ಗದಗ | ಡಾ. ಜಿ. ಎಸ್. ಆಮೂರವರು ಒಬ್ಬರು ಶ್ರೇಷ್ಠ ಪಯಣಿಗರು: ಡಾ. ಜಿ. ಎಂ. ಹೆಗಡೆ

Date:

“ಡಾ. ಜಿ. ಎಸ್. ಆಮೂರವರು ಒಬ್ಬರು ಶ್ರೇಷ್ಠ ಪಯಣಿಗರು. ಕನ್ನಡ ಪ್ರಪಂಚಕ್ಕೆ ಶ್ರೇಷ್ಠ ವಿಮರ್ಶಾ ಕೃತಿಗಳನ್ನು ಕೊಟ್ಟು ಬೆರಗುಗೊಳಿಸಿದವರು” ಎಂದು ಹಿರಿಯ ವಿಮರ್ಶಕರು ಡಾ. ಜಿ. ಎಂ. ಹೆಗಡೆ ಹೇಳಿದರು.

ಡಾ. ಜಿ. ಎಸ್ ಆಮೂರ ಶತಮಾನೋತ್ಸವ ಸಮಿತಿ, ಜಿ ಬಿ ಜೋಶಿ ಮೆಮೋರಿಯಲ್ ಟ್ರಸ್ಟ್ ಧಾರವಾಡ, ಕೆ ಎಲ್ ಇ ಸಂಸ್ಥೆಯ ಜಗದ್ಗುರು ತೊಂಟದಾರ್ಯ ಮಹಾವಿದ್ಯಾಲಯ ಗದಗ ಮತ್ತು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಗಳ ಕನ್ನಡ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ “ಡಾ. ಜಿ. ಎಸ್. ಆಮೂರರ ಮೇರು ವಿಮರ್ಶ ಕೃತಿಗಳ ವಿಚಾರ ಸಂಕಿರಣದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

“ಆಮೂರವರು ಕಾಲೇಜು ವಿದ್ಯಾರ್ಥಿ ಇದ್ದಾಗಲೇ ವಿಮರ್ಶಾ ಲೇಖನವನ್ನು ಪ್ರಕಟಸಿದ್ದು, ಕನ್ನಡ ಸಾಹಿತ್ಯದಲ್ಲಿ ಶ್ರೇಷ್ಠ ವಿಮರ್ಶಾ ಕೃತಿಗಳನ್ನು ಬರೆಯಲು ಪ್ರೇರಣೆ ಆಯಿತು. ಹಾಗಾಗಿ ನೀವು ಈಗಿನಿಂದಲೇ ಕಥೆ, ಕವಿತೆ, ಹರಟೆ ಬರೆಯಲು ಪ್ರಾರಂಭಿಸಿ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀರಂಗರ ಎಲ್ಲ ನಾಟಕಗಳನ್ನು ಓದಿ ವಿಮರ್ಶೆಗಳನ್ನು ಬರೆದು ಕೃತಿ ರಚನೆ ಮಾಡಿದ್ದಾರೆ. ತಮ್ಮ ಕೃತಿ ಸಮೀಕ್ಷೆಯಲ್ಲಿ ಶ್ರೀರಂಗರ ಕುರಿತು ಸಾಕಷ್ಟು ಕಟ್ಟಿಕೊಟ್ಟಿದ್ದಾರೆ. ಮಹಿಳೆಯರನ್ನು ಜಾಗೃತರಾಗುವಲ್ಲಿ ಜಿ. ಎಸ್. ಆಮೂರರು ಬಹಳಷ್ಟು ಬರಹಗಳನ್ನು ಬರೆದಿದ್ದಾರೆ” ಎಂದು ಹೇಳಿದರು.

“ಹಿರಿಯ ಸಾಹಿತಿ ರಾಘವೇಂದ್ರ ಪಾಟೀಲ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಜಿ ಎಸ್ ಆಮೂರ ಅವರು ಪ್ರಧ್ಯಾಪಕ ವೃತ್ತಿಯಲ್ಲಿದ್ದಾಗ ಇಂಗ್ಲಿಷ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ವಿಮರ್ಶ ಕೃತಿಗಳನ್ನು ಬರೆದರು. ನಿವೃತ್ತಿ ಹೊಂದಿದ ಮೇಲೆ ಧಾರವಾಡಕ್ಕೆ ಬಂದ ಅವರು ಕನ್ನಡ ವಿಮರ್ಶ ಕೃತಿಗಳನ್ನು ಬರೆಯಲು ಆರಂಭಿಸಿದರು” ಎಂದು ಹೇಳಿದರು.

“ಕನ್ನಡ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ವಿಮರ್ಶ ಕ್ಷೇತ್ರಕ್ಕೆ ಕೊಡುಗೆ ಕೊಟ್ಟಿದ್ದು ಧಾರವಾಡ. ಕೀರ್ತಿನಾಥ ಕುರ್ತಕೋಟಿ ಅವರು ವಿಮರ್ಶ ಕೃತಿಗಳನ್ನು ಬರೆದು ವಿಮರ್ಶಾ ಕ್ಷೇತ್ರಕ್ಕೆ ಅಡಿಗಲ್ಲು ಹಾಕಿದರು. ನಂತರ ಜಿ. ಎಸ್. ಆಮೂರು ಹಾಗೂ ಗಿರಡ್ಡಿ ಗೋವಿಂದರಾಜ ಅವರು ಹಳಗನ್ನಡದಿಂದ ಅಧುನಿಕ ಕನ್ನಡ ಸಾಹಿತದಲ್ಲಿ  ವಿಮರ್ಶಾ ಕ್ಷೇತ್ರವನ್ನು ಬೆಳೆಸಿದರು. ಈ ನಿಟ್ಟಿನಲ್ಲಿ ವಿಮರ್ಶಾ ಕ್ಷೇತ್ರವನ್ನು ಕಟ್ಟಿ  ಬೆಳೆಸಿದವರು ಈ ಮೂವರು. ಇದು ಹೆಮ್ಮೆಯ ಸಂಗತಿ ಆಗಿದೆ”  ಎಂದು ಹೇಳಿದರು.

“ಡಾ. ಜಿ. ಎಸ್ ಆಮೂರ ಅವರಿಗೆ ಕನ್ನಡ ಸಾಹಿತ್ಯದ ಬಗ್ಗೆ ತೀವ್ರ ಕಾಳಜಿ ಇತ್ತು. ಹುಯಿಲಗೋಳ ನಾರಾಯಣರವರ ಸಾಹಿತ್ಯವನ್ನು ಸಂಗ್ರಹಿಸಿ ಮಹತ್ವದಾದ ಪ್ರಸ್ತಾವನೆ ಬರೆದರು. ಬೆಟಗೇರಿ ಕೃಷ್ಣಶರ್ಮ ಅವರನ್ನು ಗುರುತಿಸಿದರು” ಎಂದು ಹೇಳಿದರು.

“ಕನ್ನಡ ಸಾಹಿತ್ಯ ಚಾರಿತ್ರಿಕ ಗ್ರಹಿಕೆಯನ್ನು ಸಂಪೂರ್ಣವಾಗಿ ಹಿಡಿದು, ಪರಂಪರೆ ಕಟ್ಟಿಕೊಡಲು ಆಮೂರವರು ಕೆಲಸ ಮಾಡುತ್ತಾ ಬಂದರು” ಎಂದರು.

ಸಾಹಿತಿ ಶಾಮಸುಂದರ ಬಿದರಕುಂದಿ ಮಾತನಾಡಿ, “ಕನ್ನಡದ ಶ್ರೇಷ್ಠ ಕೃತಿಗಳನ್ನು ಓದಿದ ಆಮೂರವರು ಓದಿನ ಹೂರಣವನ್ನು ಇತರರಿಗೆ ತಿಳಿಸುವ ಪ್ರಯತ್ನ ಮಾಡಿದರು. ನಿವೃತ್ತಿ ಹೊಂದಿದ ಮೇಲೆ ಕನ್ನಡದಲ್ಲಿ ವಿಮರ್ಶೆಗಳನ್ನು ಬರೀತಾ ಬರೀತಾ ತಮ್ಮ ಆಯುಷ್ಯವನ್ನು ಹೆಚ್ಚಿಸಿಕೊಂಡು, ಆಧುನಿಕ ಸಾಹಿತ್ಯ ವಿಮರ್ಶಾ ಕ್ಷೇತ್ರವನ್ನು ಬೆಳೆಸಿದರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಹೆಣ್ಣು ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತ ಬಂದಿದ್ದಾಳೆ: ಎಂ. ಎನ್. ಮಂಜುಳಾ

ವಿಚಾರ ಸಂಕಿರಣದಲ್ಲಿ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಅವರು ಸಮಾರೋಪ ಮಾತುಗಳನ್ನಾಡಿದರು. ವೇದಿಕೆ ಮೇಲೆ ಎಸ್. ಪಿ. ಸಂಶಿಮಠ, ಶ್ರೀಮತಿ ರಜನಿ ಪಾಟೀಲ, ಹಿರಿಯ ಸಾಹಿತಿ ಅನ್ನದಾನಿ ಹಿರೇಮಠ, ಪ್ರೊ. ಪಿ. ಜಿ. ಪಾಟೀಲ, ಡಾ. ಡಿ. ಬಿ. ಗವಾನಿ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...