ಗದಗ | ಸ್ಲಂ ಜನರ ಮೂಲಭೂತ ಹಕ್ಕುಗಳಿಗೆ ಸರಕಾರ ಮೊದಲ ಆದ್ಯತೆ ಕೊಡಬೇಕು: ಎಸ್ ವಿ ಸಂಕನೂರು

Date:

“ರಾಜ್ಯದ ಸ್ಲಂ ಜನರ ಮೂಲಭೂತ ಹಕ್ಕುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೊದಲು ಆದ್ದತೆ ನೀಡಬೇಕು. ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಕೂಡಾ ಮನುಷ್ಯರೇ ಸರ್ಕಾರಗಳು ನಾಗರಿಕ ಸಮಾಜದಲ್ಲಿ ಸ್ಲಂ ನಿವಾಸಿಗಳಿಗೆ ಸಂವಿಧಾನ ಬದ್ಧ ಹಕ್ಕುಗಳನ್ನು ನೀಡುವ ಮೂಲಕ ಸಮಾನ ಅವಕಾಶಗಳನ್ನು ದೊರಕಿಸಿಕೊಡುವ ವಾತಾವರಣ ನಿರ್ಮಾಣ ಮಾಡಬೇಕು” ಎಂದು ಸ್ಲಂ ಸಮಾವೇಶ ಉದ್ಘಾಟಿಸಿ ವಿ.ಪ ಸದಸ್ಯ ಪ್ರೊ. ಎಸ್ ವಿ ಸಂಕನೂರು ಮಾತನಾಡಿದರು.

ಗದಗ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ ಭವನದಲ್ಲಿ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಾವಿತ್ರಿಬಾ ಪುಲೆ ಮಹಿಳಾ ಸಮಿತಿ ಸಹಕಾರದಲ್ಲಿ, ಜಿಲ್ಲಾ ಸ್ಲಂ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಸ್ಲಂ ಜನರ ಸಮಾವೇಶ ಹಾಗೂ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಸ್ಪಂ ಸಮಿತಿ ಅಧ್ಯಕ್ಷ ಇಮ್ಮಿಯಾಜ ಆರ್.ಮಾನ್ವಿ ಪಾಸ್ತಾವಿಕವಾಗಿ ಮಾತನಾಡಿ, “ನಮ್ಮ ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಕಲಾವಿದರನ್ನು ನಮ್ಮ ವೇದಿಕೆಯ ಮುಖಾಂತರ ಹೊರ ಜಗತ್ತಿಗೆ ಪರಿಚಯಸುವ ಕೆಲಸ ಈ ಸ್ಲಂ ಹಬ್ಬದ ಮೂಲಕ ಮಾಡಲಾಗುತ್ತಿದೆ. ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯ ಸಹಕಾರದಲ್ಲಿ ವಿಭಾಗ ಮಟ್ಟದಲ್ಲಿ ಬರುವ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೊಳಗೇರಿಗಳ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳಿಗೆ ನಿರಂತರ ಹೋರಾಟಗಳನ್ನು ನಡೆಸುವ ಮುಖಾಂತರ ಕೊಳಗೇರಿ ಪ್ರದೇಶದ ಜನರು ಘನತೆಯಿಂದ ಬದುಕು ನಡೆಸಲು ವಾತಾವರಣ ನಿರ್ಮಾನ ಮಾಡಲಾಗುತ್ತಿದೆ” ಎಂದು ಹೇಳಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾವೇಶದಲ್ಲಿ ವಿವಿಧ ಕಲಾ ತಂಡಗಳಾದ ಯಲ್ಲಪ್ಪ ಡೊಕ್ಕನವರ ಅವರಿಂದ ಸುಡಗಾಡ ಸಿದ್ದರ ವೇಷ, ದುರ್ಗಮುರ್ಗಿ ಕಲಾ ತಂಡ, ಮಂಗಳಮುಖಿಯರ ತಂಡ, ಗೋಸಾವಿ ತಂಡ, ಹುಬ್ಬಳ್ಳಿಯ ದರವೇಶ ತಂಡ ಹಾಗೂ ಹೊಸಪೇಟೆಯ ತಮಟೆ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. 

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಮೂಹಿಕ ಅತ್ಯಾಚಾರ ಪ್ರಕರಣ : ಮೂವರ ಬಂಧನ

ಹಿರಿಯ ಪತ್ರಕರ್ತೆ ಶಿವಕುಮಾರ ಕುಷ್ಟಗಿ, ದಲಿತ ಸಂಘರ್ಷ ಸಮಿತಿ ಸಂಚಾಲಕ ವೆಂಕಟೇಶಯ್ಯ, ಪ್ರಗತಿಪರ ಚಿಂತಕರು ಪ್ರೊ ಸತೀಶ ಪಾಸಿ, ಬಸವರಾಜ ಪೂಜಾರ, ಪ್ರಮುಖರಾದ ಶೋಭಾ ಕಮತರ, ವೆಂಕಮ್ಮ, ಸ್ಪಂ ಸಮಿತಿ ಉಪಾಧ್ಯಕ್ಷ ಆಶೋಕ ಕುಡತಿನ್ನಿ, ಕಾರ್ಯದರ್ಶಿ ಆರೋಕ ಕುಸು ಮಹಿಳಾ ಸಂಚಾಲಕಿ ಪರವೀನಬಾನು ಹವಾಲ್ದಾರ, ಉಮರಫಾರು ಹುಬ್ಬಳ್ಳಿ ಅನ್ನರ ತಿರಪಟ್ಟಿ, ಎಂ.ಪಿ. ಮುಳಗುಂದ ವೇದಿಕೆ ಮೇಲೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...