ಗದಗ | ನರಗುಂದ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳಿಗೆ ಇಒ ಭೇಟಿ; ಸಿದ್ಧತೆಗೆ ಸೂಚನೆ

Date:

ಗದಗ ಜಿಲ್ಲೆ ನರಗುಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನರಗುಂದ ವಿಧಾನಸಭಾ ಕ್ಷೇತ್ರದ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳಾದ ಸೋಮಶೇಖರ್ ಬಿರಾದರ್ ಅವರು ತಾಲೂಕಿನ ಲೋಕಸಭಾ ಚುನಾವಣೆಗಳ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲೂಕಿನ ಹುಣಶೀಕಟ್ಟಿ, ಕನಕಿಕೊಪ್ಪ ಹಾಗೂ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿದ ಸೋಮಶೇಖರ್ ಬಿರಾದರ್ ಅವರು, ಮತಗಟ್ಟೆ ಕೇಂದ್ರಗಳು ಸರಿಯಾದ ಗಾಳಿ ಬೆಳಕಿನ ವ್ಯವಸ್ಥೆ ಹೊಂದಿರುವುದರ ಬಗ್ಗೆ ಪರಿಶೀಲಿಸಿದರು. ಹುಣಶೀಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ‌ 145 ಮತ್ತು 146 ಸಂಖ್ಯೆಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮತಗಟ್ಟೆ ಕೇಂದ್ರಗಳಲ್ಲಿ ಮತದಾರರು ಯಾವುದೇ ಸಮಸ್ಯೆಗಳಿಲ್ಲದೆ ನಿರ್ಭೀತರಾಗಿ ತಮ್ಮ ಮತ ಚಲಾಯಿಸಲು ಸಕಲ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮತಗಟ್ಟೆ ಕೇಂದ್ರದ ಮುಂದೆ ರ‍್ಯಾಂಪ್ ವ್ಯವಸ್ಥೆ, ಕೇಂದ್ರದ ಒಳಗಡೆ ಫ್ಯಾನ್ ಮತ್ತು ವಿದ್ಯುತ್ ಸಂಪರ್ಕದ ವ್ಯವಸ್ಥೆ, ಚುನಾವಣೆ ಕರ್ತವ್ಯಕ್ಕೆ ಬರುವ ಅಧಿಕಾರಿಗಳು ಉಳಿದುಕೊಳ್ಳಲು ಕೊಠಡಿಯ ವ್ಯವಸ್ಥೆ, ಮತಗಟ್ಟೆ ಕೇಂದ್ರದಲ್ಲಿ ಶೌಚಾಲಯ ವ್ಯವಸ್ಥೆ, ಶೌಚಾಲಯದಲ್ಲಿ ನೀರಿನ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ವೇಳೆ ಜಗಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಕೇಂದ್ರ 144ರ ಬಾಗಿಲು ದುರಸ್ಥಿಗೊಂಡಿರುವುದು ಕಂಡುಬಂದಿತು. ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರುವ ಮೂಲಕ ಶೀಘ್ರದಲ್ಲೇ ಬಾಗಿಲನ್ನು ಬದಲಾಯಿಸಿ ಸರಿಪಡಿಸುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಕರ್ತವ್ಯದ ಜತೆಗೆ ಶಾಲಾ ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಸ್ವತಃ ಶಾಲೆಯಲ್ಲಿ ಬಿಸಿಯೂಟ ಸವಿಯುವ ಮೂಲಕ ಪರಿಶೀಲಿಸಿದರು. ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಹೈಸ್ಕೂಲ್ ಶಾಲೆಯಲ್ಲಿ ಮಕ್ಕಳ ಜೊತೆ ಇಒ ಸೋಮಶೇಖರ್ ಬಿರಾದರ್ ಅವರು ಬಿಸಿಯೂಟ ಸವಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ರೈತರಿಗೆ ಮೋಸ; ರೈತ ಸಂಘಟನೆ ಆರೋಪ

ಈ ವೇಳೆ ಅಡುಗೆ ಕೋಣೆಗೆ ತೆರಳಿ ಅಡುಗೆ ಸಾಮಾಗ್ರಿಗಳನ್ನು ಪರಿಶೀಲಿಸಿ ಅಡುಗೆಗೆ ಬಳಸುವ ತರಕಾರಿ, ಬೇಳೆ ಕಾಳುಗಳ ಗುಣಮಟ್ಟವನ್ನು ಪರಿಶೀಲಿಸಿದರು. ಮಕ್ಕಳಿಗೆ ನೀಡುವ ಅಡುಗೆಯಲ್ಲಿ ತರಕಾರಿಗಳನ್ನು ಹೆಚ್ಚಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ ಸರ್ಕಾರ ಮಕ್ಕಳ ಕಲಿಕೆಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಿದೆ. ಸರ್ಕಾರದ ಈ ಸೌಲಭ್ಯಗಳನ್ನು ಶಾಲಾ ಮಕ್ಕಳ ಸದುಪಯೋಗಪಡಿಸಿಕೊಂಡು ಕಲಿಕೆಯಲ್ಲಿ ಮೇಲುಗೈ ಸಾಧಿಸಬೇಕೆಂದು ಮಾರ್ಗದರ್ಶನ ಮಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...