ್ಮ ಸಹೋದ್ಯೋಗಿಗಳಿಗೂ ಈ ಕುರಿತು ತಿಳುವಳಿಕೆ ನೀಡಬೇಕು. ಅಡಿಕೆ ಕದ್ದರೂ ಕಳ್ಳ ಆನೆ ಕದ್ದರೂ ಕಳ್ಳ ಎಂಬುದನ್ನು ಅರಿತು ಕರ್ತವ್ಯ ನಿರ್ವಹಣೆ ಮಾಡಬೇಕು” ಎಂದರು.

“ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿ ಬರುವ ಪ್ರತಿ ಹಳ್ಳಿ, ಮನೆ ಮನೆಗಳಲ್ಲಿಯೂ ಶೌಚಾಲಯ ನಿರ್ಮಾಣದ ಗುರಿಯನ್ನು ಸಾಧಿಸಬೇಕು. ಜೊತೆಗೆ ಸಾರ್ವಜನಿಕರಿಗೆ ಇರುವ ಅನುದಾನದಲ್ಲಿಯೇ ಉತ್ತಮ ಸೇವೆಗಳನ್ನು ಮೂಲ ಸೌಕರ್ಯಗಳನ್ನು ಒದಗಿಸಬೇಕು. ಶೌಚಾಲಯ ಇಲ್ಲದಿದ್ದರೆ ಏನಾಗುತ್ತದೆ ಎಂಬುದನ್ನು ಸರಿಯಾಗಿ ಜನಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳುವಳಿಕೆ ಹೇಳಿ ಶೌಚಾಲಯ ನಿರ್ಮಿಸಿಕೊಂಡು ಅದನ್ನು ಬಳಸುವ ಕುರಿತು ಮನವರಿಕೆ ಮಾಡಿಕೊಡಬೇಕು” ಎಂದರು.

ತಹಶೀಲ್ದಾರರು ತಮ್ಮ ಕಾರ್ಯವ್ಯಾಪ್ತಿಯಲ್ಲಿರುವ ಪ್ರಕರಣಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ರೈತರಿಗೆ ವಿನಾಕಾರಣ ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸಿ, ಸಾಧ್ಯವಾದಲ್ಲಿ ತಾವುಗಳೇ ರೈತರ ಮನೆಗಳಿಗೆ ತೆರಳಿ ಸೇವೆ ನೀಡಬೇಕು. ಶಾಲೆಗಳಲ್ಲಿ ಶುದ್ಧ ಬೆಳಕು, ಗಾಳಿ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ನೈತಿಕ ಶಿಕ್ಷಣ ನೀಡಬೇಕು. ಜಿಲ್ಲಾಸ್ಪತ್ರೆ ಸೇರಿದಂತೆ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಗಮನ ಕೊಡಬೇಕು. ಸಮಾಜದ ಎಲ್ಲ ವರ್ಗದ ಜನರಿಗೂ ಉತ್ತಮ ಆರೋಗ್ಯ ಸೇವೆಗಳು ತಲುಪಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ಅಧೀಕ್ಷಕ ಬಿ.ಎಸ್. ನೇಮಗೌಡ ಅವರು ಜಿಲ್ಲೆಯ ಕಾರ್ಯವ್ಯಾಪ್ತಿ ಹಾಗೂ ಪ್ರಮುಖ ವಿಷಯಗಳ ಕುರಿತು ಲೋಕಾಯುಕ್ತ ನ್ಯಾಯಮೂರ್ತಿ  ಬಿ.ಎಸ್. ಪಾಟೀಲ ಅವರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಲೋಕಾಯುಕ್ತ ಅಧೀಕ್ಷಕ ಸತೀಶ ಎಸ್ ಚಿಟಗುಬ್ಬಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಸೇರಿದಂತೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...