“ಶಿರಹಟ್ಟಿ ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ದಲಿತ ಸಮುದಾಯವು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿವೆ, ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ದಲಿತ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ದಲಿತ ಮುಖಂಡ ಮುತ್ತು ಬಾವಿಮನಿ ಒತ್ತಾಯಿಸಿದರು.
ಗದಗ ಜಿಲ್ಲೆಯ ಶಿರಹಟ್ಟಿ ಪಟ್ಟಣದ ತಹಸೀಲ್ದಾರ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ತಾಲೂಕಿನಾದ್ಯಾಂತ ದಲಿತ ಸಮುದಾಯ ಎದುರಿಸುತ್ತಿರುವ ವಿವಿಧ ಜ್ವಲಂತ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕೆಂದು ಆಗ್ರಹಿಸಿ, ಇಂದು ಸೋಮವಾರ ತಹಶೀಲ್ದಾರ್ ಕೆ ರಾಘವೇಂದ್ರ ರಾವ್. ಅವರಿಗೆ ಮನವಿ ಸಲ್ಲಿಸಿದರು.
ಕಡಿಎಸ್ಎಸ್ ತಾಲೂಕು ಸಂಚಾಲಕ ರವಿ ಗುಡಿಮನಿ ಮಾತನಾಡಿ, “ತಾಲೂಕಿನಾದ್ಯಾಂತ ದಲಿತ ಸಮುದಾಯಕ್ಕೆ ಅವಶ್ಯವಿದ್ದ ಕಡೆ ಹೊಸ ಸ್ಮಶಾನ ಭೂಮಿ ಮಂಜೂರು ಮಾಡಬೇಕು ಹಾಗೂ ಈಗಿರುವ ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು. ಕೆಲವು ಗ್ರಾಮಗಳಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆಯಲ್ಲಿದ್ದು, ಇದನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.
“ದಲಿತ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿದ್ಯಾರ್ಥಿ ವೇತನ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ದಲಿತರಿಗೆ ಮಂಜೂರಾದ ನಿವೇಶನಗಳಿಗೆ ಕೂಡಲೇ ಹಕ್ಕು ಪತ್ರಗಳನ್ನು ನೀಡಬೇಕು. ಪ್ರತಿಯೊಂದು ಗ್ರಾಮದ ದಲಿತ ಕಾಲೋನಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಶೀಘ್ರವಾಗಿ ಅಭಿವೃದ್ಧಿಪಡಿಸಬೇಕು. ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ದುರ್ಬಳಕೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಶೀಲನೆ ನಡೆಸಿ ವರದಿ ನೀಡಬೇಕು” ಒತ್ತಾಯಿಸಿದರು. ಎಂದು ಹೇಳಿದರು.
“ತಹಸೀಲ್ದಾರರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಸಭೆ ಕರೆದು, ನಮ್ಮ ಮನವಿಯಲ್ಲಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಹೆಗ್ಗಡಪುರ ಗ್ರಾಮದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಹೆಗ್ಗಡಪುರ ಗ್ರಾಮದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ
ಮನವಯಲ್ಲಿ ಕಡಿಎಸ್ಎಸ್ ಜಿಲ್ಲಾ ಸಂಘಟನಾ ಮಹಿಳಾ ಸಂಚಾಲಕರು ಅಂಜನಾದೇವಿ ಮ್ಯಾಗೇರಿ, ಎಂ. ಕೆ. ಲಮಾಣ, ಪ್ರಕಾಶ್ ಬಡನ್ನವರ, ಚಂದ್ರು ಪೋತರಾಜ, ಹನುಮಂತಪ್ಪ ಬಡ್ಡೆಪ್ಪನವರ, ಅಶೋಕ್ ಬಡನ್ನವರ, ರಮೇಶ್ ಗುಡಿಮನಿ, ಶಿವನಗೌಡ ಪಾಟೀಲ, ಯಲ್ಲಪ್ಪ ಗೋಡನ್ನವರ, ಪರಮೇಶ್ ಗುಡಿಮನಿ, ಸುಭಾಷ್ ಮುಳಗುಂದ, ಮರಿಯಪ್ಪ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.
ವರದಿ: ಅಣ್ಣಪ್ಪ ಗುತ್ತೆಮ್ಮನವರ





