ಗದಗ | ಸ್ಕ್ಯಾನಿಂಗ್ ದರ ಹೆಚ್ಚಿಸಿ, ಮತ್ತೆ ವಿವಾದಕ್ಕೀಡಾದ ಜಿಮ್ಸ್: ಮುತ್ತು ಬಿಳಿಯಲಿ ಆಕ್ರೋಶ

Date:

ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಒಳ ಮತ್ತು ಹೊರ ರೋಗಿಗಳಿಗೆ ಉಚಿತವಾಗಿ ಸ್ಕ್ಯಾನಿಂಗ್ ಮಾಡಿಬೇಕಿತ್ತು. ಆದರೆ ಹೊರಗೆ ಫಲಕವನ್ನೂ ಹಾಕದೆ ರೋಗಿಗಳಿಂದ ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟದ ಸಾಮಾಜಿಕ‌ ಹೋರಾಟಗಾರ ಮುತ್ತು ಬಿಳೆಯಲಿ ಆರೋಪಿಸಿದರು.

ಈ ಕುರಿತು ಮಾತನಾಡಿದ ಅವರು, “ಕಳೆದ ಸೆಪ್ಟೆಂಬರ್‌ನಲ್ಲಿ ಎಲ್ಲ ತರಹದ ಚಿಕಿತ್ಸಾ ದರಗಳನ್ನು ಹೆಚ್ಚಿಸಿ ವಿವಾದಕ್ಕೆ ಈಡಾಗಿದ್ದ ಜಿಮ್ಸ್ ದಲಿತ ಸಂಘಟನೆಗಳ ಪ್ರತಿಭಟನೆಗೆ ಮಣಿದು ಆದೇಶವನ್ನು ರದ್ದುಮಾಡಿತ್ತು. ಈಗ ಮತ್ತೆ ಸರ್ಕಾರಿ ಆದೇಶವೆಂದು ಹೇಳುತ್ತ ಸ್ಕ್ಯಾನಿಂಗ್ ದರವನ್ನು ಏಕಾಏಕಿ ಹೆಚ್ಚಿಸಿದೆ. ಜಿಮ್ಸ್ ಈ ಹಿಂದೆ ಚಿಕಿತ್ಸೆಗಾಗಿ ಬರುವ ಹೊರರೋಗಿಗಳಿಗೆ ಹಾಗೂ ಒಳರೋಗಿಗಳಿಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ ಉಚಿತವಾಗಿ ಗದಗ ಕೆ ವಿ ಹಂಚಿನಾಳ ಡಯಗ್ನೋಸ್ಟಿಕ್ ಸೆಂಟರ್‌ನಿಂದ ಉಚಿತವಾಗಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಆದರೆ ಈಗ ವೈದ್ಯರು ಸೂಚಿಸಿದ ಸ್ಕ್ಯಾನಿಂಗ್ ಚೀಟಿಯನ್ನು ತೆಗೆದುಕೊಂಡು ರಿಯಾಯಿತಿಗಾಗಿ ಸ್ಕ್ಯಾನಿಂಗ್‌ಗೆ ಸಂಬಂಧಿಸಿದ ಎಬಿಆರ್‌ಕೆ ಕಚೇರಿಗೆ ಹೋಗಿ ಅಲ್ಲಿ ಅನುಮೋದನೆ ತೆಗೆದುಕೊಂಡು ಬಂದಾಗ ಮಾತ್ರ ಉಚಿತ ಸ್ಕ್ಯಾನಿಂಗ್ ಮಾಡುತ್ತಾರಂತೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಗೆ ಆಗಮಿಸುವ ರೋಗಿಗಳು ಸ್ಕ್ಯಾನಿಂಗ್ ಸಂದರ್ಭದಲ್ಲಿ ನಾಲ್ಕು ಗಂಟೆಗಳ ಕಾಲ ಕಾಯಬೇಕು. ರೋಗಿಗಳು ಈ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ರೋಗಿಗಳು ಎಬಿಆರ್‌ಕೆ ಅನುಮತಿಗಾಗಿ ಕಾಯುವುದು ಎಷ್ಟು ಸರಿ?. ಸಂಜೆಯ ನಂತರ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಎಬಿಆರ್‌ಕೆಯ ವ್ಯವಸ್ಥೆಯು ಸರಿಯಾದ ರೀತಿಯಲ್ಲಿ ಕಾರ್ಯ ನಿರ್ವಹಿಸುವುದಿಲ್ಲ. ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ಆಗಮಿಸುವ ಸುಮಾರು ದಿನನಿತ್ಯ 1,500 ಒಳ ಹಾಗೂ ಹೊರ ರೋಗಿಗಳ ಪೈಕಿ ಎರಡು ಅಥವಾ ಮೂರು ರೋಗಿಗಳಿಗೆ ಮಾತ್ರ ಸ್ಕ್ಯಾನಿಂಗ್ ಮಾಡುತ್ತಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಮ್ಸ್‌ನ ಹೊಸ ಕಟ್ಟಡದಲ್ಲಿ ಜಿಮ್ಸ್ ಆಡಳಿತದಲ್ಲಿರುವ ಸ್ಕ್ಯಾನಿಂಗ್ ಸೆಂಟರ್ ಇದೆ. ಅಲ್ಲಿಯೂ ಕೂಡ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಉಚಿತವಾಗಿ ಸ್ಕ್ಯಾನಿಂಗ್ ಮಾಡಬೇಕು. ಆದರೆ ಅಲ್ಲಿ ಇಂಥವರಿಗೆ ಉಚಿತವಾಗಿದೆಯೆಂದು ಯಾವುದೇ ಸೂಚನಾ ಫಲಕವಿಲ್ಲ. ಅಲ್ಲಿಯೂ ಜನರಿಂದ ಒಂದು ಸ್ಕ್ಯಾನಿಂಗ್‌ಗೆ ₹500 ಸುಲಿಗೆಮಾಡಿ ಜನರನ್ನು ವಂಚಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಕರ್ನಾಟಕ ಸರ್ಕಾರ ಉಚಿತ ಸ್ಕ್ಯಾನಿಂಗ್ ರದ್ದುಪಡಿಸಿ, ದರ ನಿಗದಿಯ ಆದೇಶ ಹೊರಡಿಸಿದ್ದಾರೆ. ಕೂಡಲೇ ಆ ಆದೇಶವನ್ನು ರದ್ದುಪಡಿಸಿ ಉಚಿತ ಚಿಕಿತ್ಸೆಯ ಆದೇಶವನ್ನು ಮಾಡಬೇಕು. ಜಿಮ್ಸ್ ಆಸ್ಪತ್ರೆಯಲ್ಲಿ ಯಾವುದೇ ಖಾಸಗಿ ವ್ಯಕ್ತಿಗಳಿಗೆ ಸ್ಕ್ಯಾನಿಂಗ್‌ನ ಪರವಾನಗಿ ನೀಡದೆ ಜಿಮ್ಸ್ ಆಡಳಿತಕ್ಕೆ ಅದರ ಜವಾಬ್ದಾರಿಯನ್ನು ನೀಡಬೇಕು. ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ. ಹಾಗಾಗಿ ಸರ್ಕಾರ ಬಡವರ ಹಿತಕಾಯಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಸರ್ಕಾರದ ಕಾನೂನು ಆದೇಶದಂತೆ ಅರಣ್ಯ ಒತ್ತುವರಿ ತೆರವು; ಅಡಕೆ ತೋಟ ಸಂಹಾರ  

“ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿಯವರು ಆಸ್ಪತ್ರೆಯ ಒಳಗೆ ಉಚಿತ ಚಿಕಿತ್ಸೆಯ ಯಾವುದೇ ಮಾಹಿತಿಯ ಫಲಕವನ್ನು ಹಾಕದೆ ಜನರನ್ನು ವಂಚಿಸುತ್ತಿದ್ದಾರೆ. ಇವರು ಅಧಿಕಾರ ವಹಿಸಿಕೊಂಡ ದಿನದಿಂದ ಒಂದಿಲ್ಲೊಂದು ವಿವಾದಕ್ಕೆ ಕಾರಣರಾಗುತ್ತಿದ್ದಾರೆ. ಇವರ ಆಡಳಿತ ಒಂದು ರೀತಿಯ ಹಿಟ್ಲರ್ ಆಡಳಿತ ಇದ್ದಂತಿದೆ. ಕೂಡಲೇ ಇವರನ್ನು ಆ ಹುದ್ದೆಯಿಂದ ವಜಾಮಾಡಿ ಜನಪರವಾಗಿ ಕೆಲಸ ಮಾಡುವ ಒಬ್ಬ ಒಳ್ಳೆಯ ಅಧಿಕಾರಿಯನ್ನು ನೇಮಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...