ಗದಗ | ಹೇಮರೆಡ್ಡಿ ಮಲ್ಲಮ್ಮ ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ: ಮುತ್ತು ರಾಯರೆಡ್ಡಿ

Date:

“ಹೇಮರೆಡ್ಡಿ ಮಲ್ಲಮ್ಮ ಸಾಮಾನ್ಯ ವರ್ಗದ ಕುಟುಂಬದಲ್ಲಿ ಜನಿಸಿ ದರು. ಬಾಲ್ಯದಿಂದಲೂ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯನ್ನು ಆರಾಧಿಸುತ್ತಿದ್ದರು. ಮಲ್ಲಿಕಾರ್ಜುನನ ಅನುಗ್ರಹದಿಂದ ಆದರ್ಶ ಶರಣೆಯಾಗಿ ರೂಪುಗೊಂಡರು. ಜೀವನದ ಕಡೆಯಲ್ಲಿ ದೇವರನ್ನೆ ಸಾಕ್ಷಾತ್ಕರಿಸಿಕೊಂಡರು. ಅವರು ಆಧ್ಯಾತ್ಮಿಕ ಕ್ಷೇತ್ರದ ಧ್ರುವತಾರೆ” ಎಂದು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಮುತ್ತು ರಾಯರೆಡ್ಡಿ ಹೇಳಿದರು.

ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಚಿಕ್ಕನರಗುಂದ  ಗ್ರಾಮ ಪಂಚಾಯಿತಿ  ಸಭಾಂಗಣದಲ್ಲಿ ಶನಿವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಭರಮರೆಡ್ಡಿ ಅವರೊಂದಿಗೆ ಹೇಮರೆಡ್ಡಿ ಮಲ್ಲಮ್ಮ ಅವರ ವಿವಾಹವಾಗಿತ್ತು. ಭರಮರೆಡ್ಡಿಯನ್ನು ಜನರು ಹುಚ್ಚನಂತೆ ಪರಿಭಾವಿಸುತ್ತಿದ್ದರು. ಭರಮರೆಡ್ಡಿಯಲ್ಲಿನ ಮುಗ್ಧತೆ, ಸಾಧು ಸ್ವಭಾವವನ್ನು ಕಂಡು ಮಲ್ಲಮ್ಮ ಸಮಾಧಾನಗೊಂಡಿದ್ದರು. ಪತಿಯನ್ನು ದೇವರಂತೆ ಉಪಚರಿಸಿದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೇಮರೆಡ್ಡಿ ಮಲ್ಲಮ್ಮ ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದರು. ಕರುಣಾ ಮಯಿ ಹಾಗೂ ದಾಸೋಹಿಯಾಗಿದ್ದರು. ಪರಸ್ಪರ ನಂಬಿಕೆ, ವಿಶ್ವಾಸ, ಕ್ಷಮಿಸುವ ಗುಣ ಸಕಲ ಜೀವರಾಶಿಗಳಿಗೂ ಒಳಿತನ್ನು ಬಯಸಬೇಕು ಎನ್ನುವ ಮನೋಭಾವನೆ ಜೀವನ ಸಾಗಿಸಿದರು. 500 ವರ್ಷ ಕಳೆದರೂ ಮಲ್ಲಮ್ಮ ಜನರ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ. ರೆಡ್ಡಿ ಕುಲದವರು ಮಲ್ಲಮ್ಮನನ್ನು ಇಂದಿಗೂ ಮಹಾತಾಯಿಯಂತೆ ಪೂಜಿಸುತ್ತಾರೆ’ ಎಂದರು.

“ಮಲ್ಲಮ್ಮನ ಮೈದುನನಾದ ವೇಮನ ದುಶ್ಚಟಗಳಿಗೆ ಬಲಿಯಾಗಿದ್ದನು. ಆತನಿಗೆ ಮಲ್ಲಮ್ಮ ಮನುಷ್ಯನ ಬದುಕಿನ ಸಾರ್ಥಕತೆಯ ಅರಿವಾಗುವಂತೆ ಮನ ಪರಿವರ್ತನೆ ಮಾಡಿದಳು. ವೇಮನ ಆಧ್ಯಾತ್ಮಿಕ ದಾರಿಯಲ್ಲಿ ಸಾಧನೆಗೈದು, ಮಹಾಯೋಗಿಯಾದನು. ಆಂಧ್ರ ಪ್ರದೇಶದಲ್ಲಿ ಪೂಜನೀಯ ಸ್ಥಾನ ಪಡೆದನು” ಎಂದರು.

“ಮಲ್ಲಮ್ಮ ಹಲವಾರು ಪವಾಡ ಗಳನ್ನು ನಡೆಸಿರುವ ಬಗ್ಗೆ ಪುರಣಾದಲ್ಲಿ ಉಲ್ಲೇಖ ಇದೆ. ಸಂತ ಶಿಶುನಾಳ ಶರೀಫರು ಹೇಮರೆಡ್ಡಿ ಮಲ್ಲಮ್ಮನ ಕುರಿತು ಹಲವಾರು ಗೀತೆಗಳನ್ನು ರಚಿಸಿದ್ದಾರೆ. ಮಲ್ಲಮ್ಮನ ಜೀವನದ ತತ್ವ, ಚಿಂತನೆಗಳು ಎಲ್ಲರಿಗೂ ಆದರ್ಶನೀಯ” ಎಂದು ಮುತ್ತು ರಾಯರೆಡ್ಡಿ ಹೇಳಿದರು.

ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರು ಮಲ್ಲಮ್ಮ ಮರಿಯಣ್ಣವರ, ಸದಸ್ಯ ಶರಣಬಸಪ್ಪ ಹಳೇಮನಿ, ಗ್ರಾ.ಪಂ ಕಾರ್ಯದರ್ಶಿ ನಾಗವೇಣಿ, ಸಿಬ್ಬಂದಿ  ಶಿವು ಯಲಿಗಾರ, ಸಿದ್ದಪ್ಪ ಹಳಕಟ್ಟಿ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...