ಗದಗ | ಮುಖ್ಯ ರಸ್ತೆ ದುರಸ್ಥಿ ಮಾಡುವಂತೆ ಜಯ ಕರ್ನಾಟಕ ಸಂಘಟನೆ ಆಗ್ರಹ

Date:

ಗದಗ ಮುಖ್ಯ ರಸ್ತೆ ರೈಲ್ವೆ ಇಲಾಖೆಗೆ ಸಂಬಂಧಪಟ್ಟಿದ್ದು ಈ ರಸ್ತೆಯ ದುರಸ್ತಿ ಕಾಮಗಾರಿ ಮಾಡದೆ ಇರುವ ಕಾರಣ ರಸ್ತೆ ತುಂಬಾ ಹದಗೆಟ್ಟು ಹೋಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು.

ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ರೈಲ್ವೆ ಸೇತುವೆ ಕೆಳಗಡೆ ಇರುವ ಹೊಳೆ ಆಲೂರಿನಿಂದ ರೋಣಕ್ಕೆ ಹೋಗುವ ಮುಖ್ಯ ರಸ್ತೆ ದುರಸ್ಥಿ ಮಾಡಬೇಕು. ರಸ್ತೆಯ ಮಧ್ಯಭಾಗಕ್ಕೆ ಹಾಕಿರುವ ಕಬ್ಬಿಣದ ರಾಡುಗಳು ವಾಹನಗಳ ಗಾಲಿಗೆ ಸಿಕ್ಕು ವಾಹನ ಸವಾರರ ಜೀವ ಹೋಗುವ ಪರಿಸ್ಥಿತಿ ಉಂಟಾಗಿದೆ. ಈಗ ಮಳೆಗಾಲ ಪ್ರಾರಂಭವಾದ ಕಾರಣ ಮಳೆಯ ನೀರು ಸೇತುವೆ ಕೆಳಗಡೆ ಬಂದು ನಿಂತು ಮುಖ್ಯರಸ್ತೆ ಸಂಪೂರ್ಣ ಜಲಾವೃತ ಆಗಿಬಿಡುತ್ತದೆ ಮತ್ತು ಮಳೆಯ ನೀರು ಹರಿದು ಹೋಗುವುದಿಲ್ಲ. ನೀರು ಹರಿದು ಹೋಗುವ ಮಾರ್ಗ ಸರಿಯಾಗಿಲ್ಲ ಇದರಿಂದ ವಾಹನ ಸವಾರರು, ಪಾದಾಚಾರಿಗಳು ಹಾಗೂ ಸಾರ್ವಜನಿಕರು ಚಿಕ್ಕ-ಚಿಕ್ಕ ಮಕ್ಕಳನ್ನು ಕರೆದುಕೊಂಡು ಹೋಗಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟೆಲ್ಲಾ ತೊಂದರೆ ಆದರೂ ಕೂಡ ಇದನ್ನೆಲ್ಲಾ ನೋಡಿ ಸಾರ್ವಜನಿಕರು ನಮ್ಮ ಜಯ ಕರ್ನಾಟಕ ಸಂಘಟನೆ ಮುಂದೆ ತಮ್ಮ ತೊಂದರೆ ಹೇಳಿದ ಕಾರಣ ನಾವು ನಿಮಗೆ ಎಂಟು ದಿನಗಳ ಕಾಲಾವಕಾಶದಲ್ಲಿ ಈ ರಸ್ತೆ ಮತ್ತು ನೀರು ಹರಿದು ಹೋಗುವುದಕ್ಕೆ ಸರಿಯಾದ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಡಬೇಕೆಂದು ತಮ್ಮಲ್ಲಿ ಸಾಂಕೇತಿಕ ಮನವಿ ನೀಡುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

“ನಾವು ಕೊಟ್ಟ ಗಡುವ ಮುಗಿದ ನಂತರ ತಾವೇನಾದರೂ ಕಾಮಗಾರಿ ಮಾಡದೆ ಹೋದಲ್ಲಿ ಹೊಳೆ ಆಲೂರು ರೈಲ್ವೆ ಸ್ಟೇಷನ್‌ಗೆ ಬರುವ ಎಲ್ಲ ರೈಲುಗಳನ್ನು ತಡೆಯುತ್ತೇವೆ. ಈ ಕೆಲಸ ನಡೆಯುವ ಮುನ್ನವೇ ತಾವು ಎಚ್ಚೆತ್ತುಕೊಂಡು ಈ ಎಲ್ಲ ಕೆಲಸ ಮಾಡಿಕೊಟ್ಟು ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು” ಎಂದು ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...