ಗದಗ | ಸರ್ಕಾರ ಜಾತಿಗೊಂದು ನಿಗಮ ಮಾಡಿ, ದಲಿತರ ಅಭಿವೃದ್ಧಿ ಕುಂಠಿತವಾಗಿದೆ: ಹೋರಾಟಗಾರ ಮುತ್ತು ಬಿಳಿಯಲಿ

Date:

ಸರ್ಕಾರ ಜಾತಿಗೊಂದು ನಿಗಮ ಮಾಡಿದ್ದು, ದಲಿತರ ಅಭಿವೃದ್ಧಿ ಕುಂಠಿತವಾಗತೊಡಗಿದೆ. ಹಾಗಾಗಿ ಸರ್ಕಾರ ಜಾತಿಗೊಂದು ನಿಗಮ ಮಾಡದೆ, ಈಗ ಇರುವ ನಿಗಮಗಳಿಗೆ ಸರಿಯಾದ ಅನುದಾನ ಬಿಡುಗಡೆ ಮಾಡಿ ದಲಿತರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕೆಂದು ಹೋರಾಟಗಾರ ಮುತ್ತು ಬಿಳಿಯಲಿ ಆಗ್ರಹಿಸಿದರು.

ದಲಿತ ಸಂಘಟನೆಗಳು ಮತ್ತು ಪ್ರಗತಿಪರ ಸಂಘಟನೆಗಳ ಮುಖಾಂತರ ಮಾತನಾಡಿದ ಇವರು, “ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಡಾ. ಬಿ ಆರ್‌ ಅಂಬೇಡ್ಕರ್‌ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿದರು. ಇದರಿಂದ ದಲಿತರು ಭೂಒಡೆಯರಾದರು ಮತ್ತು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲಾಗಿದ್ದಾರೆ. ನಂತರ ಸರ್ಕಾರ ಜಾತಿಗೊಂದು ಅಭಿವೃದ್ಧಿ ನಿಗಮವನ್ನು ಪ್ರಾರಂಭ ಮಾಡುತ್ತ ಬಂದಿದ್ದು, ಆದಿ ಜಾಂಬವ ಅಭಿವೃದ್ಧಿ ನಿಗಮ, ತಾಂಡಾ ಅಭಿವೃದ್ಧಿ ನಿಗಮ, ಭೋವಿ ಅಭಿವೃದ್ಧಿ ನಿಗಮ, ಅಲೆಮಾರಿ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ ಹೀಗೆ ಜಾತಿಗೊಂದು ನಿಗಮ ಮಾಡಿ ಪ್ರತಿಯೊಂದು ನಿಗಮಗಳಿಗೆ ಅಧ್ಯಕ್ಷರು, ಅವರಿಗೆ ಕೆಂಪು ಗೂಟದ ಕಾರು, ಅದಕ್ಕೊಬ್ಬರಂತೆ ಐಎಎಸ್ ಅಧಿಕಾರಿಗಳನ್ನು ನೇಮಿಸಿ ದಲಿತರನ್ನು ಮತ್ತಷ್ಟು ಆರ್ಥಿಕವಾಗಿ ಹಿಂದೆ ಉಳಿಯುವಂತೆ ಮಾಡಿದೆ” ಎಂದು ಹೇಳಿದರು.

ಗದಗ ಪಟ್ಟಣದಲ್ಲಿ ಹೋರಾಟಗಾರ ಮುತ್ತು ಬಿಳಿಯಲಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಡಾ. ಬಿ ಆರ್‌ ಅಂಬೇಡ್ಕರ್‌ ನಿಗಮವಿದ್ದಾಗ ಸುಮಾರು ಹನ್ನೊಂದು ಯೋಜನೆಗಳನ್ನು ಕೊಡುವುದರ ಮೂಲಕ ದಲಿತರನ್ನ ಸಬಲರನ್ನಾಗಿಸಲು ಸಾಧ್ಯವಿತ್ತು. ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ವಿವಿಧ ಯೋಜನೆಗಳ ಮೂವತ್ತು ಅರ್ಜಿಗಳಲ್ಲಿ ಕನಿಷ್ಠ ಇಪ್ಪತ್ತು ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿತ್ತು. ಆದರೆ ಈಗ ಜಾತಿಗೊಂದು ನಿಗಮಗಳಲ್ಲಿ ಕೇವಲ ನಾಲ್ಕು ಯೋಜನೆಗಳಿವೆ. ಆ ನಾಲ್ಕು ಯೋಜನೆಗಳನ್ನೇ ಸಮರ್ಪಕವಾಗಿ ಒದಗಿಸಲು ಅನುದಾನವಿಲ್ಲ. ಈಗ ಬಂದ ಮೂವತ್ತು ಅರ್ಜಿಗಳಲ್ಲಿ ಟಾರ್ಗೆಟ್ ನಿಗದಿ ಮಾಡಿ ಒಬ್ಬಿಬ್ಬರನ್ನು ಮಾತ್ರ ಆಯ್ಕೆ ಮಾಡಿ ದಲಿತರನ್ನು ಸೌಲಭ್ಯಗಳಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು ಎರಡು ವರ್ಷಗಳಿಂದ ನಿಗಮಗಳಲ್ಲಿ ಯಾವುದೇ ಯೋಜನೆಗಳಿಲ್ಲ. ದಲಿತರು ಭೂಒಡೆತನ ಯೋಜನೆ ಅಡಿಯಲ್ಲಿ ಸುಮಾರು ಒಂದು ವರ್ಷಗಳಿಂದ ಅರ್ಜಿ ಸಲ್ಲಿಸಲು ಹೋದರೆ ಹೊಸ ಪ್ರಸ್ತಾವನೆಗೆ ಅವಕಾಶವಿಲ್ಲ. ಬೆಂಗಳೂರಿನ ಕೇಂದ್ರ ಕಚೇರಿಯವರು ನಮಗೆ ಮೌಖಿಕವಾಗಿ ತಿಳಿಸಿ ಯಾವುದೇ ಅರ್ಜಿಗಳನ್ನು ತೆಗೆದುಕೊಳ್ಳದಂತೆ ತಿಳಿಸಿದ್ದಾರೆಂದು ಉತ್ತರ ನೀಡುತ್ತಾರೆ. ಈಗಾಗಲೇ ಐದು ವರ್ಷದ ಅವಧಿಯ ಭೂಒಡೆತನ ಯೋಜನೆಯ ಗದಗ ಜಿಲ್ಲೆಯ ಸುಮಾರು 30 ಅರ್ಜಿಗಳ ಹಣ ಬಿಡುಗಡೆ ಆಗದೆ. ಹೊಲದ ಮಾಲೀಕರು ಭೂಮಿಯನ್ನು ವಾಪಸ್ ತೆಗೆದುಕೊಳ್ಳುತ್ತಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯಪಾಲರ ನಡೆ ಖಂಡಿಸಿ ಬೆಂಗಳೂರಲ್ಲಿ ಸೆ. 3ರಂದು ಪ್ರತಿಭಟನೆ: ದಸಂಸ ಮುಖಂಡ ಮರೆಪ್ಪ ಹಳ್ಳಿ

“ಜಿಲ್ಲಾ ಕೇಂದ್ರದ ಎಲ್ಲ ನಿಗಮಗಳಲ್ಲಿ ಕೆಲವರು ಸರ್ಕಾರಿ ನೌಕರರು, ಇನ್ನುಳಿದವರು ಗುತ್ತಿಗೆ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸುಮಾರು ಐದು ತಿಂಗಳಿನಿಂದ ವೇತನವಾಗಿಲ್ಲ. ಎಲ್ಲ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಕೆಲವರು ಸರ್ಕಾರಿ ನೌಕರರು ಸರಿಯಾಗಿ ವೇತನ ಆಗದಿದ್ದಕ್ಕೆ ಕೆಲಸವನ್ನೇ ಬಿಟ್ಟೋಗಿದ್ದಾರೆಂದು ಜಿಲ್ಲಾ ವ್ಯವಸ್ಥಾಪಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲಿನ ಸರ್ಕಾರಿ ನೌಕರರ ಸ್ಥಿತಿಯೇ ಹೀಗಾದರೆ ಅಲ್ಲಿನ ದಿನಗೂಲಿ ನೌಕರರ ಸ್ಥಿತಿ ಹೇಗಿರಬಹುದೆಂದು ಊಹಿಸಲೂ ಸಾಧ್ಯವಿಲ್ಲ. ಸರ್ಕಾರ ದಲಿತರಿಗೆ ಮೀಸಲಾಗಿಟ್ಟ ಹಣವನ್ನು ದೋಚಿ ವಿವಿಧ ಕಾಮಗಾರಿಗಳಿಗೆ ತಮ್ಮ ಸರ್ಕಾರದ ಯೋಜನೆಗಳಿಗೆ ಬಳಸಿ ನಿಗಮಗಳಿಗೆ ಸರಿಯಾದ ಅನುದಾನ ಕೊಡದೆ ನಿಗಮಗಳೇ ಇನ್ನಷ್ಟು ಬಡವಾಗಿವೆ” ಎಂದು ಮುತ್ತು ಬಿಳಿಯಲಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...