ಗದಗ | ಸಮಯಕ್ಕೆ ಬಾರದ ತುರ್ತು ಆಂಬುಲೆನ್ಸ್; ವ್ಯಕ್ತಿ ಸಾವು, ಪ್ರತಿಭಟನೆ

Date:

 “ನರಗುಂದ ಪಟ್ಟಣದ ತಾಲೂಕ ಆಸ್ಪತ್ರೆಯ ತುರ್ತುವಾಹನ 108 ಸರಿಯಾದ ಸಮಯಕ್ಕೆ ಬಾರದೆ ಇರುವುದರಿಂದ ಹೃದಯಯಘಾತಗೊಂಡು ವ್ಯಕ್ತಿ ಸಾವನ್ನಪ್ಪಿದ್ದಾನೆ. ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಂಘಟನೆಗಳು ನರಗುಂದ ತಾಲ್ಲೂಕು ಆಸ್ಪತ್ರೆ ಎದುರು ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಪ್ರತಿಭಟನೆ ನಡೆಸಿದರು.

ನರಗುಂದ ಪಟ್ಟಣದ ವಿವೇಕಾನಂದ ಬಡಾವಣೆಯ ವ್ಯಕ್ತಿಯೊಬ್ಬರು ಆರೋಗ್ಯದಲ್ಲಿ ಏರುಪೇರಾದ ಸಂದರ್ಭದಲ್ಲಿ ತಾಲ್ಲೂಕು ಆಸ್ಪತ್ರೆಯ ತುರ್ತು ವಾಹನ 108 ಕರೆ ಮಾಡಿದಾಗ ಬೇರೆ ಕಡೆಗೆ ಪೇಷಂಟ್ ಕರೆದುಕೊಂಡು ಹೋಗಿದೆ” ಎಂದು ಸಿಬ್ಬಂದಿ ಹೇಳಿದ್ದಾರೆ.

ಆದರೆ ತುರ್ತು ವಾಹನವೂ ನರಗುಂದ ತಾಲೂಕ ಆಸ್ಪತ್ರೆ ಆವರಣದಲ್ಲಿ ಇದ್ದರೂ ಸುಳ್ಳು ಹೇಳಿದ್ದಾರೆ. ಸಮಯಕ್ಕೆ ಸರಿಯಾಗಿ ಬರದೇ ವೆಂಕಪ್ಪ ಲಕ್ಷ್ಮಪ್ಪ ಕಲಕೇರಿ ಎಂಬವರು ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರಿಯಾದ ಸಮಯಕ್ಕೆ ತುರ್ತು ವಾಹನ ಕಲ್ಪಿಸದ ಸಿಬ್ಬಂದಿಗಳಿಗೆ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಅಮಾನತುಗೊಳಿಸಬೇಕು. ಮೃತ ವ್ಯಕ್ತಿಯ  ಕುಟುಂಬಕ್ಕೆ ಪರಿಹಾರ ಒದಗಿಸಬೇಕು” ಎಂದು ಮೃತ ವ್ಯಕ್ತಿಯ ಸಂಬಂಧಿಕರು ದಲಿತ ಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಸಾಮಾಜಿಕ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನರಗುಂದ ಸಂಚಾಲಕರು ದತ್ತಾತ್ರೇಯ ಜೋಗನ್ನವರ್  ಹೋರಾಟಗಾರರು ನರಗುಂದ ತಾಲೂಕ ಆಸ್ಪತ್ರೆಯ ಅವ್ಯವಸ್ಥೆಯ ಮತ್ತು, ರೋಗಿಗಳಿಗೆ ಸಿಗಬೇಕಾದ ಔಷಧಿ ಉಪಚಾರದ ಬಗ್ಗೆ, ಸಿಬ್ಬಂದಿ ನಿರ್ಲಕ್ಷದ ಬಗ್ಗೆ, ಸ್ವಚ್ಛತೆ ಬಗ್ಗೆ ಆಕ್ರೋಶ” ಹೊರ ಹಾಕಿದರು.

ಬರುವ ದಿನಮಾನಗಳಲ್ಲಿ  ರೋಗಿಗಳಿಗೆ ಸರಿಯಾದ ಆರೋಗ್ಯ ವ್ಯವಸ್ಥೆ ಕಲ್ಪಿಸದೆ ಹೋದಲ್ಲಿ ಉಗ್ರ ಹೋರಾಟ ಮಾಡುವುದಾಗಿ” ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಡಿ ಎಸ್ ಎಸ್ ಮುಖಂಡರು ಸುರಕೋಡ್, ರವಿ ಚಿಂತಾಲ, ಶರಣಪ್ಪ ಛಲವಾದಿ, ವೀರೇಶ್ ಶಿರಹಟ್ಟಿ, ಕಾಜೆಸಾಬ್ ಕಿಲ್ಲೆದಾರ್, ಕಿರಣ್ ವಡಿಗೇರಿ, ಮೈಲಾರಪ್ಪ ಹಿರೇಮನಿ, ಹನುಮಂತ್ ಶಿರಹಟ್ಟಿ ಇನ್ನು ಮುಂತಾದವರು ಉಪಸ್ಥಿತರಿದ್ದರು 

ವರದಿ: ಗುರುನಾಥ ಕೆಂಗಾರಕರ ಸಿಟಿಜನ್ ಜರ್ನಲಿಸ್ಟ್ ನರಗುಂದ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...