ಗದಗ | ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ; ವಿದ್ಯಾರ್ಥಿಗಳಿಗಳೊಂದಿಗೆ ಆಚರಣೆ

Date:

ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದಂದು ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ, ದಲಿತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರೈತಪರ ಸಂಘಟನೆಗಳು ವತಿಯಿಂದ ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ 3ರಲ್ಲಿ ಹಮ್ಮಿಕೊಳ್ಳಲಾಗಿತ್ತು.

ಶಾಲಾ ಮಕ್ಕಳಿಗೆ ನೋಟ ಬುಕ್ ಮತ್ತು ಪೆನ್ ನೀಡುವುದರ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ಅವರನ್ನು ಮನಃಪೂರ್ವಕವಾಗಿ ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಡಿ ಎಸ್ ಎಸ್ ಸಂಚಾಲಕರು ದತ್ತಾತ್ರೇಯ ಜೋಗಣ್ಣವರ ಮಾತನಾಡಿ, “ನಮ್ಮ ದೇಶದ ಮಹಾನ್ ನಾಯಕ ಸಂವಿಧಾನ ಶಿಲ್ಪಿ, ಹೊಸ ಭಾರತದ ನಿರ್ಮಾತೃ, ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿದ ಮಹಾನ್ ಚೇತನ. ಮಹಿಳಾ ಸಮಾನತೆಯ ಹರಿಕಾರ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೇರು ವ್ಯಕ್ತಿತ್ವದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 69 ನೇ ಮಹಾಪರಿನಿರ್ವಾಣ ದಿನದಂದು ಅವರನ್ನು ಮನಃಪೂರ್ವಕವಾಗಿ ಸ್ಮರಿಸುತ್ತೇವೆ. ಅವರಿಗೆ ಕೋಟಿ, ಕೋಟಿ ನಮನಗಳನ್ನು ಸಲ್ಲಿಸುತ್ತೇನೆ” ಎಂದರು.

“ಬಡತನ ಹಾಗೂ ಅಸ್ಪೃಶ್ಯತೆ ನಡುವೆ ಬೆಳೆದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು, ನಮ್ಮ ದೇಶದ ಮಹಾನ್ ನಾಯಕರಲ್ಲಿ ಒಬ್ಬರಾಗಿದ್ದಾರೆ. ಅದೆಷ್ಟೋ ಜನರಿಗೆ ಸ್ಫೂರ್ತಿಯ ಚಿಲುಮೆಯಾಗಿ ರೂಪಗೊಂಡಿದ್ದಾರೆ. ಸಂವಿಧಾನ ನಮ್ಮ ದೇಶದ ಪವಿತ್ರ ಗ್ರಂಥ. ಈ ಪವಿತ್ರ ಗ್ರಂಥದ ಮೂಲಕ ನಮ್ಮ ದೇಶದ ಪ್ರಜಾಪ್ರಭುತ್ವಕ್ಕೊಂದು ಅರ್ಥ ಕಲ್ಪಿಸಿಕೊಡುವ ವ್ಯವಸ್ಥೆಯನ್ನು ಜಾರಿಗೆ ತಂದರು.

“ದೇಶದ ನಾಗರಿಕರಲ್ಲಿ ಮೇಲು ಕೀಳೆನ್ನದೇ ಎಲ್ಲರೂ, ನಮ್ಮ ದೇಶದ ಸಂವಿಧಾನದ ಅಡಿಯಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆಯಾದವರು. ನಮ್ಮ ಹೆಮ್ಮೆಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು

ನಮ್ಮ ದೇಶದಲ್ಲಿನ ಅಸಮಾನತೆಯನ್ನು ಹೊಡೆದೊಡಿಸಿ, ಸಾಮಾಜಿಕ ಸಮಾನತೆಯನ್ನು ಜಾರಿಗೊಳಿಸುವ ಮೂಲಕ ನಮ್ಮೆಲ್ಲರಲ್ಲಿ ಸ್ಪೂರ್ತಿ ತುಂಬಿದ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವ ಆದರ್ಶವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ” ಎಂದರು.

ಈ ಸಂದರ್ಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷರು ಮಂಜುನಾಥ ಮೆಣಸಿನಕಾಯಿ, ಪುರಸಭೆ ಉಪಾಧ್ಯಕ್ಷರು ಬಸನಗೌಡ ಪಾಟೀಲ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರು ನಬಿಸಾಬಾ ಕಿಲ್ಲದಾರ, ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷರು ವಿಜಯ ಬಡಿಗೇರ, ದಲಿತ ಯುವ ಮುಖಂಡರು ಪುನೀತ್ ಜೋಗಣ್ಣವರ, ದತ್ತಾತ್ರೇಯ ಹಿರೇಕೋಪ್ಪ, ಕಿರಣ ಜೋಗಣ್ಣವರ, ವಿಕ್ರಮ್ ಹೊನ್ನಕೇರಿ, ಕುಮಾರ್ ಜೋಗಣ್ಣವರ, ಉಮೇಶ್ ಕಾಳೆ, ಖಾಜು ಕೀಲೆದಾರ ಯುವ ರೈತ ಮುಖಂಡರು ನವೀನ ಜೋಗಣ್ಣವರ, ಬಸುರಾಜ ಜೋಗಣ್ಣವರ,ನಜೀರ ಕೀಲೆದಾರ, ಗುರು ಕೆಂಗಾರಕರ್, ಶಾಲಾ ಮುಖ್ಯೋಪಾಧ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಇದ್ದರು. 

ವರದಿ: ಗುರುನಾಥ ಕೆಂಗಾರಕರ ಸಿಟಿಜನ್ ಜರ್ನಲಿಸ್ಟ್ ನರಗುಂದ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...