ಗದಗ | ಬಿ. ಆರ್ ಗವಾಯಿ ಅವರಿಗೆ ಅವಮಾನ; ರಾಕೇಶ ಕಿಶೋರನನ್ನು ಗಡಿಪಾರು ಮಾಡಲು ಒತ್ತಾಯ

Date:

“ಸರ್ವೋಚ್ಚ ನ್ಯಾಯಾಲಯದಲ್ಲಿ ಸಂವಿಧಾನದ ಪ್ರಮುಖ ಕಂಬ ನ್ಯಾಯಾಂಗದ ಮೇಲೆ ಒಬ್ಬ ಮನುವಾದಿ ರಾಕೇಶ ಕಿಶೋರ ಎಂಬ ನ್ಯಾಯವಾದಿ ಸೋಗಿನ ಭಯೋತ್ಪಾದಕ ನ್ಯಾಯಾಧೀಶರಾದ ಬಿ.ಆರ್. ಗವಾಯಿ ಯವರ ಮೇಲೆ ತನ್ನ ಕಾಲಿನ ಬೂಟನ್ನು ಎಸೆದಿರುವುದು ಭಾರತದ ಸಂವಿಧಾನಕ್ಕೆ ಅವಮಾನಿಸಿದ್ದಾನೆ. ಕೂಡಲೇ ರಾಕೇಶನನ್ನು ಗಡಿಪಾರು ಮಾಡಬೇಕು” ಎಂದು ದಲಿತ ಮುಖಂಡರು ಒತ್ತಾಯಿಸಿದರು.

ನ್ಯಾಯಾಧೀಶರು ಬಿ.ಆರ್. ಗವಾಯಿಯವರ ಮೇಲೆ ನಡೆದ ಹಲ್ಲೆ ಖಂಡಿಸಿ ವಿವಿಧ ದಲಿತ ಸಂಘಟನೆಗಳಿಂದ ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

“ಭಾರತ ದೇಶ ವಿವಿಧ ಧರ್ಮಗಳ, ವಿವಿಧ ಜಾತಿಗಳ, ವಿವಿಧ ಸಂಸ್ಕೃತಿಗಳ ಮತ್ತು ಆಚಾರ-ವಿಚಾರಗಳನ್ನು ಅಳವಡಿಸಿಕೊಂಡು ಸೌಹಾರ್ದತೆಯಿಂದ ಬದುಕುತ್ತಿರುವ ದೇಶ. ಇದಕ್ಕೆ ಪೂರಕವಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರವರು ದೇಶಕ್ಕೆ ನೀಡಿದ ಸಂವಿಧಾನದಲ್ಲಿ ಎಲ್ಲರು ಗೌರವದಿಂದ ಬದುಕಲು ಅವಕಾಶಗಳನ್ನು ಕಲ್ಪಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾತ್ಯಾತೀತ ಕಲ್ಪನೆಯನ್ನು ಸಹಿಸಲಾರದ ಮನುವಾದಿಗಳು, ಆಗಾಗೆ ಸಂವಿಧಾನದ ಆಶಯಗಳಿಗೆ ಭಂಗ ತರುವ ತಂತ್ರಗಳು ನಡೆಯುತ್ತಿರುವುದು ಖಂಡನೀಯ” ಎಂದು ಹೇಳಿದರು.

ಗವಾಯಿ ಅವರ ಮೇಲಿನ ದಾಳಿಯು ಭಯೋತ್ಪಾದನೆ ಘಟನೆಯನ್ನು ಖಂಡಿಸುವ ಮೂಲಕ ಸದರಿ ಕೋಮುವಾದಿ ಮತ್ತು ದೇಶದ್ರೋಹಿ ಗುಂಡಾ ನ್ಯಾಯವಾದಿಯನ್ನು ಯಾವುದೇ ಜಾಮೀನಿಗೆ ಅವಕಾಶವಿಲ್ಲದ ಕಾಯ್ದೆಯ ಮೂಲಕ ತಕ್ಷಣ ಬಂಧಿಸದಬೇಕು. ಆತನ ನ್ಯಾಯವಾದಿ ಪರವಾನಿಗೆ ರದ್ದುಪಡಿಸಬೇಕು. ಶೈಕ್ಷಣಿಕ ಪ್ರಮಾಣ ಪತ್ರಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಅವನ ಆಸ್ತಿಯನ್ನು ಸಹ ಮುಟ್ಟುಗೋಲು ಹಾಕಿಕೊಂಡು ದೇಶದಿಂದಲೇ ಗಡಿಪಾರು ಮಾಡಬೇಕು ” ಎಂದು ಒತ್ತಾಯಿಸಿದರು.

“ಸಂವಿಧಾನದ ಆಶಯಗಳಿಗೆ ಭಂಗಬಾರದ ರೀತಿಯಲ್ಲಿ ಪ್ರಭುತ್ವ ಕ್ರಮ ಜರುಗಿಸಿ ಜಾತ್ಯಾತೀತ ರಾಷ್ಟ್ರ ನಿರ್ಮಾಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಬೇಕು ” ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ಒತ್ತಾಯಿಸಿದರು.

 ಈ ಸಂದರ್ಭದಲ್ಲಿ ವೆಂಕಟೇಶಯ್ಯ ಜಿಲ್ಲಾ ಸಂಚಾಲಕರು (ಕೆರಗೋಡ ಬಣ), ಪ್ರಕಾಶ ಕೇಲೂರ ರಾಜ್ಯ ಸಂಘಟನಾ ಸಂಚಾಲಕರು (ನಾಗವಾರ ಬಣ), ರಮೇಶ ಬಾಳಮ್ಮನವರ ಜಿಲ್ಲಾ ಸಂಚಾಲಕರು (ಸಾಗರ ಬಣ), ಸತೀಶ ಹುಲಿ ದಲಿತ ಮುಖಂಡರು, ವಿಜಯ ಚಲವಾದಿ ದಲಿತ ಮುಖಂಡರು ನರಗುಂದ, ಅಶೋಕ ತಾಳದವರ ದಲಿತ ಮುಖಂಡರು ರೋಣ, ಮಂಜು ಚಲವಾದಿ ದಲಿತ ಮುಖಂಡರು ರೋಣ, ಯಮನೂರ ಹೊಸಳ್ಳಿ, ಬಸವರಾಜ ಗಾಡಗೋಳಿ, ವಾಸು ಹುಣಸೀಮರದ, ಬಸಪ್ಪ ಸಣ್ಣಕ್ಕಿ, ಮಹಾಂತೇಶ ಬಾಳಮ್ಮನವರ, ಅನಿಲ ದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...