ಗದಗ | ವೈದ್ಯರ ನಿರ್ಲಕ್ಷ್ಯ ಆರೋಪ: ಅವಳಿ ಮಕ್ಕಳು, ಬಾಣಂತಿ ಸಾವು; ಕುಟುಂಬಸ್ಥರಿಂದ ಪ್ರತಿಭಟನೆ

Date:

ವೈದ್ಯರ ನಿರ್ಲಕ್ಷ್ಯದ ಕಾರಣದಿಂದ ಅವಳಿ ಕಂದಮ್ಮಗಳ ಸಹಿತ ಬಾಣಂತಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಖಾಸಗಿ ಆಸ್ಪತ್ರೆ ವಿರುದ್ಧ ಕೇಳಿಬಂದಿದೆ.

ಗಜೇಂದ್ರಗಡ ಪಟ್ಟಣದ ಕಾರೊಡಗಿಮಠ ಆಸ್ಪತ್ರೆಯಲ್ಲಿ ಫೆಬ್ರವರಿ 2 ರಂದು ವಿರೂಪಾಪೂರ ಗ್ರಾಮದ‌ 28 ವರ್ಷದ ನಂದಿನಿ ಎಂಬುವವರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಒಂದು ಗಂಡು, ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಿಝೇರಿಯನ್ ಮೂಲಕ ವೈದ್ಯರು ಹೆರಿಗೆ ಮಾಡಿಸಿದ್ದರು. ಹೆರಿಗೆ ನಂತರ ಅವಳಿ ಮಕ್ಕಳು ಸಾವನ್ನಪ್ಪಿದ್ದವು. ನಂತರ ತೀವ್ರ ರಕ್ತಸ್ರಾವದಿಂದ ಬಾಣಂತಿಗೆ ಲೋ ಬಿಪಿ ಆಗಿತ್ತು.

ತಕ್ಷಣ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆ ಬದಾಮಿ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರೂ ಕೂಡ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸಿಝೇರಿಯನ್ ಹೆರಿಗೆ ವೇಳೆ ರಕ್ತದ ವ್ಯವಸ್ಥೆ ಮಾಡದೇ ಹೆರಿಗೆ ಮಾಡಿಸಿದ್ದಾರೆಂದು ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಜೇಂದ್ರಗಢ ಪಟ್ಟಣ ಮೃತ ಬಾಣಂತಿ ನಂದಿನಿ ತವರೂರಾಗಿದ್ದರಿಂದ ವಿಷಯ ತಿಳಿದ ಕುಟುಂಬಸ ಸದಸ್ಯರು ಆಸ್ಪತ್ರೆಗೆ ಆಗಮಿಸಿ ಪ್ರತಿಭಟಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಆಸ್ಪತ್ರೆಗೆ ಗಜೇಂದ್ರಗಢ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಈ ಬಗ್ಗೆ ಪ್ರಕರಣ ಕೂಡ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಉದ್ರೇಕಕಾರಿ ಭಾಷಣ ಆರೋಪ: ಖ್ಯಾತ ಮುಸ್ಲಿಂ ವಾಗ್ಮಿ ಮುಫ್ತಿ ಸಲ್ಮಾನ್ ಅಝ್ಹರಿ ಬಂಧನ

ತಮ್ಮ ಮೇಲಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯರು, ನಮ್ಮದೇನೂ ತಪ್ಪಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ತನಿಖೆ ಬಳಿಕವಷ್ಟೇ ಬಾಣಂತಿ, ಅವಳಿ ಮಕ್ಕಳ ಸಾವಿನ ವಿವರ ತಿಳಿದು ಬರಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...