ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ 5ನೇ ವಾರ್ಡಿನ ಎಸ್ಸಿ ಕಾಲೋನಿಯಲ್ಲಿ ಸ್ವಚ್ಚತೆ ಕುರಿತು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷಿಸಿದ್ದಾರೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ.
“ಸುಮಾರು ತಿಂಗಳುಗಳಿಂದ ಚರಂಡಿ ಸ್ವಚ್ಛತೆ ಮಾಡದೆ, ಕೊಳಚೆ ನೀರು ತುಂಬಿ ಕ್ರಿಮಿ ಕೀಟಗಳು ಹೆಚ್ಚಾಗಿ ಅಲ್ಲಿ ವಾಸ ಮಾಡುವ ಜನರು ಮತ್ತು ಮಕ್ಕಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸ್ಥಿತಿ ಎದುರಾಗಿದೆ. ಸಂಬಂಧಪಟ್ಟ ಜಕ್ಕಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್ ಎಸ್ ರಿತ್ತಿ ಹಾಗೂ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳಿಗೂ ಈ ಬಗ್ಗೆ ದೂರು ನೀಡಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ” ಎಂದು ಹೇಳಿತ್ತಾರೆ.
“ಗ್ರಾಮದ ಸ್ವಚ್ಛತೆಯ ಬಗ್ಗೆ ಅರಿವೇ ಇಲ್ಲದ ಪಿಡಿಒ ಎಸ್ ಎಸ್ ರಿತ್ತಿ ಹಾಗೂ ಜನಪ್ರತಿನಿಧಿಗಳು ಈ ಸಮಸ್ಯೆ ಜಕ್ಕಲಿ ಗ್ರಾಮದ ಪ್ರತಿಯೊಂದು ವಾರ್ಡಿನ ಸಮಸ್ಯೆಯಾಗಿದೆ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳಳಿಗೆ ಬೇಕಾಗಿರುವುದು ಅಭಿವೃದ್ಧಿ ಅಲ್ಲ, ಇವರಿಗೆ ಬೇಕಾಗಿರುವದು ದುಡ್ಡು ಮಾಡುವುದರ ಕಡೆ ಗಮನ ಇದೆಯೇ ವಿನಃ ಯಾವುದೇ ರೀತಿಯ ಅಭಿವೃದ್ಧಿ ಕಡೆ ಗಮನ ಹರಿಸಿ” ಎಂದು ಸ್ಥಳೀಯ ನಿವಾಸಿ ಅಂದಪ್ಪ ಮಾದರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಸರ್ಕಾರಿ ಕಾಲೇಜು ಮೈದಾನದಲ್ಲಿ ಅಕ್ರಮ ಕೃಷಿ, ಕಟ್ಟಡ ನಿರ್ಮಾಣ; ವಿದ್ಯಾರ್ಥಿಗಳಿಗೆ ಬೆದರಿಕೆ ಆರೋಪ
“ಅಧಿಕಾರಿಗಳು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ. ಇನ್ನು ಇದಕ್ಕೆ ಸಂಬಂಧಪಟ್ಟಂತೆ ಇದೇ ಕಾಲೋನಿಯ ಜನಪ್ರತಿನಿಧಿಯಂತೂ ಕ್ಯಾರೆ ಎನ್ನದೆ, ಇತ್ತ ಕಡೆ ತಿರುಗಿಯೂ ನೋಡಿಲ್ಲ. ಇದನ್ನು ಸರಿಪಡಿಸುವ ಹೊಣೆ ಯಾರ ಮೇಲಿದೆ. ಅಧಿಕಾರಿಗಳ ಚಲ್ಲಾಟಕ್ಕೆ ಎಸ್ ಸಿ ಕಾಲೋನಿಯ ಜನತೆ ಸಾಂಕ್ರಾಮಿಕ ರೋಗಕ್ಕೆ ತುತ್ತಾಗುತ್ತಿದ್ದಾರೆ. ಈ ವರದಿ ಕಂಡ ಮೇಲಾದರೂ ಗ್ರಾಮದ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಾರಾ ಇಲ್ಲವಾ ಎಂಬುದನ್ನು ಕಾದು ನೋಡಬೇಕು” ಎಂದು ಅಂದಪ್ಪ ಮಾದರ ಬೇಸರ ವ್ಯಕ್ತಪಡಿಸಿದರು.





