ಗದಗ | ಸಂವಿಧಾನ ರಕ್ಷಣೆ ಮಾಡಬೇಕು: ಹಸನ ತಟಗಾರ

Date:

“ಸಂವಿಧಾನಕ್ಕೆ ದಕ್ಕೆ ತರುತ್ತಿರುವ ಮೂಲಭೂತವಾದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ” ಎಂದು ಅಂಜುಮನ್ ಇಸ್ಲಾಂ ಕಮೀಟಿ ಅಧ್ಯಕ್ಷ ಹಸನಸಾಬ ತಟಗಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಅಂಜುಮನ್ ಉರ್ದು ಕಾನ್ವೆಂಟ್ ಸ್ಕೂಲ್ ನಲ್ಲಿ 76 ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

“ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರಪಂಚದ ಬೇರೆ ಬೇರೆ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ, ಭಾರತಕ್ಕೆ ಅದ್ಭುತವಾದ ಸಂವಿಧಾನ ರಚನೆ ಮಾಡಿಕೊಟ್ಟಿದ್ದಾರೆ. ಪ್ರಜಾಪ್ರಭುತ್ವವನ್ನು ಧರ್ಮ ಎಂದುಕೊಂಡು ಸಂವಿಧಾನವನ್ನು ಗೌರವಿಸಬೇಕು. ಸಂವಿಧಾನದಲ್ಲಿ ಅಡಕವಾಗಿರುವ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪಾಲನೆ ಮಾಡಬೇಕು, ಮೂಲಭೂತದಿಗಳಿಂದ ಸಂವಿಧಾನ ರಕ್ಷಣೆ ಮಾಡಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಕಾರ್ಯದರ್ಶಿಗಳಾದ ದಾವಲಸಾಬ ತಾಳಿಕೋಟಿ, ಮಾಸುಮಲಿ ಮದಗಾರ ಮಾತನಾಡಿ, “ದೇಶದಲ್ಲಿ ಜಾತಿ–ಧರ್ಮದ ಹೆಸರಿನಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುವ ಮೂಲಕ ಸಂವಿಧಾನ ಮೂಲ ಆಶಯಗಳಿಗೆ ಧಕ್ಕೆ ತರಲಾಗುತ್ತಿದೆ. ಸಂವಿಧಾನದಲ್ಲಿ ಜಾತ್ಯತೀತ ರಾಷ್ಟ್ರ ಎಂಬ ಉಲ್ಲೇಖವಿದೆ. ಆದರೆ, ಇಂದು ದೇಶದಲ್ಲಿ ಇದಕ್ಕೆ ವಿರುದ್ಧವಾಗಿ ಧರ್ಮದ ಆಧಾರದಲ್ಲಿ ಆಡಳಿತ ನಡೆಯುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜಾತಿ–ಧರ್ಮಕ್ಕಿಂತ ಸಂವಿಧಾನವೇ ಮುಖ್ಯ. ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವ ಎಂಬ ಸಂವಿಧಾನದ ಮೂಲ ಆಶಯಗಳನ್ನು ರಕ್ಷಣೆ ಮಾಡಬೇಕಿದೆ. ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

ಅಂಜುಮನ್ ಇಸ್ಲಾಂ ಕಮೀಟಿ ಕಾರ್ಯದರ್ಶಿ ಫಯಾಜ್ ತೋಟದ, ಭಾಷಾ ಮುದಗಲ್ಲ ಮಾತನಾಡಿದರು. ಜಾಮೀಯ ಮಸೀದಿ ಮೌಲಾನರಾದ ಶಹೀದ್ ರಜಾ ಸಾನಿಧ್ಯವನ್ನು ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಶಾಲಾ ವಿಧ್ಯಾರ್ಥಿಗಳಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಕಾರ್ಯಕ್ರಮದಲ್ಲಿ ಮುಖಂಡರು ನಾಸೀರ ಸುರಪುರ, ದಾದೇಸಾಬ ಹಣಗಿ, ಇಮ್ರಾನ ಅತ್ತಾರ, ಮುಸ್ತಾಕ ಅಹ್ಮದ ಅಕ್ಕಿ, ಆರೀಫ್ ಮನಿಯಾರ, ದಾವಲಸಾಬ ಡಾಲಾಯತ, ಖಾಸಿಂಸಾಬ ಮುಚ್ಚಾಲಿ, ಶಾಮೀದ ಮಾಲ್ದಾರ, ಅಬ್ಬಾಸಲಿ ನಿಶಾನದಾರ ಮುಖ್ಯ ಶಿಕ್ಷಕಿ ಮಜನಬಿ ಹಣಗಿ, ಫಾತೀಮಾ ಕಡ್ಲಿಮಟ್ಟಿ ಸೇರಿದಂತೆ ಶಾಲಾ ಮಕ್ಕಳು,  ಪಾಲಕರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...