ಗದಗ | ಶಾಂತಿಯುತ ಹೋರಾಟವನ್ನು ಹತ್ತಿಕ್ಕಿ, ಹೋರಾಟಗಾರರನ್ನು ಬಂದಿಸಿದ್ದು ಖಂಡನಿಯ: ಬಾಲು ರಾಠೋಡ

Date:

“ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂ ಸ್ವಾಧೀನದ ವಿರುದ್ಧ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಸರ್ಕಾರದ ಈ ಕ್ರಮವನ್ನು ನಾವು ನಮ್ಮ ಸಂಘಟನೆಗಳಿಂದ ಖಂಡಿಸುತ್ತೇವೆ” ಎಂದು ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಅಧ್ಯಕ್ಷ ಬಾಲು ರಾಠೋಡ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ದೇವನಹಳ್ಳಿ ರೈತರ ಹಕ್ಕೊತ್ತಾಯ ಈಡೇರಿಸಿ, ಭೂ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಿ, ಅಮಾನವೀಯ ದೌರ್ಜನ್ಯ ಎಸಗಿ ಹೋರಾಟ ಹತ್ತಿಕ್ಕಿದ ಪೋಲಿಸರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಂಯುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ  ತಹಶಿಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರು 1177 ಎಕರೆ ಭೂಮಿ ಉಳಿಸಿಕೊಳ್ಳಲು 1181 ದಿನಗಳಿಂದ ಪ್ರಜಾತಾಂತ್ರಿಕ ಹೋರಾಟ ಮಾಡುತ್ತಿದ್ದರು. ಸರಕಾರ ಅವರ ಇಷ್ಟು ದಿನಗಳ ಹೋರಾಟದ ಒತ್ತಾಯಕ್ಕೆ ಕಿವಿಕೊಡದೇ ಭೂ ಸ್ವಾಧೀನ ಪ್ರಕ್ರಿಯೆಯ ಅಂತಿಮ ಘಟ್ಟಕ್ಕೆ ಕೈ ಹಾಕಿದ್ದಾರೆ. ಹಿನ್ನೆಲೆಯಲ್ಲಿ ಈ ಹೋರಾಟ ಬೆಂಬಲಿಸಿ ರಾಜ್ಯದ ಮೂಲೆ ಮೂಲೆಗಳಿಂದ ಸಾಮಾಜಿಕ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹೋರಾಟಗಾರ ಮೇಲೆ ಹಲ್ಲೆ ಮಾಡಿ ಬಂಧಿಸಿರುವುದು ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದಿ ಬದಿ ವ್ಯಾಪಾರಸ್ಥರು ಸಂಘದ ಕಾರ್ಯದರ್ಶಿ ಪೀರು ರಾಠೋಡ ಮಾತನಾಡಿ, “ಶಾಂತಿಯುತ ಪ್ರತಿಭಟನೆ‌ ನಡೆದೆ ಸ್ಥಳದಲ್ಲಿ ಪೋಲಿಸರನ್ನು ಬಿಟ್ಟು ಸರ್ಕಾರ ಅನ್ನದಾತರ ಬದುಕಿಗೆ ಕೊಳ್ಳಿ ಇಟ್ಟು ಕಾರ್ಪೊರೇಟ್ ‌ಬಂಡವಾಳಿಗರಿಗೆ ಮೃಷ್ಟಾನ್ನ ತಿನ್ನಿಸುವ ಯೋಜನೆಯ  ಈ ಸಂಚು ಜನ ವಿರೋಧಿ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ” ಎಂದರು.

ಡಿವಾಯ್ಎಫ್ಐ ಜಿಲ್ಲಾ ಮುಖಂಡ ದಾವಲಸಾಬ ತಾಳಿಕೋಟಿ ಮಾತನಾಡಿ, “ಸರ್ಕಾರ ತನ್ನ ಭೂ ಸ್ವಾಧೀನ ನೀತಿ ಕೈ ಬಿಡುಬೇಕು ಇಡೀ ರಾಜ್ಯಾದ್ಯಂತ ಈ ಪ್ರತಿಭಟನೆ ತೀವ್ರವಾಗಿ ನಡೆಯಲಿದೆ.  ಪ್ರಜಾಸತ್ತಾತ್ಮಕ ಹೋರಾಟವನ್ನು ಪ್ರತಿಬಂಧಿಸಿ ಹೋರಾಟಗಾರರನ್ನು ಅಮಾನವೀಯವಾಗಿ ಹಿಂಸಿಸಿ ಬಂಧಿಸಿದ ನಡೆಯನ್ನು ನಾವು ಖಂಡಿಸುತ್ತೇವೆ. ಪೋಲಿಸ್ ದೌರ್ಜನ್ಯ ಖಂಡಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ| ಗುತ್ತಿಗೆದಾರನ ಕೊಲೆ ಪ್ರಕರಣ ಆರೋಪಿಗಳ ಕಾಲಿಗೆ ಗುಂಡೇಟು, ಆಸ್ಪತ್ರೆಗೆ ದಾಖಲು

ಪ್ರತಿಭಟನೆಯಲ್ಲಿ ಕಟ್ಟಡ ಕಾರ್ಮಿಕ ಸಂಘದ ಜಿಲ್ಲಾ ಮುಖಂಡ ಮೆಹಬೂಬ್ ಹವಾಲ್ದಾರ್, ರೂಪ್ಲೇಶ ಮಾಳೊತ್ತರ, ನೀಲಮ್ಮ ಹಿರೇಮಠ, ಸೇರಿದಂತೆ ಕಟ್ಟಡ ಕಾರ್ಮಿಕ ಸಂಘಟನೆ, ಬೀದಿ ಬದಿ ವ್ಯಾಪಾರಸ್ಥರ ಸಂಘ, ಅಂಗನವಾಡಿ ನೌಕರರ ಸಂಘ, ಕೃಷಿಕೂಲಿಕಾರರ ಸಂಘದ ಸದಸ್ಯರು ಪಾಲ್ಗೊಂಡಿದ್ದರು.

ಹಕ್ಕೊತ್ತಾಯಗಳು 1) ಫಲವತ್ತಾದ ಭೂಮಿಯಲ್ಲಿ ತಮ್ಮ ಬದುಕು ಕಂಡುಕೊಂಡ ಯಾವುದೇ ರೈತರ ತಂಟೆಗೆ ಬರಬೇಡಿ. ರೈತರ ಭೂಮಿ ರೈತರದ್ದೇ ಆಗಿ ಉಳಿಸಬೇಕು, ಬೇಷರತ್ತಾಗಿ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು. ರೈತರ ಭೂಮಿಯನ್ನು ಸರ್ಕಾರದ ಯಾವುದೇ ಯೋಜನೆಗೆ ನೀಡಬಾರದು, ಕೂಡಲೇ ಕ್ಯಾಬಿನೆಟ್ ನಿರ್ಣಯ ಮಾಡಬೇಕು. 2) ಬಂಧಿತ ಹೋರಾಟಗಾರರನ್ನು ಯಾವುದೇ ಪ್ರಕರಣಗಳನ್ನು ಹಾಕದೇ ಬೇಷರತ್ ಬಿಡುಗಡೆ ಮಾಡಬೇಕು. ವೈಯಕ್ತಿಕವಾಗಿ ಸಂಘಟನಾತ್ಮಕವಾಗಿ ಆಗಿರುವ ಅನಾಹುತ ಸರಕಾರವೇ ತುಂಬಿಕೊಡಬೇಕು. 3) ಅಮಾನವೀಯ ದೌರ್ಜನ್ಯ ಎಸಗಿದ ಪೋಲಿಸರ ಮೇಲೆ ಕ್ರಮಕೈಗೊಳ್ಳಬೇಕು, ತನಿಖೆ ನಡೆಸಬೇಕು. ಇನ್ನೆಂದೂ ಹೋರಾಟವನ್ನು ಮುರಿಯುವ ಅಸಾಂವಿಧಾನಿಕ ಕೆಲಸ ಮಾಡಬಾರದು ಎಂದು ಆಗ್ರಹಿಸುತ್ತೇವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...