ಗದಗ | ಬಾಬಾ ಸಾಹೇಬರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ: ಮಂಜು ಬುರುಡಿ

Date:

ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ಅನುಪಮ ಕೊಡುಗೆ ನೀಡಿದ ಭಾರತೀಯ ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ ಎಂದು ಡಾ ಬಾಬು ಜಗಜೀವನರ ಆದಿಜಾಂಬವ  ಯುವ ಬ್ರಿಗೇಡ್ ಬೆಳಗಾವಿ ವಿಭಾಗ ಸಂಚಾಲಕ ಮಂಜು ಬುರಡಿ ಬೇಸರ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ರೋಣ ಪಟ್ಟಣದ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆಯ ನಿಮಿತ್ಯ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಸಲ್ಲಿಸಿ ಮೇಣದ ಬತ್ತಿ ಹಚ್ಚುವುದರ ಮೂಲಕ ಗೌರವ ನಮನ ಸಲ್ಲಿಸಿ ಮಾತನಾಡಿದರು.

“ಶಿಕ್ಷಣ ಸಂಘಟನೆ ಹೋರಾಟದ ಮಾರ್ಗದಲ್ಲಿ ಸಮಾಜದ ಕಟ್ಟಕಡೆ ವ್ಯಕ್ತಿಗೂ ನ್ಯಾಯ ಒದಗಿಸಿದ ಮಹಾತ್ಮ ಯಾರಾದರೂ ಇದ್ದರೆ, ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್. ಅವರು ಬರೆದ ಸಂವಿಧಾನವು ‘ಸರ್ವ ಧರ್ಮಗಳಿಗೂ ಸಮಭಾವ’ ಎಂಬ ಸಂದೇಶ ಸಂವಿಧಾನದ ಮುಖ್ಯ ಧ್ಯೇಯವಾಗಿದೆ. ಸಮಾನತೆ ಸ್ವಾತಂತ್ರ್ಯಕ್ಕಾಗಿ ಅನೇಕ ನೋವುಗಳನ್ನು ಸಹಿಸಿಕೊಂಡು  ಭಾರತ ದೇಶಕ್ಕೆ ಉತ್ತಮವಾದ ಸಂವಿಧಾನ ಬರೆದುಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕಳೆದುಕೊಂಡ ಭಾರತ ಅನಾಥವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದಲ್ಲಿ ಎಲ್ಲ ಯುವಕರು ಡಾ. ಬಿ ಆರ್ ಅಂಬೇಡ್ಕರ್ ಅವರ ಶಿಕ್ಷಣ, ಸಂಘಟನೆ, ಹೋರಾಟದ ಗುಣಗಳನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣ ಮಾಡುವುದರಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ”
ಎಂದು ಮಂಜು ಬುರುಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮನರೇಗಾ ಮಾನವ ದಿನ 200ಕ್ಕೆ ಹೆಚ್ಚಿಸಲು ಗ್ರಾಕೂಸ್‌ ಆಗ್ರಹ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಯಲ್ಲಪ್ಪ ಹಿರೇಮನಿ, ಪ್ರಕಾಶ ಜಗಳೂರು, ಶರಣಪ್ಪ ಮಾದರ, ಭೀಮಪ್ಪ ಮಾದರ, ಮಂಜುನಾಥ ಮಾದರ, ಅನಿಲ ದಂಡಿನ, ಎಲ್ಲಪ್ಪ ಪೂಜಾರ, ಶಿವು ಪೂಜಾರ, ಶರಣು ಮಾದರ, ಅರುಣ್ ಕುಮಾರ ಚೆನ್ನದಾಸರ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...