ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ “ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವು ಸೆಪ್ಟೆಂಬರ್ 08, 2025.ರಂದು ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಮಾಜಿ ಅಧ್ಯಕ್ಷರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ ಪ್ರೊ. ಡಾ. ಬಿ. ತಿಮ್ಮೇಗೌಡ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಕುಲಪತಿ ಪ್ರೊ. ಡಾ. ಎ.ಎಂ. ಖಾನ್, ಐಐಐಟಿ ಧಾರವಾಡದ ನಿರ್ದೇಶಕರಾದ ಪ್ರೊ. ಮಹಾದೇವ ಪ್ರಸನ್ನ, ಮತ್ತು ಹೆಡ್ ಹೆಲ್ಡ್ ಹೈ ಫೌಂಡೇಶನ್ನ ಟ್ರಸ್ಟಿ ಶ್ರೀ ಮದನ್ ಪಡಕಿ ಅವರು ಭಾಗವಹಿಸಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಧಾರವಾಡದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಮತಿ. ಕರಿಮುನ್ನಾಸಾ ಸಯ್ಯೇದ್ ಹಾಗೂ ಕಲಬುರಗಿ ವಿಭಾಗದ ಉನ್ನತ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಶಿವಶರಣ ಗೊಲ್ಲೆ ಬಿ ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಕುಲಪತಿ(ಪ್ರ) ಹಾಗೂ ಕುಲಸಚಿವರಾದ ಪ್ರೊ. ಡಾ. ಸುರೇಶ್ ವಿ. ನಾಡಗೌಡರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು, ಕಾರ್ಯಾಗಾರದಲ್ಲಿ ತಮ್ಮ ಅನುಭವ ಹಂಚಿಕೊಳ್ಳಲು ಹಾಗೂ ಪ್ರಯೋಜನ ಪಡೆದುಕೊಳ್ಳಲು ವಿನಂತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರವಾದಿ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಶಾಂತಿ, ಸೌಹಾರ್ದತೆ ಸಂದೇಶ
ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಶ್ರೀ ಪ್ರಶಾಂತ ಜೆ.ಸಿ, ವಿಶೇಷಾಧಿಕಾರಿ (ಶೈಕ್ಷಣಿಕ) ಶ್ರೀ ಎಂ.ಬಿ. ಚನ್ನಪ್ಪಗೌಡರ್, ಐಕ್ಯೂಎಸಿ ಸಂಯೋಜಕ ಡಾ. ಸಂತೋಷ್ ಕುಮಾರ್ ಪಿ.ಕೆ, ಹಾಗೂ ವಿಶ್ವವಿದ್ಯಾಲಯದ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.





