ಗದಗ |ಮಗ ಸಾಲ ಮಾಡಿದ್ದಕ್ಕೆ ತಾಯಿಗೆ ಫೈನಾನ್ಸ್‌ ಕಂಪನಿ ಕಿರುಕುಳ; ಕಚೇರಿಯಲ್ಲಿ ಕೂಡಿ ಹಾಕಿ ಹಿಂಸೆ

Date:

ಫೈನಾನ್ಸ್‌ ಕಂಪನಿಯಲ್ಲಿ ಮಗ ಮಾಡಿದ್ದ ಸಾಲ ತೀರಿಸುವಂತೆ ಕಂಪನಿಯ ಸಿಬ್ಬಂದಿಗಳು ಸಾಲಗಾರನ ತಾಯಿಗೆ ಕಿರುಕುಳ ನೀಡಿದ್ದು, ಇಡೀ ದಿನ ಕಚೆರಿಯಲ್ಲಿ ಕೂಡಿ ಹಾಕಿ ಹಿಂಸಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯ ಧೋರಣೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಕಂಪನಿ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಬಜಾಜ್ ಫೈನಾನ್ಸ್‌ ಕಂಪನಿಯಲ್ಲಿ ಗದಗ ನಗರದ ಡಂಬಳ ನಾಕಾ ನಿವಾಸಿ ಹೂವಯ್ಯ ಅವರು 2021ರಲ್ಲಿ 1.30 ಲಕ್ಷ ರೂ. ಸಾಲಪಡೆದಿದ್ದರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಹೂವಯ್ಯ, ಪ್ರತಿ ತಿಂಗಳು ಸಮಯಕ್ಕ ಸರಿಯಾಗಿ ಮಾಸಿಕ ಕಂತನ್ನು (ಇಎಂಐ) ಪಾವತಿಸುತ್ತಿದ್ದರು. ಆದರೆ, ಕಳೆದ ಎರಡು ತಿಂಗಳಿನಿಂದ ಕಂತು ಪಾವತಿಸಿರಲಿಲ್ಲ ಎಂದು ತಿಳಿದುಬಂದಿದೆ.

ಎರಡು ತಿಂಗಳಿನಿಂದ ಹೂವಯ್ಯ ಇಎಂಐ ಪಾವತಿ ಮಾಡದ ಕಾರಣಕ್ಕೆ, ಡಿಸೆಂಬರ್ 26ರಂದು ಬೆಳ್ಳಂಬೆಳಗ್ಗೆ ಹೂವಯ್ಯ ಅವರ ಮನೆಗೆ ನುಗ್ಗಿದ ಗದಗ ಬಜಾಜ್ ಫೈನಾನ್ಸ್‌ ಕಂಪನಿಯ ಸಿಬ್ಬಂದಿಗಳು ಹೂವಯ್ಯ ಅವರ ತಾಯಿ ಗಂಗವ್ವ ಅವರನ್ನು ಕಚೇರಿಗೆ ಕರೆದೊಯ್ದು ಕೂಡಿ ಹಾಕಿದ್ದಾರೆ. ಇಡೀ ದಿನ ಕಚೇರಿಯಲ್ಲಿಯೇ ಕೂರಿಸಿಕೊಂಡು ಕಿರುಕುಳ ನೀಡಿದ್ದಾರೆ. ನನ್ನನ್ನು ಹೊರಗೆ ಬಿಡಿ, ಸಾಲ ಮಾಡಿಯಾದರೂ ಕಂತು ಕಟ್ಟುತ್ತೇನೆಂದು ಗಂಗವ್ವ ಕೇಳಿಕೊಂಡರೂ ಸಿಬ್ಬಂದಿಗಳು ಆಕೆಯನ್ನು ಹೊರಗೆ ಕಳಿಸಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಗವ್ವ ಅವರನ್ನು ಇಡೀ ದಿನ ಕಚೇರಿಯಲ್ಲಿ ಕೂಡಿಹಾಕೊಂಡಿದ್ದ ವಿಷಯ ತಿಳಿದ ಸ್ಥಳೀಯರು ಬಜಾಜ್ ಫೈನಾನ್ಸ್‌ ಕಂಪನಿಯ ಕಚೇರಿಗೆ ತೆರಳಿ, ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಫೈನಾನ್ಸ್‌ ಕಂಪನಿಗಳು ಬಡ ಜನರಿಗೆ ಕಿರುಕುಳ ನೀಡುತ್ತಿವೆ. ಈ ಕಂಪನಿಗಳ ಮೇಲೆ ಪೊಲೀಸ್‌ ಇಲಾಖೆ ಕ್ರಮ ಕೈಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...