ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

Date:

“ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಆಡಳಿತ ಈವರೆಗೆ ಸ್ಪಂದಿಸಿಲ್ಲ” ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿಕಾರಿದರು.

ಗದಗ ಜಿಲ್ಲಾಡಳಿತ ಕಚೇರಿ ಎದುರು ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬಗರ್ ಹುಕುಂ ಸಾಗುವಳಿದಾರರ ಅಹೋರಾತ್ರಿ ಧರಣಿಗೆ ಶುಕ್ರವಾರ ಬೆಂಬಲ ನೀಡಿ ಮಾತನಾಡಿದರು.

“ಜೆಡಿಎಸ್ ಪಕ್ಷ ಮಾತ್ರ ರೈತರ ಹಿತ ಕಾಯುತ್ತ ಬಂದಿದೆ. ಮುಂದೆಯೂ ಕಾಯುತ್ತದೆ. ರೈತರನ್ನು ಸಂತೈಸಲು ಕೇವಲ ಭಾಷಣ ಮಾಡಿ ಹೋದರೆ ಆಗುವುದಿಲ್ಲ. ರೈತರ ಬಗ್ಗೆ ಕಾಳಜಿ ಇದ್ದರೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ನೀಡಬೇಕು. ಚುನಾವಣೆಗೆ ಮುಂಚೆ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಭರವಸೆಯನ್ನು ಈಡೇರಿಸಬೇಕ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಗತ್ತಿನಲ್ಲಿ ಯಾವುದೇ ಸಮಸ್ಯೆ ಎದುರಾದರೂ ಅದು ಮೊದಲು ತಟ್ಟುವುದೇ ರೈತರಿಗೆ. ರೈತ ಎಲ್ಲವನ್ನು ನುಂಗಿಕೊಂಡು ಯಾವುದೇ ಜಾತಿ, ಮತ, ಭೇದವಿಲ್ಲದೆ ತನ್ನ ಕಾಯಕದ ಮೂಲಕ ಜನರ ಹೊಟ್ಟೆ ತುಂಬಿಸುತ್ತಿದ್ದಾನೆ. ರೈತರ ಸಮಸ್ಯೆ ಕುರಿತಾಗಿ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಈ ಹೋರಾಟಕ್ಕೆ ಜಯ ಸಿಗಲು ನೆರವಾಗುತ್ತೇವೆ” ಎಂದು ಭರವಸೆ ನೀಡಿದರು.

ಜೆಡಿಎಸ್ ಪಕ್ಷದ ಕಾನೂನು ಘಟಕದ ಜಿಲ್ಲಾ ಅಧ್ಯಕ್ಷ ಜೋಸೆಫ್ ಉದೋಜಿ ಮಾತನಾಡಿ, “ರೈತರು ಯಾವುದೇ ಕಾರಣಕ್ಕೂ ಎದೆಗುಂದದೆ ಮುನ್ನುಗ್ಗಬೇಕು. ರೈತರ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಸರ್ಕಾರ ಸ್ಪಂದಿಸಬೇಕು. ಯಾವುದೇ ರೀತಿಯ ಕಾನೂನು ಹೋರಾಟಕ್ಕೆ ಕಾನೂನಿನ ನೆರವು ನೀಡಲು ಜೆಡಿಎಸ್ ಪಕ್ಷ ಸದಾ ರೈತರೊಂದಿಗೆ ಇರುತ್ತದೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಿರಂತರ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾನಿ: ಸರ್ಕಾರದ ನೆರವಿನ ನಿರೀಕ್ಷೆಯಲ್ಲಿ‌ ಸಂತ್ರಸ್ತ ರೈತರು

ಜೆಡಿಎಸ್‌ ಮುಖಂಡರಾದ ಬಸವರಾಜ ಅಪ್ಪಣ್ಣವರ, ರಮೇಶ್ ಹುಣಸಿಮರದ, ಸಂತೋಷ್ ಪಾಟೀಲ, ಪ್ರಫುಲ್ ಪುಣೇಕರ, ಜಿ.ಕೆ. ಕೊಳ್ಳಿಮಠ, ಶರಣಪ್ಪ ಹೂಗಾರ, ಸಿದ್ದಯ್ಯ ಹೊಂಬಾಳಿಮಠ, ಮಂಜುಳಾ ಮೇಟಿ, ರಾಜೇಶ್ವರಿ ಹೂಗಾರ, ಶರಣಪ್ಪ ತೂಲಿ, ಅಭಿಷೇಕ್ ದೇಸಾಯಿ, ಲಲಿತಾ ಕಲ್ಲಪ್ಪನವರ, ಅಭಿಷೇಕ್ ಕಂಬಳಿ, ಜಯರಾಜ ವಾಲಿ, ರೈತ ಮುಖಂಡರಾದ ಬಸವಣೇಪ್ಪ ಚಿಂಚಲಿ, ಎನ್.ಟಿ. ಪೂಜಾರ ಸೇರಿದಂತೆ ಜಿಲ್ಲೆಯ ಹಲವು ರೈತ ಸಂಘಟನೆಯ ಮುಖಂಡರು ಮತ್ತು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...