ರೈತರು ಹಲವಾರು ವರ್ಷಗಳಿಂದ ಅರಣ್ಯ ಅಂಚಿನಲ್ಲಿ ಬಗರಹುಕುಂ ಭೂಮಿ ಸಾಗುವಳಿ ಮಾಡುತ್ತಾ ಬಂದಿದ್ದಾರೆ. ಮಲೆನಾಡಿನ ರೈತರಿಗೆ ನೀಡಿದಂತೆ ನಮಗೂ ಹಕ್ಕುಪತ್ರ ನೀಡಿ ಎಂದು ಬಗರಹುಕುಂ ಸಾಗುವಳಿ ಮಾಡುತ್ತಿರುವ ನೂರಾರು ರೈತರು 21ನೇ ದಿನಕ್ಕೆ ಧರಣಿ ನಡೆಸಿದ್ದು, ಭಿಕ್ಷಾಟನೆ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಕಳೆದ 21 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆದರೂ ಸರ್ಕಾರ ಕಣ್ತೆರೆದು ನೋಡುತ್ತಿಲ್ಲ. ಇದರಿಂದ ನೂರಾರು ರೈತರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ನೂರಾರು ರೈತರು ಗಾಂಧಿ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ಬೀದಿಯಲ್ಲಿ ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸಿ ಸರಕಾರಕ್ಕೆ ರೈತರು ಹಣ ನೀಡುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಹಕ್ಕುಪತ್ರ ಸಿಗುವವರೆಗೆ ಹೋರಾಟ ನಿಲ್ಲುವುದಿಲ್ಲ. ಈಗಾಗಾಲೇ ಅರೆಬೆತ್ತಲೆ ಸೇರಿದಂತೆ ವಿಭಿನ್ನ ಪ್ರತಿಭಟನೆಗಳ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಹೋರಾಟ ಸ್ವರೂಪ ಮುಂದಿನ ದಿನಗಳಲ್ಲಿ ಉಗ್ರವಾಗಿರಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಲಂಚ ಬೇಡಿಕೆ, ಕರ್ತವ್ಯಲೋಪ, ದುರ್ನಡತೆ ಆರೋಪ; ವೈದ್ಯಾಧಿಕಾರಿ ಅಮಾನತು
“ಬಗರಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಒತ್ತಾಯ ಹಾಗೂ ಆರ್ಡಿಪಿಆರ್ ವಿಶ್ವವಿದ್ಯಾಲಯಕ್ಕೆ ಜಮೀನು ನೀಡಿದ ರೈತರಿಗೆ ಪರಿಹಾರ ಕೊಟ್ಟಿಲ್ಲ. ನಮ್ಮ ಬೇಡಿಕೆ ಈಡೇರುವವರಿಗೆ ಅಹೋರಾತ್ರಿ ಧರಣೆ ನಡೆಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.





