ಗದಗ | ದಸರಾ ಹಬ್ಬ ಭಾನು ಮುಸ್ತಾಕ್ ಉದ್ಘಾಟನೆ ಡಿಎಸ್‌ಎಸ್‌: ಸ್ವಾಗತ 

Date:

“ಕರ್ನಾಟಕದಲ್ಲಿ ನಡೆಯುವ ನಾಡ ದಸರಾ ಹಬ್ಬವನ್ನು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಷ್ತಾಕ್ ಅವರನ್ನು ಉದ್ಘಾಟನೆಗೆ ಆಹ್ವಾನ ನೀಡಿದ ಸರ್ಕಾರದ ನಡೆಯನ್ನು ಸ್ವಾಗತಿಸುತ್ತೇನೆ ” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗದಗ ಜಿಲ್ಲಾ ಸಂಚಾಲಕ ಬಾಲರಾಜ ಅರಬರ್ ಹೇಳಿದರು.

ಗದಗ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, “ದಸರಾ ನಾಡ ಹಬ್ಬ ಒಂದು ಧರ್ಮ, ಒಂದು ಜಾತಿಯ ಆಚರಣೆ ಅಲ್ಲ. ಸರ್ವ ಜನರು ಸೌಹಾರ್ದತೆಯ ಪ್ರತಿಕವಾಗಿರುವ ದಸರಾ ಹಬ್ಬವನ್ನು ಒಂದು ಧರ್ಮಕ್ಕೆಷ್ಟೇ ಸೀಮಿತಗೊಳಿಸುವುದು ಸರಿಯಲ್ಲ. ನಮ್ಮ ದೇಶ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಎಲ್ಲಾ ಜಾತಿ ಧರ್ಮದವರು ಕೂಡಿ ದಸರಾ ಹಬ್ಬವನ್ನು ಆಚರಿಸಿದರೇ ಮೆರಗು. ಕುವೆಂಪು ಬಸವಣ್ಣ ಹುಟ್ಟಿದ ಈ ಶ್ರೇಷ್ಠ ನಾಡಿನ ಸರ್ವ ಜನ ಸೇರಿ ಆಚರಿಸಿದರೆ ಕುವೆಂಪು ಮತ್ತು ಬಸವಣ್ಣನವರ ಆಸೆ ಈಡೇರಿದಂತೆ ಆಗುತ್ತದೆ. ಎಂದರು.

“ಈ ದಸರಾ ಹಬ್ಬವನ್ನು ಮೊದಲು ಜಾತಿ ಮತ ಧರ್ಮ ಲಿಂಗ ಭೇದವಿಲ್ಲದೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಬರುತ್ತಾರೆ. ತಮ್ಮ ರಾಜಕೀಯ ಲಾಭಕ್ಕೋಸ್ಕರ ವಿವಾದ ಎಬ್ಬಿಸುತ್ತಿರುವ ನಾಚಿಕೆಗೇಡಿನ ಕೆಲಸ ವಿದೇಶಿ ಪ್ರವಾಸಿಗರ ಮುಂದೆ ನಮ್ಮ ನಾಡಿನ ಗೌರವಕ್ಕೆ ಧಕ್ಕೆ ಬರುತ್ತದೆ. ಇಂಥ ಮನಸ್ಥಿತಿ ಹೊಂದಿದವರಿಗೆ ತಕ್ಕ ಪಾಠ ಕಲಿಸಬೇಕಿದೆ. ಬೂಕರ್ ಪ್ರಶಸ್ತಿಗೆ ಭಾಜನರಾದ ಪ್ರಥಮ ಭಾರತೀಯ ಅದರಲ್ಲೂ ವಿಶೇಷವಾಗಿ ಭಾರತೀಯ ಮಹಿಳೆಯಾಗಿದ್ದಾರೆ. ಈ ನಮ್ಮ ರಾಷ್ಟ್ರಕ್ಕೆ ಗೌರವ ತಂದ ಮಹಿಳೆಯನ್ನು ಅಭಿನಂದಿಸುವ ಯೋಗ್ಯತೆ ಇಲ್ಲದ ದೇಶದ ನಾಯಕರ ಮನಸ್ಥಿತಿ ಅಸಹ್ಯ ಹುಟ್ಟಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ರಿಕೆಟ್ ಆಟಗಾರ ಶತಕ ಹೊಡೆದಾಗ ಅಭಿನಂದಿಸುವ ಸರ್ವೋಚ್ಚ ನಾಯಕ ಟ್ವಿಟ್ ಮಾಡಿ ಅಭಿನಂದಿಸುವ ಈ ದೇಶಕ್ಕೆ ಪ್ರಥಮ ಬೂಕರ್ ಪ್ರಶಸ್ತಿ ತಂದ ಕೊಟ್ಟ ಮಹಿಳೆಯನ್ನು ಧರ್ಮದ ಆಧಾರದಲ್ಲಿ ನೋಡಿದ ನಿಜಕ್ಕೂ ಬುದ್ಧ, ಗಾಂಧಿ ಹುಟ್ಟಿದ ದೇಶದ ದುರಂತವೇ ಸರಿ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಮಹಿಳೆ ಭಾನು ಮುಸ್ತಾಕ ಈ ಬಾರಿ ನಾಡಹಬ್ಬ ದಸರಾವನ್ನು ಉದ್ಘಾಟಿಸುತ್ತಿರುವುದು ಸಂತಸ. ಈ ದೇಶಕ್ಕೆ ಸಂವಿಧಾನಕ್ಕೆ ಸಮಾನತೆಯನ್ನು ಸಾರುವ ಈ ಭಾರತ ಭೂಮಿಗೆ ಕುವೆಂಪು ಅವರು ಸಾರಿದ ಸರ್ವ ಜನಾಂಗದ ಶಾಂತಿ ತೋಟ ಕಲ್ಪನೆಗೆ ಹೇಳಿದ ಕನ್ನಡಿಯಾಗಿದೆ. ಈ ಮೂಲಕ ಈ ಬಾರಿ ನಾಡ ಹಬ್ಬಕ್ಕೆ ಹೆಚ್ಚು ಮೆರಗು ಬರುತ್ತದೆ” ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಗದಗ ಜಿಲ್ಲಾ ಪ್ರಧಾನ ಸಂಚಾಲಕರಾದ ಬಾಲರಾಜ್ ಅರಬರ ಹೇಳಿದರು..

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...