ಗದಗ | ಜ್ಯೋತಿ ಮಿರ್ಧಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜೈಭೀಮ್‌ ಸೇನೆ ಪ್ರತಿಭಟನೆ

Date:

ದೇಶದ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿರುವ ರಾಜಸ್ತಾನದ ನಾಗೋರ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು ಎಂದು ಜೈಭೀಮ್‌ ಸೇನೆಯ ರಾಜ್ಯ ಘಟಕದ ಉಪಾಧ್ಯಕ್ಷ ಮೈಲಾರಪ್ಪ ಚಳ್ಳಮರದ ಆಗ್ರಹಿಸಿದರು.

ಸಂವಿಧಾನ ತಿದ್ದುಪಡಿ ಬಗ್ಗೆ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೈ ಭೀಮ್ ಸೇನಾ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟ ಗುರುವಾರ (ಏ.4) ಗದಗ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಜ್ಯೋತಿ ಅವರು ಸಂವಿಧಾನ ತಿದ್ದುಪಡಿ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಅವರು ಎನ್‌ಡಿಎ ಮೈತ್ರಿಕೂಟಕ್ಕೆ ಅಭೂತಪೂರ್ವ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ. ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಬಹುಮತ ಬೇಕು ಎಂಬುದು ಅವರ ಆಲೋಚನೆಯಾಗಿದೆ ಎಂದು ಅವರು ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಬಿಜೆಪಿಯ ಹಲವು ನಾಯಕರು ಸಂವಿಧಾನ ತಿದ್ದುಪಡಿ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಸಂವಿಧಾನ ಬದಲಿಸುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. 2000 ವರ್ಷದಲ್ಲಿ ಹಲವರು ನಡೆಸಿದ ದೇಶವ್ಯಾಪಿ ಹೋರಾಟದಿಂದ ತೆಪ್ಪಗಾಗಿದ್ದ ಬಿಜೆಪಿಯವರು, ಈಗ ಮತ್ತೇ ಆ ವಿಷಯ ಪ್ರಸ್ತಾಪ ಮಾಡುತ್ತಿದ್ದಾರೆ. 10 ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ ಸಂವಿಧಾನದ ಆಶಯಗಳು ಗಾಳಿಯಲ್ಲಿ ತೂರಿಹೋಗಿವೆ. ಸಂವಿಧಾನ ವಿರೋಧಿ ಚಟುವಟಿಕೆ ನಡೆಸುವವ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ಬಳಿಕ ಗದಗ ತಹಸೀಲ್ದಾರ್‌ ಮೂಲಕ ಜಿಲ್ಲಾಧಿಕಾರಿ ಹಾಗೂ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಮನವಿ ಸಲ್ಲಿಸಲ್ಲಿಸಿದರು.

ಜೈಭೀಮ್ ಸೇನೆ ಗೌರವ ಅಧ್ಯಕ್ಷ ವಿಜಯ್ ಕಲ್ಮನಿ, ಅಂಜುಮನ್ ಕಮಿಟಿ ಅಧ್ಯಕ್ಷ ಯೂಸುಫ್ ನಮಾಜಿ, ಜೈಭೀಮ್ ಸಂಘಟನೆ ಯುವ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಸಮನಗಾಪೂರ, ತಾಲೂಕು ಅಧ್ಯಕ್ಷ ಹನುಮಂತ ಪೂಜಾರ, ಸೋಮು ನಾಗರಾಜ್, ಮಾರುತಿ ಹಾದಿಮನಿ, ಬಸವರಾಜ್ ಮನಗುಂಡಿ, ವಿಶಾಲ್, ರಫಿಕ್ ಜಮಾಲಖಾನ್, ಮಹಾಂತೇಶ್ ಬೆಳಧಡಿ, ಹನುಮಂತ ರಾಂಪೂರ, ಯುವರಾಜ್ ಹಾದಿಮನಿ, ಶ್ರೀಕಾಂತ್ ಮೂಲಿಮನಿ, ಮಂಜುನಾಥ ಹಳ್ಳದಮನಿ, ರವಿ ಹಳ್ಳದಮನಿ, ಗಂಗಾಧರ್ ಬ್ಯಾಗೋಟಿ, ಈರಣ್ಣ ಗೆಜ್ಜಿಹಳ್ಳಿ, ರಾಘವೇಂದ್ರ ಗೆಜ್ಜೆಹಳ್ಳಿ, ಮಂಜುನಾಥ ಅಗಸಿಮನಿ, ಅಶೊಇಕ ಹಾದಿಮನಿ, ಮಹಾದೇವ ಛಲವಾದಿ, ಮೋಹನ್ ಛಲವಾದಿ, ಮಂಜುನಾಥ ಕೊರಗಲ್, ಬಸವರಾಜ್, ದುರಗಪ್ಪ ಮಾದರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...