ಗದಗ | ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಡಿಎಸ್ಎಸ್ ಆಗ್ರಹ

Date:

ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡ ಸೋಮಪ್ಪ ಐತಾಪುತ ಅವರು ಮಂಡರಗಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿಯಲ್ಲಿ ತಹಶೀಲ್ದಾರ್‌ ಕಚೇರಿಗೆ ತೆರಳಿ, ಹಕ್ಕೊತ್ತಾಯ ಪತ್ರ ಸಲ್ಲಿಸಿದ ಅವರು, “ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣ ಪತ್ರ ಕೊಡಬಾರದೆಂದು ಸರ್ಕಾರಿ ಆದೇಶ ಇದೆ. ಆದರೂ, ಮುಂಡರಗಿ ತಾಲೂಕಿನ ಬಿದರಳ್ಳಿ, ಹಾರೊಗೇರಿ, ಹಮ್ಮಿಗಿ, ಡಂಬಳ ಗ್ರಾಮ ಪಂಚಾಯಿತಿಗಳಲ್ಲಿ ಮಡ್ಡಿ ಜನಾಂಗಕ್ಕೆ ಕೊಟ್ಟಿ ಜಾತಿ ಪ್ರಮಾಣಪತ್ರ ಕೊಡುತ್ತಿರುವುದು ಕಂಡುಬಂದಿದೆ” ಎಂದು ಆರೋಪಿಸಿದ್ದಾರೆ.

“ಜಾತಿ ಕಾಲಮ್‌ಅನ್ನು ತಾಲೂಕು ದಂಡಾಧಿಕಾರಿಗಳು ಪರಿಶೀಲಿಸಿ ಜಾತಿ ಪ್ರಮಾಣಪತ್ರ ನೀಡಬೇಕು. ಮಡ್ಡಿ ಜನಾಂಗಕ್ಕೆ ಸೇರಿದವರಿಗೆ ಕೊಟ್ಟಿ ಜಾತಿ ಪ್ರಮಾಣಪತ್ರ ನೀಡಬಾರದು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಎಸ್ಎಸ್ ಮುಖಂಡ ದುರುಗಪ್ಪ ಹರಿಜನ ಮಾತನಾಡಿ, “ಮಡ್ಡಿ ಜನಾಂಗದ ಕೆಲವರು ಸರ್ಕಾರಿ ಸೌಲಭ್ಯಗಳಿಗಾಗಿ ಭೋವಿ ಜನಾಂಗಕ್ಕೆ ಸೇರಿದವರೆಂದು ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಹೀಗಾಗಿ, ತಾಲೂಕು ದಂಡಾಧಿಕಾರಿಗಳು ಕೊಟ್ಟಿ ಜಾತಿ ಪ್ರಮಾಣ ಪತ್ರವನ್ನು ಕೊಡಬಾರದು. ಒಂದುವೇಳೆ, ಮುಂದಿನ ದಿನಗಳಲ್ಲಿ ಕೊಟ್ಟಿ ಜಾತಿ ಪ್ರಮಾಣ ಪತ್ರ ಕೊಟ್ಟಲ್ಲಿ ಹೋರಾಟ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಡಿಎಸ್ಎಸ್ ಮುಖಂಡ ಕೊಟ್ರೇಶಿ, ಬಿ.ಎಸ್ ಪುಜಾರ್, ಫಕೀರೇಶ ಮಾದರ ಹಾಗೂ ವಿ ಟಿ ತಿಮ್ಮಾಪುರ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...