ಗದಗ | ತಾಲ್ಲೂಕು ಸಮ್ಮೇಳನಾಧ್ಯಕ್ಷ ಜೆ.ಕೆ.ಜಮಾದಾರ ಆಯ್ಕೆ

Date:

“ಶಿಕ್ಷಕರಾಗಿ, ಸೃಜನಶೀಲ ಬರಹದ ಮೂಲಕ ಸಾಹಿತ್ಯಿಕ ವಲಯವನ್ನು ಶ್ರೀಮಂತಗೊಳಿಸಿದ ಕೀರ್ತಿ ಜೆ.ಕೆ.ಜಮಾದಾರ ಅವರಿಗೆ ಸಲ್ಲುವುದು.  ಅವರ ಸಾಹಿತ್ಯ ಸೇವೆ ಮನಗಂಡು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸೂಕ್ತವಾಗಿದೆ” ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಗದಗ ಜಿಲ್ಲೆಯ ಗದಗ ತಾಲ್ಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಏಪ್ರಿಲ್ 5ರಂದು ನಡೆಯುವ ಗದಗ ತಾಲ್ಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಜೆ.ಕೆ.ಜಮಾದಾರ ಅವರ ಬೆಟಗೇರಿ ನಿವಾಸದಲ್ಲಿ ಅಧಿಕೃತ ಆಹ್ವಾನ ನೀಡಿ ಮಾತನಾಡಿದರು.

“ಕುರ್ತಕೋಟಿ ಗ್ರಾಮ ಸಾಹಿತ್ಯ, ಧರ್ಮ ಮತ್ತು ಸಂಸ್ಕೃತಿಯ ಹಿನ್ನೆಲೆಯಲ್ಲಿ ಅಮೋಘ ಕೊಡುಗೆ ನೀಡಿದ ಪ್ರದೇಶ. ಅಲ್ಲಿಯ ಇತಿಹಾಸವನ್ನು ಜನಮಾನಸಕ್ಕೆ ತಲುಪಿಸುವ ಕಾರ್ಯ ನಡೆಯಲಿ” ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯೋಜಿತ ಸಮ್ಮೇಳನಾಧ್ಯಕ್ಷ ಜೆ.ಕೆ.ಜಮಾದಾರ ಮಾತನಾಡಿ, “ಸಾಹಿತ್ಯದ ಅಲ್ಪಸೇವೆ ಮನಗಂಡು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿರುವುದು ಖುಷಿ ನೀಡಿದೆ. ಗದುಗಿನ ಪರಿಸರ ಸಾಹಿತ್ಯ, ಕಲೆ, ರಂಗಭೂಮಿ, ಸಂಗೀತದ ಹಿನ್ನೆಲೆಯನ್ನು ಹೊಂದಿದ್ದು, ಅದರ ಪೋಷಣೆ ನಮ್ಮ ಹೊಣೆ” ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, “ಸಮ್ಮೇಳನಗಳು ಕನ್ನಡಿಗರಲ್ಲಿ ಕನ್ನಡದ ಪ್ರಜ್ಞೆಯನ್ನು ಸದಾ ಜಾಗೃತವಾಗಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಕನ್ನಡ ಅಸ್ಮಿತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪರಿಷತ್ತು ನಿರಂತರಾಗಿ ಕೆಲಸ ಮಾಡಲಿದೆ” ಎಂದರು.

ಗದಗ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಡಾ. ರಶ್ಮಿ ಅಂಗಡಿ ಅಧಿಕೃತ ಆಹ್ವಾನಪತ್ರ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಹಾವೇರಿ ವಿ ವಿ ಉಳಿದರೆ ಇಪ್ಪತ್ತು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲ : ನಿವೃತ್ತ ಕುಲಪತಿ ಡಾ. ಎ. ಮುರಿಗೆಪ್ಪ

ಸಭೆಯಲ್ಲಿ ಅಪ್ಪಣ್ಣ ಇನಾಮತಿ, ಶೇಖರಯ್ಯ ಹೊಸಮಠ, ಸಿದ್ದಯ್ಯ ವಿಭೂತಿ, ಜಿ.ಎನ್.ಪಾಟೀಲ, ಅಶೋಕ ಶಿರಹಟ್ಟಿ, ಪ್ರಕಾಶ ನಾಯ್ಕರ, ಕರಿಯಪ್ಪ ಕೊಡವಳ್ಳಿ, ರಾಘವೇಂದ್ರ ಹೊಸಮನಿ, ಬಾಬು ಗಾಣಿಗೇರ, ಡಾ. ಎಸ್.ಆರ್.ನಾಗನೂರ, ರಂಗನಗೌಡ ಓದುಗೌಡರ, ರತ್ನಕ್ಕ ಪಾಟೀಲ, ಸುರೇಶ ಬಳಗಾರ, ಡಿ.ಎಸ್.ಬಾಪುರೆ, ಶ್ರೀಮತಿ ನಿಡಗುಂದಿ, ಅಶೋಕ ಹಾದಿ, ಹೊಳೆಬಸಪ್ಪ ಅಕ್ಕಿ, ಜಯಶ್ರೀ ಶ್ರೀಗಿರಿ, ಡಾ. ರಾಜಶೇಖರ ದಾನರಡ್ಡಿ, ಶರಣಪ್ಪ ಹೊಸಂಗಡಿ, ಕೋಶಾಧ್ಯಕ್ಷೆ ಪಾರ್ವತಿ ಬೇವಿನಮರದ, ಸಹಕಾರ್ಯದರ್ಶಿಗಳಾದ ಜ್ಯೋತಿ ಹೇರಲಗಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...