ಗದಗ | ಉದ್ಯೋಗ ಖಾತ್ರಿ ದಿನಕ್ಕೆ ₹ 370, ದುಡಿಯುವ ಕೈಗೆ ಕೆಲಸ: ಧರ್ಮರ ಕೃಷ್ಣಪ್ಪ

Date:

“ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ. ಉದ್ಯೋಗ ಖಾತ್ರಿ ದಿನಕ್ಕೆ ₹ 370 ರೂ. ದುಡಿಯುವ ಕೈಗೆ ಕೆಲಸ, ಅಂತರ್ಜಲ ಮಟ್ಟ ಹೆಚ್ಚಳಕೆ ಪೂರಕವಾಗಿದೆ” ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು.

“ಕೆರೆ ಹೂಳೆತ್ತುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೊಳವೆ ಬಾವಿಗಳಲ್ಲಿ ನೀರಿನ ಏರಿಕೆ ಆಗಲಿದೆ. ಗ್ರಾಮಸ್ಥರು ತಮ್ಮ ಗ್ರಾಮದ ಕೆರೆಯ ಸಂರಕ್ಷಣೆಗೆ ಒತ್ತು ಕೊಡಬೇಕು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನರೇಗಾ ಯೋಜನೆಯು ಗ್ರಾಮೀಣ ಜನರ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ನರೇಗಾ ಯೋಜನೆಯಲ್ಲಿ ಕೆಲಸ ಒದಗಿಸಿ ಸ್ವಾವಲಂಬಿಗಳಾಗಿ ಮಾಡುವಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸಕ್ಕಾಗಿ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಒದಗಿಸುವ ಕಾರ್ಯ ಮಾಡಲಾಗುತ್ತಿದೆ” ಎಂದು ಹೇಳಿದರು.

“ನರೇಗಾ ಯೋಜನೆ ಅಡಿಯಲ್ಲಿ ಬೇಸಿಗೆ ಅವಧಿಯಲ್ಲಿ 60 ದಿನಗಳ ಕಾಲ ಕೆಲಸ ಪಡೆದು ಗರಿಷ್ಠ 22,200 ರೂ. ಗಳಿಕೆ ಮಾಡಬಹುದು. ಇದರಿಂದ ರೈತರು ತಮ್ಮ ಕುಟುಂಬದ ಅಗತ್ಯಕ್ಕೆ ಬಳಕೆಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮದ ಜನರು ಸ್ವಂತ ಊರಲ್ಲೇ ಕೂಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು 

ಈ ಸಂದರ್ಭದಲ್ಲಿ ದೊಡ್ಡೂರ ಗ್ರಾಪಂ ಅಧ್ಯಕ್ಷರಾದ ಚಂದ್ರಶೇಖರ ಈಳಗೇರ, ಗ್ರಾಪಂ ಸದಸ್ಯರಾದ ಮಲ್ಲೇಶ ಮಣ್ಣಮ್ಮನವರ, ಪ್ರಮುಖರಾದ ನಾನಪ್ಪ ಲಮಾಣಿ, ಗ್ರಾಪಂ ಕಾರ್ಯದರ್ಶಿ ಆರ್.ಕೆ. ಗುರುವಿನ, ಬಿಎಫ್ಟಿ ತೀರಕಪ್ಪ ಲಮಾಣಿ, ಮಲ್ಲಿಕಾರ್ಜುನ ತಳವಾರ ಇತರರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...