ಗದಗ | ಅರಣ್ಯ ಸಂರಕ್ಷಕರು ಹಸಿರಿನ ಹರಿಕಾರರು: ನ್ಯಾ.ಗಂಗಾಧರ ಎಂ ಸಿ

Date:

ನಾಡಿನ ಹಸಿರಿನ ನಿಜವಾದ ಹರಿಕಾರರು ಅರಣ್ಯ ಸಂರಕ್ಷಕರು ಎಂದು ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಗಂಗಾದರ ಎಂ ಸಿ ಅವರು ಹೇಳಿದರು.

ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ಅರಣ್ಯ ಇಲಾಖೆಯಿಂದ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಜರುಗಿದ ರಾಷ್ಟೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, “ನಾಡಿನ ಅರಣ್ಯ ಸಂಪತ್ತನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಕರ್ನಾಟಕ ಅರಣ್ಯ ಇಲಾಖೆ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾ ಅವರ ತ್ಯಾಗ ಬಲಿದಾನವನ್ನು ನಾವೆಲ್ಲರೂ ನೆನೆಯುವ ಮೂಲಕ ಅರಣ್ಯ ಸಂರಕ್ಷಣೆಗೆ ಶ್ರಮಿಸಿದ ಸರ್ವರಿಗೂ ಆಭಾರಿಗಳಾಗಿರೋಣ. ಅರಣ್ಯ ಸಂರಕ್ಷಣೆಯಲ್ಲಿ ಹುತಾತ್ಮರಾದವರ ತ್ಯಾಗ ಬಲಿದಾನ ರಾಷ್ಟ್ರಕ್ಕೆ ಆದ ನಷ್ಟ. ನೈಸರ್ಗಿಕ ಸಂಪತ್ತು ರಕ್ಷಣೆ ಕಾರ್ಯ ನಮ್ಮೆಲ್ಲರದ್ದು. ಪ್ರಕೃತಿ ಇಂದು ನಮಗೆಲ್ಲ ಶುದ್ಧ, ಸುಂದರ ವಾತಾವರಣ ಕಲ್ಪಿಸಿದೆ. ಇದರ ರಕ್ಷಣೆಯಲ್ಲಿ ಇಲಾಖೆಯ ಅಧಿಕಾರಿ ಸಿಬ್ಬಂದಿಗಳ ಶ್ರಮ ಅಪಾರವಾಗಿದೆ” ಎಂದು ಅಭಿಪ್ರಾಯ ಪಟ್ಟರು.

“ಇಂದು ಹುತಾತ್ಮರನ್ನು ಕೇವಲ ಸ್ಮರಿಸುವ ದಿನವಲ್ಲ. ಜೊತೆಗೆ ನಾವೆಲ್ಲರೂ ಪರಿಸರ ಸಂರಕ್ಷಣೆ ಹೊಣೆ ಹೊರುವ ದಿನ. ನಿರಂತರವಾಗಿ ನಡೆಯುವ ಅಕ್ರಮ ಪ್ರಾಣಿ ಬೇಟೆ ತಡೆಯಬೇಕು. ಪ್ರಕೃತಿಯಲ್ಲಿನ ಒಂದಿಲ್ಲೊಂದು ಲಾಭ ಪಡೆಯುವ ನಾವೆಲ್ಲರೂ ಪ್ರಕೃತಿ ಸಂರಕ್ಷಣೆ ಮಾಡುವ ಹೊಣೆಗಾರಿಕೆ ನಿರ್ವಹಿಸೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್ ವೇಳೆ ಅದೆಷ್ಟೋ ಜನರು ಆಕ್ಸಿಜನ್ ಕೊರತೆಯಿಂದ ಅಸು ನೀಗಿದರು. ಅಂದೇ ನಮಗೆಲ್ಲ ಅರಿವಾದದ್ದು ಶುದ್ಧ ಗಾಳಿಯ ಬೆಲೆ ಅಧಿಕವಾಗಿದೆ ಎಂದು. ಉತ್ತಮ ಪ್ರಕೃತಿಯನ್ನು ಮಲಿನಗೊಳಿಸದೇ ಮುಂದಿನ ಭವಿಷ್ಯಕ್ಕೆ ಮೀಸಲಿಡುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪ್ರಕೃತಿಯಲ್ಲಿನ ಇಂತಹ ಶುದ್ಧ ಗಾಳಿ ನಮಗೆಲ್ಲ ಉಚಿತವಾಗಿ ದೊರೆಯುತ್ತದೆ. ಈ ಪ್ರಕೃತಿಯ ಋಣ ತೀರಿಸುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಿದೆ. ಪ್ರಕೃತಿ ನಮಗೆ ಉಚಿತವಾಗಿ ಆಹಾರ ಶುದ್ಧ ಗಾಳಿ ವಾತಾವರಣ ನೀಡುತ್ತಿದೆ. ಅದನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯಕ್ಕೆ ನಾವೆಲ್ಲರೂ ಮುಂದಾಗೋಣ” ಎಂದರು.

ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಮಾತನಾಡಿ, “ನಾವಿಂದು ಪರಿಸರ ಬದಲಾವಣೆಯಿಂದಾಗುವ ಆಗುವ ಅನಾಹುತಗಳನ್ನು ಎದುರಿಸುತ್ತಿದ್ದೇವೆ. ಪರಿಸರ ಸಂರಕ್ಷಣೆಯ ಕಾಳಜಿ ಹೊಣೆಗಾರಿಕೆಯನ್ನು ನಿಭಾಯಿಸುತ್ತಿಲ್ಲ. ಮನುಷ್ಯನನ್ನು ಬಿಟ್ಟು ಎಲ್ಲವನ್ನೂ ಸಹ ಪರಿಸರವೆಂದು ಪರಿಗಣಿತವಾಗುತ್ತದೆ. ಅಂತಹ ಪರಿಸರದ ಮೇಲೆ ಮಾನವನ ಅತಿಯಾದ ದುರಾಸೆಯಿಂದಾಗಿ ಹಾನಿ ಮಾಡುತ್ತಾ ಪ್ರಕೃತಿ ಅಸಮತೋಲನಕ್ಕೆ ಕಾರಣರಾಗಿದ್ದೇವೆ. ಮನುಷ್ಯನ ಅಗತ್ಯತೆಗಳು ಅಗಾಧವಾಗಿ ಪರಿಸರ ಸಂಪತ್ತು ವಿನಾಶದತ್ತ ಸಾಗಿದೆ. ಅರಣ್ಯ ಹುತಾತ್ಮರು ಪ್ರಾಣಿಗಳಿಂದ ಆದವರು ಕಡಿಮೆ. ಮನುಷ್ಯರಿಂದಲೇ ಹತ್ಯೆಯಾದವರ ಸಂಖ್ಯೆ ಅಧಿಕವಾಗಿದೆ. ಪರಿಸರ ಸಂರಕ್ಷಣೆಯೊAದಿಗೆ ನಾಳಿನ ಭವಿಷ್ಯದ ಪೀಳಿಗೆಗೆ ಉತ್ತಮ ಪ್ರಕೃತಿ ನೀಡುವ ವಾಗ್ದಾನ ನಮ್ಮದಾಗಲಿ” ಎಂದು ನುಡಿದರು.

ಇದನ್ನೂ ಓದಿ: ಗದಗ | ಕ್ರೀಡೆಗಳಿಂದ ಮಾನಸಿಕ-ದೈಹಿಕ ಸದೃಢತೆ ಸಾಧ್ಯ: ಡಿಸಿ ಶ್ರೀಧರ್

ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಮಾತನಾಡಿ, “ನಮ್ಮ ಉತ್ತಮ ಭವಿಷ್ಯಕ್ಕಾಗಿ ತಮ್ಮ ತ್ಯಾಗ ಬಲಿದಾನದ ಮೂಲಕ ಅರಣ್ಯ ಸಂರಕ್ಷಣೆ ಮಾಡಿದವರನ್ನು ನೆನೆಯೋಣ. ಅರಣ್ಯ ಸಂಪತ್ತು ಕೇವಲ ಮರಗಳು, ಪ್ರಾಣಿಗಳಷ್ಟೇ ಅಲ್ಲ. ಅರಣ್ಯ ಇಲ್ಲದೇ ಮಳೆಯೂ ಇಲ್ಲ. ಜೀವವೂ ಇಲ್ಲ. ಜೀವನವೂ ಇಲ್ಲ ಎಂಬುದನ್ನು ನಾವೆಲ್ಲರೂ ಅರಿತು ಸಂರಕ್ಷಣೆ ಕಾರ್ಯದಲ್ಲಿ ನಮ್ಮದೇ ಆದ ಕೊಡುಗೆ ನೀಡೋಣ ಎಂದರು. ಅರಣ್ಯ ಸಂರಕ್ಷಣೆಯಲ್ಲಿ ಅನೇಕರ ತ್ಯಾಗ ಬಲಿದಾನ ಸಮರ್ಪಣಾ ಮನೋಭಾವದಿಂದಾಗಿ ಇಂದು ಅರಣ್ಯಗಳು ಜೀವಂತವಾಗಿವೆ. ಅದಕ್ಕಾಗಿಯೇ ನಾವೆಲ್ಲರೂ ಜೀವಂತವಾಗಿದ್ದೇವೆ ಎಂಬುದನ್ನು ಮರೆಯಬಾರದು. ರಾಜ್ಯದಲ್ಲಿ 1966 ರಿಂದ ಈವರೆಗೆ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದ 62 ನೌಕರರು ಹುತಾತ್ಮರಾಗಿದ್ದು ಅವರೆಲ್ಲರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ. ಬಿಂಕದಕಟ್ಟಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕ ನಿರ್ಮಾಣಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು” ಎಂದರು.

ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಮುಖ್ಯ ಅತಿಥಿಗಳಿಂದ ಹಾಗೂ ವಿವಿಧ ರಂಗಗಳ ಪ್ರತಿನಿಧಿಗಳಿಂದ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಲಾಯಿತು. ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದವರಿಗೆ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಮೌನಾಚರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ ವರಿಷ್ಟಾದಿಕಾರಿ ಮಹಾಂತೇಶ ಸಜ್ಜನರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಚಂದ್ರಹಾಸ ವೆರ್ಣೆಕರ್ , ವಾರ್ತಾಧಿಕಾರಿ ವಸಂತ ಮಡ್ಲೂರ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಪ್ರಕಾರ ಪವಾಡಿಗೌಡ್ರ, ಮೇಘನಾ ಎಚ್, ವೀರೇಂದ್ರ ಮರಿಸಬಣ್ಣವರ, ಮಂಜುನಾಥ ಮೇಗಳಮನಿ, ರಾಮಪ್ಪ ಪೂಜಾರ, ಸ್ನೇಹಾ ಕೊಪ್ಪಳ, ವೀರಭದ್ರಪ್ಪ ಕುಂಬಾರ ಅನ್ವರ ಕೊಲ್ಹಾರ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...