ಗದಗ | ರೈತರ ಬದುಕು ಸಂಕಷ್ಟ; ಬೆಳೆ ಪರಿಹಾರ ನೀಡುವಂತೆ ರೈತ ಸಂಘ ಮನವಿ

Date:

“ಜಿಲ್ಲಾದ್ಯಂತ ರೈತರು ಸಾಲಮಾಡಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ಖರ್ಚು ಮಾಡಿದ್ದು, ಉತ್ತಮವಾಗಿ ಬೆಳೆಗಳು ಬೆಳೆದಿದ್ದವು. ನಿರಂತರ ಮಳೆಗೆ ಸಂಪೂರ್ಣ ಬೆಳೆ ಹಾನಿ ಆಗಿದೆ. ರೈತರು ಅಪಾರ ಪ್ರಮಾಣದಲ್ಲಿ ನಷ್ಟವನ್ನು ಅನುಭವಿಸುತ್ತಿದ್ದಾರೆ. ರೈತರು ಬದುಕು ಸಂಕಷ್ಟದಲ್ಲಿದ್ದು ಶೀಘ್ರವಾಗಿ ರೈತರಿಗೆ ಬೆಳೆ ಪರಿಹಾರ ನೀಡಬೇಕು” ಎಂದು ರೈತ ಮುಖಂಡರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಮುತ್ತನಗೌಡ ಭ. ಚೌಡರಡ್ಡಿ ನೇತೃತ್ವದಲ್ಲಿ ನಿರಂತರ ಮಳೆಯಿಂದ ರೈತರಿಗೆ ನಷ್ಟ ಆಗಿದ್ದು, ಪರಿಹಾರ ನೀಡುವಂತೆ ಗದಗ ಪಟ್ಟಣದಲ್ಲಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ರೈತ ಸಂಘದ ಅಧ್ಯಕ್ಷರು ಮುಟ್ಟಗೌಡ ಚೌಡರೆಡ್ಡಿ ಮಾತನಾಡಿ, ರೈತರು ಈ ನಾಡಿನ ಬೆನ್ನೆಲುಬು, ಆದರೆ ಆ ಬೆನ್ನೆಲುಬಿಗೆ ಆಸರೆ ಇಲ್ಲದಂತಾಗಿದೆ. ಕಷ್ಟಪಟ್ಟು, ಸಾಲ ಮಾಡಿ ರೈತ ಬೆಳೆದ ಬೆಳೆ ಅಕಾಲಿಕ ಮಳೆಯಿಂದ ಸಾಕಷ್ಟು ಹಾನಿ ಆಗಿದೆ. ಕೂಡಲೇ ರೈತರಿಗೆ ಬೆಳೆ ಹಾನಿ ಪರಿಹಾರ ಕೊಡಬೇಕು” ಎಂದು ಒತ್ತಾಯಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡರು ಮೇಘರಾಜ್ ಬಾವಿ ಮಾತನಾಡಿ, “ಈ ಸರಿ ಮುಂಗಾರು ಮಳೆಯಿಂದ ರೈತರಿಗೆ ಅತೀ ಹೆಚ್ಚಿನ ಪ್ರಮಾಣದಲ್ಲಿ ನಷ್ಟ ಆಗಿದೆ. ನಿರಂತರ ಮಳೆಗೆ ಹೆಸರು ಬೂದು ರೋಗ ಬಂದಿದೆ, ಕಪ್ಪಾಗಿವೆ. ಇವನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋದರೆ ಎರಡು ಸಾವಿರ, ಮೂರು ಸಾವಿರ ಕೇಳ್ತಿದ್ದಾರೆ. ರೈತ ಒಂದು ಎಕರೆಗೆ ಖರ್ಚು ಮಾಡಿದಷ್ಟು ಬೆಳೆದ ಬೆಳೆಯಿಂದ ಬರುವುದಿಲ್ಲ ಎಂದರೆ ರೈತ ಹೇಗೆ ತನ್ನ ಕುಟುಂಬವನ್ನು ಸಾಗಿಸಬೇಕು. ಹಾಗಾಗಿ ಸರಕಾರ ಕೂಡಲೇ ಎಕರೆಗೆ ನಲವತ್ತು ಸಾವಿರ ರೂಪಾಯಿ ಬೆಳೆ ನಷ್ಟ ಪರಿಹಾರ ಕೊಡಬೇಕು” ಎಂದು ಒತ್ತಾಯಿಸಿದರು.

ಈ ಮನವಿ ಸಂದರ್ಭದಲ್ಲಿ ರೈತ ಮುಖಂಡರು ಸಂಗಣ್ಣ ದಂಡಿನ, ಅಶೋಕ ಹಿರೇಮಠ, ಎಸ್. ಎಮ್. ಪರಡ್ಡಿ, ಸಂಗಣ್ಣ ಪವಾಡಶೆಟ್ಟಿ, ಧರ್ಮಣ್ಣ ಬೂಸಗೌಡರ, ಬಸವರಾಜ ಹೊಸಮನಿ, ಚಂದ್ರಶೇಖರಯ್ಯ ವಸ್ತçದ, ಸಂಪತಕುಮಾರ ಅಮರನಾಥ, ಮಹೇಶ ಹಿರೇಮಠ, ಎಂ. ಎಸ್. ಹಡಪದ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...