ಗದಗ | ಏಪ್ರಿಲ್ ಮೊದಲ ವಾರ ಉದ್ಯೋಗ ಖಾತ್ರಿ ಕೆಲಸ ಆರಂಭ

Date:

“ಬೇಸಿಗೆ ಕಾಲದಲ್ಲಿ ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರು ವಲಸೆ ಹೋಗುವ ಅವಶ್ಯಕತೆಯಿಲ್ಲ. ತಾಲೂಕಿನಲ್ಲಿ ಏಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಜನರಿಗೆ ಯೋಜನೆಯ ಸದುಪಯೋಗ ಮಾಡಿ ಕೊಡುವ ಕೆಲಸ ನಿಮ್ಮಿಂದ ಆಗಬೇಕು. ಎಂದು ಕಾಯಕ ಬಂಧುಗಳ ಸಭೆಯಲ್ಲಿ ತಾಲೂಕು ಪಂಚಾಯತ ಇಓ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ಗದಗ ಜಿಲ್ಲೆಯ ರೋಣ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಭಾ ಭವನದಲ್ಲಿ ಪಿಡಿಓ, ಕಾಯಕ ಬಂಧುಗಳ ಹಾಗೂ ನರೇಗಾ ಸಿಬ್ಬಂದಿಗೆ ಆಯೋಜಿಸಿದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು.

“ವರ್ಷದಲ್ಲಿ ನೂರು ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ನರೇಗಾ ವರದಾನವಾಗಲಿದೆ. ರೋಣ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಗಳಲ್ಲಿ ಆರಂಭ ಆಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇಸಿಗೆ ಅವಧಿಯ 60 ದಿನಗಳ ಕಾಲ ನರೇಗಾ ಯೋಜನೆಯಡಿ ಕೆಲಸ ಮಾಡಿದ್ರೆ ಕೂಲಿಕಾರರಿಗೆ 22,200 ರೂಪಾಯಿ ಸಿಗುತ್ತದೆ. ಕೂಲಿಕಾರರು ನರೇಗಾ ಯೋಜನೆಯಿಂದಾಗಿ ಬರುವ ಹಣವನ್ನು ಮುಂಗಾರಿನ ಕೃಷಿ ಭಿತ್ತನೆಯ ಕಾರ್ಯಕ್ಕೆ ಸದುಪಯೋಗಪಡಿಸಿಕೊಳ್ಳಲು ನೆರವಾಗಲಿದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೊಲೀಸ್ ನಿವೃತ್ತರಿಗೆ ಆರೋಗ್ಯಭಾಗ್ಯದ ಹೆಚ್ಚಿನ ಸೌಲಭ್ಯ ನೀಡಬೇಕು: ವೈ.ಡಿ.ಅಗಸಿಮನಿ

“ಬೇಸಿಗೆ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ನರೇಗಾ ಕೂಲಿಕಾರರಿಗೆ ಕೆಲಸದ ಸ್ಥಳದಲ್ಲಿಯೇ ನೀರು ಮತ್ತು ನೆರಳಿನ ವ್ಯವಸ್ಥೆ ಬಗ್ಗೆ ಕಾಳಜಿ ವಹಿಸಬೇಕು. ಆಯುಕ್ತಾಲಯದ ಆದೇಶದಂತೆ ಎನ್ಎಂಎಂಎಸ್ ಆ್ಯಪ್ನಲ್ಲಿ ಎರಡು ಸಾರಿ ಹಾಜರಾತಿ ಹಾಕುವುದನ್ನು ತಪ್ಪಿಸಬಾರದು” ಎಂದು ಚಂದ್ರಶೇಖರ ಬಿ ಕಂದಕೂರ ಪಿಡಿಓ ಗಳಿಗೆ ಸೂಚನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...