ಗದಗ | ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ: ತಡೆಗಟ್ಟುವಂತೆ ಡಿಎಸ್ಎಸ್ ಮನವಿ

Date:

“ನರಗುಂದ ಪಟ್ಟಣದಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು ಬಿತ್ತುತ್ತಿದ್ದಾರೆ. ಇದರಿಂದ ಜನರು ಭಯ ಭೀತಿ ಒಳಗೊಳ್ಳುತ್ತಿದ್ದು, ಕೂಡಲೇ ದೇವರ ಹೆಸರಿನಲ್ಲಿ ಮೌಢ್ಯ, ಕಂದಾಚಾರ ತಡೆಗಟ್ಟುವಂತೆ ಡಿಎಸ್ಎಸ್ ಒತ್ತಾಯಿಸಿದರಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ದೇವರ (ಭಾಗಮ್ಮ ದೇವಿ) ಹೆಸರಿನಲ್ಲಿ ಮಾಟ ಮಂತ್ರ ನಿಧಿ ಶೋಧನೆ ಪ್ರಾಣಿ ಬಲಿ, ವಾಮಾಚಾರ, ಭಯಾನಕವಾದ ಕಾಯಿಲೆಗಳಿಗೆ ಔಷಧಿ ನೀಡುತ್ತೇವೆ ಎಂದು ಹೇಳಿ ಜನರಲ್ಲಿ ಮೂಡನಂಬಿಕೆ ಬಿತ್ತುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿ ವತಿಯಿಂದ ಪೊಲೀಸ್ ಠಾಣೆ ಸಿಪಿಐ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ, ಡಿ ಎಸ್ ಎಸ್ ತಾಲ್ಲೂಕು ಅಧ್ಯಕ್ಷ ದತ್ತಾತ್ರೇಯ ಜೋಗನ್ನವರ ಮಾತನಾಡಿ, “ನರಗುಂದ ಪಟ್ಟಣದ ಕೆಲವು ನಗರಗಳಲ್ಲಿ ದೇವರ ಹೆಸರುಗಳನ್ನು ಇಟ್ಟುಕೊಂಡು ಜನರಿಗೆ ಮೌಡ್ಯತೆ ಮತ್ತು ಕಂದಾಚಾರಗಳನ್ನು ಬಿತ್ತುತ್ತಿದ್ದಾರೆ. ಅಲ್ಲದೆ ಹುಣ್ಣಿಮೆ ಅಮಾವಾಸ್ಯೆ ಗುರುವಾರ ಭಾನುವಾರದಂತ ವಾರಗಳಲ್ಲಿ ಭಯಾನಕ ಕಾಯಿಲೆಗಳನ್ನು ಒಳಕೊಂಡಂತ ಜನರು, ಮಾನಸಿಕ ಅಸ್ವಸ್ಥರು ಸಂಚರಿಸುವುದರಿಂದ ಓಣಿಯಲ್ಲಿನ ಜನರು ಭಯ ಬೀತಗೊಂಡು ಜೀವನ ನಡೆಸುತ್ತಿದ್ದಾರೆ. ಓಣಿಯಲ್ಲಿ ಸಣ್ಣ ಪುಟ್ಟ ಮಕ್ಕಳು ಮಹಿಳೆಯರು ವಯೋವೃದ್ಧರು ಇದ್ದಾರೆ. ವಾಮಾಚಾರ ಮಾಟ ಮಂತ್ರ ಮಾಡತಕ್ಕಂಥ ವ್ಯಕ್ತಿಗಳಿಗೆ ಪ್ರಶ್ನೆ ಮಾಡಿದರೆ, ಎಲ್ಲಿ ನಮಗೆ ಮಾಟ ಮಂತ್ರ ಮತ್ತು ನಾವು ಸಾಕಿದ ಪ್ರಾಣಿ ಪಕ್ಷಿಗಳಿಗೆ ಎಲ್ಲಿ ಸಾವು ನೋವು ತರುತ್ತಾರೆಂಬ ಭಯದ ವಾತಾವರಣವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಸೆ.13ರಂದು ರಾಷ್ಟ್ರೀಯ ಲೋಕ್ ಅದಾಲತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಾಗಾಗಿ ಇಂತಹವುಗಳನ್ನು ತಡೆಗಟ್ಟಿ ಸಾರ್ವಜನಿಕರಿಗೆ ನಿರ್ಭೀತಿಯಿಂದ ಜೀವನವನ್ನು ನಡೆಸಲು ಅನುವು ಮಾಡಿಕೊಡಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಶರಣು ಚಲವಾದಿ, ಮುತ್ತು ಸುರಕೋಡ, ವಿಜಯ ಬಡಿಗೇರ, ಸುಭಾಷ್ ಜೋಗನವರ, ಮಹಾಂತೇಶ ಪೂಜಾರ, ವಿಠ್ಠಲ್ ಸೋಮಣ್ಣವರ, ನವೀನ್ ಜೋಗನ್ನವರ, ಗುರುನಾಥ ಕೆಂಗಾರಕರ, ಇನ್ನೂ ಅನೇಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...