“ಈಗಾಗಲೇ ರೈತರಿಗೆ ಸ್ವಲ್ಪ ಬೆಳೆ ನಷ್ಟ ಪರಿಹಾರ ನೀಡಲಾಗಿದೆ. ಖರ್ಚಿಗೂ ಈ ಪರಿಹಾರಕ್ಕೂ ಬಹಳಷ್ಟು ವ್ಯತ್ಯಾಸ ಇದೆ. ಕೂಡಲೇ ಬೆಳೆ ನಷ್ಟ ಪರಿಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ ರೈತರ ಖಾತೆಗೆ ಹಾಕಬೇಕು” ಎಂದು ರೈತ ಮುಖಂಡರು ಒತ್ತಾಯಿಸಿದರು.
ಗದಗ ಜಿಲ್ಲೆಯ ರೋಣ ಪಟ್ಟಣದ ತಹಶೀಲ್ದಾರ ಕಚೇರಿ ಎದುರಿಗೆ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆ ಪರಿಹಾರ ಕೊಡಬೇಕು ಹಾಗೂ ಕಬ್ಬು ಬೆಳೆಗಾರರ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ತಹಸೀಲ್ದಾರ್ ನಾಗರಾಜ್ ಕೆ ಅವರಿಗೆ ಮನವಿ ಸಲ್ಲಿಸಿದರು.
“ತಾಲ್ಲೂಕಿನಲ್ಲಿ ರೈತರು ಬೆಳೆದ ಎಲ್ಲ ಬೆಳೆಗಳು ಅತಿಯಾದ ಮಳೆಯಿಂದ ಹಾನಿಯಾಗಿದ್ದು, ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈಗ ಹಾಕಲಾಗಿರುವ ಪರಿಹಾರವು ರೈತರ ನಷ್ಟವನ್ನು ತುಂಬಿಸಲಾಗದು. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಬಬೆಳೆ ನಷ್ಟ ಪರಿಹಾರವನ್ನು ಗರಿಷ್ಠ ಪ್ರಮಾಣದಲ್ಲಿ ಕೊಡಬೇಕು ಎಂದು ರೈತರು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರೋಣ ತಹಶೀಲ್ದಾರ್ ಕಚೇರಿಯಲ್ಲಿ ನಿರ್ವಹಣೆ ಕೊರತೆ: ದುರ್ನಾತ ಬೀರುತ್ತಿವೆ ಶೌಚಾಲಯಗಳು
ಮನವಿ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷರು ಸಂಗಣ್ಣ ಪವಾಡಶೆಟ್ಟರ, ರೈತ ಮುಖಂಡರು ವಿರೂಪಾಕ್ಷಪ್ಪ ಗುರಿಕಾರ, ಮಹಾದೇವಗೌಡ ಪಾಟೀಲ್, ಮೇಘರಾಜ್ ಬಾವಿ, ಎಂ. ಬಿ. ಚವಡಿ, ಸಂಗಣ್ಣ ದಂಡಿನ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.





