ಗದಗ | ನಾಗಾವಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣಿತ ಗಣಕ ಕಾರ್ಯಾಗಾರ

Date:

“ಮಕ್ಕಳ ಆಂತರಿಕ ವಿಕಾಸಕ್ಕೆ ಗಣಿತ ಗಣಕ ಕಲಿಕಾ ತರಬೇತಿಗಳು ಸೃಜನಶೀಲವಾದ ಚಟುವಟಿಕೆಗಳಾಗಿರುತ್ತವೆ. ಶಿಕ್ಷಕರಲ್ಲಿಯೂ ನವೀನವಾದ ಬೋಧನಾ ಕೌಶಲ್ಯಗಳನ್ನು ಆಳವಡಿಸಿಕೊಳ್ಳಲು ಸಾಧ್ಯವಾಗುವುದು. ಗಣಿತದ ಮೂಲ ಅಂಶಗಳು ಮಕ್ಕಳಲ್ಲಿಯ ವ್ಯವಹಾರದ ಗಣಿತವನ್ನು ಉತ್ತೇಜಿಸಲು ಸರಕಾರ ಇಂತಹ ತರಬೇತಿಗಳನ್ನು ಆಯೋಜಿಸುವುದು ಉಪಯುಕ್ತವಾಗಿದೆ” ಎಂದು ಬಿ.ಆರ್. ದೇವರೆಡ್ಡಿ ಹೇಳಿದರು.

ಗದಗ ಜಿಲ್ಲೆಯ ಗದಗ ತಾಲೂಕಿನ ನಾಗಾವಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಉಪನಿರ್ದೇಶಕರ ಕಾರ್ಯಾಲಯ, ಗದಗ ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗದಗ ಸಹಯೋಗದ ಅಡಿಯಲ್ಲಿ ಬೆಳದಡಿ, ಅಡವಿಸೋಮಾಪುರ, ಹುಯಿಲಗೋಳ, ಲಕ್ಕುಂಡಿ, ಕೋಟುಮುಡಗಿ ಮತ್ತು ಕಣಗಿನಹಾಳ 3,4,5 ನೇ ತರಗತಿ ಗಣಿತ ಬೋಧಿಸುವ ಶಿಕ್ಷಕರಿಗೆ ಗಣಿತ ಗಣಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ತರಬೇತಿಯ ಮುಖ್ಯ ಅತಿಥಿ ಸುರೇಶ ಕೊಪ್ಪದ ಮಾತನಾಡಿ, “ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿಯಾಗಿದೆ. ಮಗುವಿನ ಬೆಳವಣಿಗೆಯಲ್ಲಿ ಸಮಾಜದ ನಿಯೋಗವಾದ ಶಾಲೆಯ ಪಾತ್ರ ಬಹುಮುಖ್ಯವಾಗಿದೆ. ಗಣಿತ ಮತ್ತು ಅಂಕ ಗಣಿತ ಮೂಲಕ್ರಿಯೆಗಳು ಮಗುವಿನ ಸರ್ವಾಂಗೀಣ ಪ್ರಗತಿಗೆ ಕಾರಣವಾಗಿದೆ. ಗಣಿತ ಕಲಿಕಾ ತರಬೇತಿಯಲ್ಲಿ ಇವು ಸಾಕಾರಗೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ. ಭಾವಿಕಟ್ಟಿ ಮಾತನಾಡಿ, ಶಿಕ್ಷಕರಿಗೆ ಗಣಿತ ಗಣಕ ಕಲಿಕಾ ತರಬೇತಿಯ ಉಪಯುಕ್ತತೆಯನ್ನು ತಿಳಿಸಿದರು. ಗಣಿತ ಬೋಧಿಸುವ ಶಿಕ್ಷಕರಿಗೆ ಈ ತರಬೇತಿಗಳು ಸೃಜನಶೀಲತೆಯನ್ನು ಬೆಳಸಿಕೊಳ್ಳಲು ಅನುಕೂಲವಾಗುತ್ತವೆ ಎಂದು ಹೇಳಿದರು.

ಶಾಲೆಯ ಪ್ರಧಾನ ಗುರುಗಳಾದ ಶ್ರೀಮತಿ ಎ.ವಿ. ಯಾಳವಾರ ಸರ್ವರನ್ನು ಸ್ವಾಗತಿಸಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಚಂದ್ರು ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನು ಓದಿದ್ದೀರಾ? ಗದಗ | ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿಸಲು ಅಭಿಯಾನ: ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್

ವಿರ್ದ್ಯಾಥಿನಿಯರಾದ ಮೇಘಾ ಮತ್ತು ಪಾರ್ವತಿ ಪ್ರಾರ್ಥಿಸಿದರು. ಸಹಶಿಕ್ಷಕರು ಶ್ರೀ ಶಂಭುಗೌಡ ಎಸ್ ತಮ್ಮನಗೌಡರ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಸುರೇಶ ದೊಡ್ಡಮನಿ ವಂದಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕನಕಪ್ಪ ಬೇವಿನಮರದ ಹಾಗೂ ಆರು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿಗಳು ಹಾಗೂ ಶಿಕ್ಷಕರು ಮತ್ತು ಶಿಕ್ಷಕಿಯರು, ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...