ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 200ಕ್ಕೂ ಹೆಚ್ಚು ರೋಗಿಗಳನ್ನು ತಪಾಸಣೆಗೆ ಒಳಪಡಿಸಿದ್ದು, 5 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲು ಧಾರವಾಡದ ಎಸ್ಡಿಡಿಎಂ ನಾರಾಯಣ ಹಾರ್ಟ್ ಸೆಂಟರ್ ವೈದ್ಯ ಡಾ. ಜಯಪ್ರಕಾಶ ಅವರು ಸಲಹೆ ನೀಡಿದರು.
ವೈದ್ಯರ ದಿನಾಚರಣೆ ಅಂಗವಾಗಿ ಎಸ್ಡಿಡಿಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಚಿಕ್ಕನರಗುಂದ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಪ್ರಾಥಮಿಕ ಆರೋಗ್ಯ ಕೇಂದ್ರ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಆರೋಗ್ಯ ಶಿಬಿರದಲ್ಲಿ ಡಾ. ಜಯಪ್ರಕಾಶ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಭಿಷೇಕ್ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಿ ಸಲಹೆ ನೀಡಿದರು. ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ತಪಾಸಣೆ ಮಾಡಲಾಯಿತು. 100 ಹೆಚ್ಚು ಮಂದಿಗೆ ಬಿಆರ್ಬಿಎಸ್, ಬಿಪಿ, ಇಸಿಜಿ, 2ಡಿ ಎಕೋ ಪರಿಕ್ಷೇಗಳನ್ನು ಮಾಡಿದ್ದು, ಹೃದ್ರೋಗಿಗಳಿಗೆ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದರು.
“ಚಿಕ್ಕನರಗುಂದ ಹಾಗೂ ಸುತ್ತ ಮುತ್ತಲಿನ ಗ್ರಾಮದವರಿಗೆ ಇದೊಂದು ಸುವರ್ಣ ಅವಕಾಶ ಎನ್ನಬಹುದು. ಇನ್ನೊಂದು ಸುವರ್ಣಾವಕಾಶ ಏನೆಂದರೆ ಧಾರವಾಡ ನಾರಾಯಣ ಹೃದಯಾಲಯದ ಹೃದಯರೋಗ ತಜ್ಞ ಡಾ. ರವಿ ಜೈನಾಪೂರ ಪ್ರತಿ ತಿಂಗಳ ಮೊದಲನೇ ಬುಧವಾರ ಸಂದರ್ಶನದಲ್ಲಿ ಲಭ್ಯವಿರುತ್ತಾರೆ. ಈ ವಾರ 7 ನೇ ತಾರೀಖಿನಂದು ಭೇಟಿ ಮಾಡಬಹುದು” ಎಂದು ಡಾ. ಜಯಪ್ರಕಾಶ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಸ್ಮಶಾನ ಭೂಮಿ ಮಂಜೂರಾತಿಗೆ ಅಧಿಕಾರಿಗಳ ನಿರ್ಲಕ್ಷ್ಯ ವಿರೋಧಿಸಿ ಆಗ್ರಹ
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ ಕಂಬಳಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಸದಸ್ಯರುಗಳಾದ ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ವಿರಯ್ಯ ಬಾಳಿಕಾಯಿ ಸೇರಿದಂತೆ ಆರೊಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಇದ್ದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಕ್ಷ್ಮಣ ಕಂಬಳಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುತ್ತು ರಾಯರಡ್ಡಿ, ಸದಸ್ಯರುಗಳಾದ ಶರಣಬಸಪ್ಪ ಹಳೇಮನಿ, ಜಡಿಯಪ್ಪಗೌಡ ಚನ್ನಪ್ಪಗೌಡ್ರ, ವಿರಯ್ಯ ಬಾಳಿಕಾಯಿ ಸೇರಿದಂತೆ ಆರೊಗ್ಯ ಇಲಾಖೆ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಶಿಬಿರದಲ್ಲಿ ಇದ್ದರು.




