ಗದಗ | ಇಂಗ್ಲಿಷ್ ಪರಿಪೂರ್ಣ ಭಾಷೆ ಅಲ್ಲ, ಕನ್ನಡ ಪರಿಪೂರ್ಣ ಭಾಷೆಯಾಗಿದೆ: ಕಸಾಪ ಅಧ್ಯಕ್ಷ ಮಹೇಶ ಜೋಶಿ

Date:

“ಆಂಗ್ಲ ವ್ಯಾಮೋಹಕ್ಕೆ ಚಿಕ್ಕ ಮಕ್ಕಳು ಇಂಗ್ಲಿಷ್ ಭಾಷೆಯನ್ನು ಬಳಸುವ ದುಸ್ಥಿತಿಯಲ್ಲಿದ್ದೇವೆ. ಇಂಗ್ಲಿಷ್ ಲಿಪಿಗೂ ಭಾಷೆಗೂ ವ್ಯತ್ಯಾಸವಿದೆ. ಬರೆದಂತೆ ಇಂಗ್ಲಿಷ್ ಉಚ್ಚರಿಸಲು ಬರುವುದಿಲ್ಲ. ಕನ್ನಡವನ್ನು ನಾವು ಹೇಗೆ ಬರೆಯುತ್ತೇವೆಯೋ ಹಾಗೆಯೇ ಉಚ್ಚರಿಸುತ್ತೇವೆ. ಇಂಗ್ಲಿಷ್ ಪರಿಪೂರ್ಣ ಭಾಷೆ ಅಲ್ಲ, ಕನ್ನಡ ಪರಿಪೂರ್ಣ ಭಾಷೆಯಾಗಿದೆ” ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷರು ಮಹೇಶ ಜೋಶಿ ಹೇಳಿದರು.

ಗದಗ ಜಿಲ್ಲೆಯ ಗದಗ ತಾಲ್ಲೂಕು ಕುರ್ತಕೋಟಿ ಗ್ರಾಮದಲ್ಲಿ ಗದಗ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಂದರ್ಭದಲ್ಲಿ ತಾಯಿ  ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಮಾತನಾಡಿದರು.

“ಕನ್ನಡ ಭಾಷ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಕನ್ನಡದ ಮೊದಲ ರಾಜಮನೆತನ ಕದಂಬರು ಕನ್ನಡ ಭಾಷೆಯನ್ನು ಬೆಳೆಸಿದವರು, ಇಂದಿಗೂ ಕನ್ನಡಿಗರು ಬೆಳೆಸುತ್ತಾ ಬಂದಿದ್ದಾರೆ. ವರದಿಯ ಪ್ರಕಾರ ಜಗತ್ತಿನಲ್ಲಿ ಪರಿಪೂರ್ಣವಾದಂತಹ ಮೂರು ಭಾಷೆಗಳಲ್ಲಿ ನಮ್ಮ ಕನ್ನಡ ಭಾಷೆಯು ಒಂದು” ಎಂದು ಹೇಳುದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಕನ್ನಡ ಭಾಷೆಗೆ ತನ್ನದೇ ಆದ ಸ್ವಂತ ಲಿಪಿ, ಸಂಖ್ಯೆ ಇದೆ. ಹಾಗಾಗಿ ವಿನೋದಾ ಭಾವೆ ಅವರು ಕನ್ನಡ ಭಾಷೆಯನ್ನು’ಲಿಪಿಗಳ ರಾಣಿ ಎಂದು ಕರೆದರು” ಎಂದು ನೆನಪಿಸಿಕೊಂಡರು.

“ಯಾವುದೇ ಕಾರಣಕ್ಕೂ ಕನ್ನಡ ಶಾಲೆಗಳು ಮುಚ್ಚಬಾರದು. ಕನ್ನಡ ಅನ್ನದ ಭಾಷೆಯಾಗಬೇಕು. ಉದ್ಯೋಗದ ಭಾಷೆಯಾಗಬೇಬೇಕು. ಕನ್ನಡ ಸಾಹಿತ್ಯ ಪರಿಷತ್ತಿಗೆ ಕನಸು ಹೊತ್ತುಬಂದೆ. ಆದರೆ ನಿರಾಶೆಯಾಯಿತು. ಪೋಷಕರ ನಿರ್ಣಯವೆ ಅಂತಿಮ ಎಂದು ನ್ಯಾಯಾಲಯ ಹೇಳುದಾಗ ನಿರಾಶೆಯಾಯಿತು” ಎಂದು ಮಹೇಶ ಜೋಶಿ ಅವರು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಎನ್ಎ‌ಸ್ಎ‌ಸ್ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುತ್ತದೆ: ಡಾ. ಲಿಂಗರಾಜ ಅಂಗಡಿ

ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಎಚ್ ಕೆ ಪಾಟೀಲ್, ಸಮ್ಮೇಳನಾಧ್ಯಕ್ಷರು ಜೆ ಕೆ ಜಮಾದಾರ, ಜಿಲ್ಲಾ ಕಸಾಪ ಜಿಲ್ಲಾಧ್ಯಕ್ಷರು ವಿವೇಕಾನಂದಗೌಡ ಪಾಟೀಲ, ದಸಾಪ ರಾಜ್ಯಾಧ್ಯಕ್ಷರು ಅರ್ಜುನ ಗೋಳಸಂಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...