ಗದಗ | ಈ ದಿನ ವರದಿಯ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು: ಮೂಲ ಸ್ವರೂಪಕ್ಕೆ ತಿರುಗಿದ ಇಟಗಿ ಬಸ್ ನಿಲ್ದಾಣ

Date:

ಗದಗ ಜಿಲ್ಲೆಯ ರೋಣ ತಾಲೂಕಿನ ಇಟಗಿ ಬಸ್ ನಿಲ್ದಾಣವು ಅಧಿಕಾರಿಗಳ ನಿರ್ಲಕ್ಷದಿಂದ ಸ್ವಚ್ಛತೆಯಿಲ್ಲದೇ ಹಾಳಾಗಿತ್ತು. ಅನೈತಿಕ ಚಟುವಟಿಕೆಗಳು ಹಾಗೂ ಬಸ್ ನಿಲ್ದಾಣ ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟಿತ್ತು. ಇದನ್ನು ಗಮನಿಸಿದ ಈ ದಿನ ಡಾಟ್ ಕಾಮ್ “ಅಧಿಕಾರಿಗಳ ನಿರ್ಲಕ್ಷ : ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿಯನ್ನು ಡಿಸೆಂಬರ್ 11ರಂದು ಪ್ರಕಟಿಸಿತ್ತು.

ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಎಚ್ಚೆತ್ತ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗದ ಅಧಿಕಾರಿಗಳು, 24 ಗಂಟೆಯೊಳಗೆ ಸ್ವಚ್ಛ ಮಾಡಿಸಿದ್ದಲ್ಲದೇ, ಇಟಗಿ ಬಸ್ ನಿಲ್ದಾಣವನ್ನು ಸಾರ್ವಜನಿಕರ ಅನುಕೂಲವಾಗುವಂತೆ ವ್ಯವಸ್ಥೆ ಮಾಡಿದ್ದಾರೆ.

ಸರ್ಕಾರ ಪ್ರಯಾಣಿಕರ ಅನುಕೂಲಕ್ಕಾಗಿ ಲಕ್ಷಾಂತರ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸುತ್ತದೆ. ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಣೆ ಮಾಡಲು ನಿರಾಸಕ್ತಿ ತೋರುತ್ತಿರುವುದರಿಂದ ಅನೈತಿಕ ಚಟುವಟಿಕೆಗಳ ತಾಣವಾಗಿಯೂ ಮಾರ್ಪಡುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆಂದು ಬಸ್ ನಿಲ್ದಾಣ ನಿರ್ಮಿಸಿದರೆ, ಅದು ಉಪಯೋಗಕ್ಕೆ ಬಾರದ ಸ್ಥಿತಿಗೆ ತಲುಪಿತ್ತು. ಬಸ್ ನಿಲ್ದಾಣ ಅವ್ಯವಸ್ಥೆ ಆಗಿರುವುದರಿಂದ ಬೇರೆ ಕಡೆ ಬಸ್ಸುಗಳು ನಿಲ್ಲುತ್ತಿದ್ದವು. ಬಸ್ ನಿಲ್ದಾಣದ ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಕಡ್ಡಿ ಬೆಳೆದು ನಿಂತಿದ್ದವು. ಬಸ್ ನಿಲ್ದಾಣ ಉಪಯೋಗಕ್ಕೆ ಬಾರದೆ ಇರುವುದರಿಂದ ರೈತರು ಉಳ್ಳಾಗಡ್ಡಿ ಹಾಕಿದ್ದಾರೆ. ದನಕರುಗಳು ಬಿಡು ಬಿಟ್ಟಿರುತ್ತವೆ. ದುರ್ವಾಸನೆ ಬಿರುತ್ತಿತ್ತು. ಇದರಿಂದ ಬಸ್ ನಿಲ್ದಾಣ ಹಾಳು ಕೊಂಪೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಇಟಗಿ1

ಸರಿಯಾದ ನಿರ್ವಹಣೆ ಇಲ್ಲದೇ ಇರುವುದರಿಂದ ಈ ಬಸ್ ನಿಲ್ದಾಣ ಕುಡುಕರ ತಾಣವಾಗಿತ್ತು. ರಾತ್ರಿಯಾದರೆ ಕುಡುಕರು ಬಸ್ ನಿಲ್ದಾಣಕ್ಕೆ ಬಂದು ಕುಡಿಯುತ್ತಾರೆ. ಇದರಿಂದ ಎಲ್ಲೆಂದರಲ್ಲಿ ಸಾರಾಯಿ ಪಾಕೇಟುಗಳು, ಬಾಟಲಿಗಳು, ಪೌಚುಗಳು ಕಾಣುತ್ತಿದವು.

ಈ ದಿನ ಡಾಟ್ ಕಾಮ್ ಇಟಗಿ ಬಸ್ ನಿಲ್ದಾಣ ಅವ್ಯವಸ್ಥೆ ಕುರಿತು ವಿಸ್ತ್ರತ ವರದಿ ಪ್ರಕಟಿಸಿದ ಬೆನ್ನಲ್ಲೆ, ಸಂಬಂಧಪಟ್ಟ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ವಿಭಾಗದ ಅಧಿಕಾರಿಗಳ ಗಮನಕ್ಕೂ ತಂದಿತ್ತು. ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು, ಡಿ.12ರಂದು ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿದ್ದಾರೆ. ಹೊರಗಡೆಯೇ ನಿಲ್ಲುತ್ತಿದ್ದ ಪ್ರತಿಯೊಂದು ಬಸ್ಸುಗಳು ಈಗ ಬಸ್ ನಿಲ್ದಾಣದೊಳಗೆ ಬಂದು ಹೋಗುತ್ತಿವೆ. ಬಸ್ ನಿಲ್ದಾಣ ಸ್ವಚ್ಛಗೊಳಿಸಿರುವ ಫೋಟೋಗಳನ್ನು ಕೂಡ ಈ ದಿನ ಡಾಟ್ ಕಾಮ್ ಕಚೇರಿಗೂ ಕಳುಹಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

ಈ ಬಗ್ಗೆ ಈ ದಿನ ಡಾಟ್ ಕಾಮ್‌ನೊಂದಿಗೆ ಗ್ರಾಮ ಪಂಚಾಯತ್ ಸದಸ್ಯ ಸಿದ್ದಪ್ಪ ಮಾತನಾಡಿ, “ಈ ಹಿಂದೆ ಬಸ್ಸುಗಳು ಬಸ್ ನಿಲ್ದಾಣದ ಒಳಗಡೆಯೇ ಹಾದು ಹೋಗುತ್ತಿದ್ದವು. ಸರಿಯಾದ ನಿರ್ವಹಣೆ ಇಲ್ಲದೆ ಕಸ ಕಂಟಿ, ಬೆಳೆದು ಕುಡುಕರ ಅಡ್ಡವಾಗಿ ಮಾರ್ಪಟ್ಟಿತ್ತು. ಈ ದಿನ ಡಾಟ್ ಕಾಮ್‌ ವರದಿ ಬೆನ್ನಲೇ ಅಧಿಕಾರಿಗಳು ಎಚ್ಚೆತ್ತು ಇಡೀ ಬಸ್ ನಿಲ್ದಾಣವನ್ನು ಸ್ವಚ್ಛತೆಗೊಳಿಸಿ ಮೊದಲಿನಂತೆಯೇ ಆಗಿದೆ. ವರದಿ ಮಾಡುವ ಮೂಲಕ ಅಧಿಕಾರಿಗಳ ಗಮನಕ್ಕೆ ತಂದಿದ್ದಕ್ಕೆ ಈ ದಿನ ಡಾಟ್ ಕಾಮ್‌ಗೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಬಸ್ 16
ಬಸ್1 1
WhatsApp Image 2024 12 10 at 3.00.26 PM 1
ಬಸ್ ನಿಲ್ದಾಣ ಮೊದಲಿಗೆ ಇದ್ದ ಸ್ಥಿತಿ
SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...