ಗದಗ | ಡಾ. ಎಂ ಎಂ ಕಲಬುರ್ಗಿ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು : ಡಾ. ವೀರಣ್ಣ ರಾಜೂರು

Date:

ಪ್ರಚಲಿತ ಕಾಲದ ಸಂಶೋಧಕರು ಒಂದೊಂದು ಕ್ಷೇತ್ರಕ್ಕೆ ಸೀಮಿತವಾಗಿದ್ದು ಡಾ. ಎಂ ಎಂ ಕಲಬುರ್ಗಿಯವರು ಯೋಜನೆ, ಬೋಧನೆ, ಸಂಶೋಧನೆ ಮುಂತಾದ ಐದು ತತ್ವಗಳ ಹಿನ್ನೆಲೆಯ ಬಹುಶಿಸ್ತೀಯ ಅಧ್ಯಯನಕಾರರಾಗಿದ್ದರು ಎಂದು ಹಿರಿಯ ವಿದ್ವಾಂಸ ಡಾ. ವೀರಣ್ಣ ರಾಜೂರು ಅಭಿಪ್ರಾಯಪಟ್ಟರು.

ಕರ್ನಾಟಕ ಸರ್ಕಾರದ ಡಾ. ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಧಾರವಾಡ, ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಮತ್ತು ಕೆ.ಎಲ್.ಇ ಸಂಸ್ಥೆಯ ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯದ ಕನ್ನಡ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ‘ಡಾ. ಎಂ. ಎಂ. ಕಲಬುರ್ಗಿಯವರ ಸೃಜನ ಸಾಹಿತ್ಯ’ ಎಂಬ ವಿಷಯದ ಕುರಿತಾಗಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಕಲಬುರ್ಗಿಯವರ ಸೃಜನಶೀಲ ಶಕ್ತಿ ತುಂಬಾ ಅಗಾಧವಾದದುದು. ಉತ್ತಮ ಸೃಜನಶೀಲ ವ್ಯಕ್ತಿ ಅತ್ಯುತ್ತಮ ಸಂಶೋಧಕನೂ ಆಗಬಲ್ಲ ಎನ್ನುವುದಕ್ಕೆ ಕಲಬುಗಿಯವರ ಬದುಕು ಮಾದರಿ. ಅತ್ಯುತ್ತಮ ಸಂಶೋಧಕನಾದವನು ಸೂರ್ಯಚಂದ್ರರ ಹಾಗೆ ಜಗತ್ತಿಗೆ ಸದಾ ಬೆಳಕನ್ನು ಚೆಲ್ಲುವನು. ಪಾದರಸದಂತಹ ವ್ಯಕ್ತಿತ್ವದ ಅವರು ಉತ್ತಮ ಅಧ್ಯಾಪಕ ಮತ್ತು ಸಂಶೋಧಕ ಹೇಗಿರಬೇಕು ಎಂಬುದಕ್ಕೆ ಮಾದರಿಯಂತಿದ್ದವರು” ಎಂದು ಅಭಿಪ್ರಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿರಂತರ ಓದು ಮತ್ತು ಅದಮ್ಯ ಉತ್ಸಾಹ ಇವೆರಡೂ ಕಲಬುರ್ಗಿಯವರ ಚಹರೆಗಳಾಗಿದ್ದವು. ಓದಲು ಮತ್ತು ಬರೆಯಲೆಂದೇ ಹುಟ್ಟಿದ ಮನುಷ್ಯನೇನೊ ಎಂಬಷ್ಟು ಹಠದಲ್ಲಿ ಇವರು ಬರೆದ ಪುಸ್ತಕಗಳ ಸಂಖ್ಯೆ 115. ಸುಮಾರು 700ಕ್ಕೂ ಹೆಚ್ಚು ಬಿಡಿಬರಹಗಳನ್ನು ಪ್ರಕಟಿಸಿದ್ದಾರೆ. ಕನ್ನಡ ಗ್ರಂಥ ಸಂಪಾದನೆಯನ್ನು ಒಂದು ಅಧ್ಯಯನ ಶಿಸ್ತಾಗಿ ಅಭಿವೃದ್ಧಿಪಡಿಸುವಲ್ಲಿ ಕಲಬುರ್ಗಿ ವಹಿಸಿದ ಶ್ರಮ ಮತ್ತು ಎಚ್ಚರ ಇವೆರಡೂ ಚರಿತ್ರಾರ್ಹ. ಕಲಬುರ್ಗಿ ಅವರ ಶೋಧಗಳು ಕನ್ನಡ ಸಾಹಿತ್ಯಕಷ್ಟೇ ಅಲ್ಲ, ಕನ್ನಡ ನಾಡು ನುಡಿಯ ಸಂಸ್ಕೃತಿಯ ಶೋಧಗಳಿಗೂ ಮಾದರಿಯಾಗಿವೆ. ಕಲಬುರ್ಗಿ ಅಧ್ಯಯನಶೀಲರಷ್ಟೇ ಅಲ್ಲ, ಅವರೊಬ್ಬ ಸಮರ್ಥ ಸಂಘಟಕರೂ ಆಗಿದ್ದರೆಂಬುದಕ್ಕೆ ಅವರು ಕಟ್ಟಿ ಬೆಳೆಸಿದ ಸಾಹಿತ್ಯಕ, ಸಾಂಸ್ಕೃತಿಕ ಸಂಘಟನೆಗಳೇ ಸಾಕ್ಷಿಯಾಗಿವೆ ಎಂದು ವೀರಣ್ಣ ರಾಜೂರು ಹೇಳಿದರು.

ಇದನ್ನು ಓದಿದ್ದೀರಾ? ಸಚಿವ ಜಮೀರ್ ವಿರುದ್ಧ ಅವಹೇಳನಾಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲರನ್ನೂ ಪ್ರೊ. ಪಿ. ಜಿ. ಪಾಟೀಲ ಸ್ವಾಗತಿಸಿದರು. ಪ್ರೊ. ಚಂದ್ರಶೇಖರ ವಸ್ತ್ರದ ಆಶಯ ನುಡಿಗಳನ್ನಾಡಿದರು.

ಡಾ. ರಮೇಶ ಕಲ್ಲನಗೌಡರ ಅವರು ಕಲಬುರ್ಗಿಯವರ ʼಕೆಟ್ಟಿತ್ತು ಕಲ್ಯಾಣʼ ನಾಟಕದ ಕುರಿತಾಗಿ ಮತ್ತು ಡಾ. ವೈ. ಎಂ. ಭಜಂತ್ರಿಯವರು ʼನೀರು ನೀರಡಿಸಿತ್ತುʼ ಕಾವ್ಯದ ಬಗ್ಗೆ ಉಪನ್ಯಾಸ ನೀಡಿದರು. ಡಾ. ಎ. ಕೆ. ಮಠ ಎಲ್ಲರಿಗೂ ವಂದಿಸಿದರು.

ಡಾ. ರಾಮಚಂದ್ರ ಪಡೆಸೂರು ಮತ್ತು ಪ್ರೊ. ಶೃತಿ ಮ್ಯಾಗೇರಿ ನಿರೂಪಿಸಿದರು. ಪ್ರೊ. ವಿಶ್ವನಾಥ ಜಿ. ಡಾ. ಅಂದಯ್ಯ ಅರವಟಗಿಮಠ, ಪ್ರೊ. ಶಿದ್ದಲಿಂಗ ಸಜ್ಜನಶೆಟ್ಟರ್, ಶಿವನಗೌಡ ಗೌಡರ,  ಪ್ರಕಾಶ ಅಸುಂಡಿ, ಜಿ. ಬಿ. ಪಾಟೀಲ ಡಾ. ರಾಜೇಂದ್ರ ಗಡಾದ, ಹನುಮಾಕ್ಷಿ ಗೋಗಿ, ಲಿಂಗರಾಜ ಪಾಟೀಲ ಒಳಗೊಂಡಂತೆ ಎಲ್ಲ ವಿದ್ಯಾರ್ಥಿಗಳು ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...