ಗದಗ | ಮನರೇಗಾ ಕೆಲಸದ ನಂತರ ಕಾರ್ಮಿಕರಿಗೆ ಕಬಡ್ಡಿ, ಖೋಖೋ ಕ್ರೀಡೆ

Date:

ಗದಗ ಜಿಲ್ಲೆಯ ಮುಂಡರಗಿ ತಾಲೂಕು ಪಂಚಾಯತಿಯು ವಿಶಿಷ್ಟವಾಗಿ ಮನರೇಗಾ ಯೋಜನೆಗೆ ಸಾಂಸ್ಕೃತಿಕ, ಜನಪದ ಮೆರುಗು ನೀಡುತ್ತಿದೆ. ಮನರೇಗಾ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ಗ್ರಾಮೀಣ ಕೃಷಿ ಕೂಲಿ ಕಾರ್ಮಿಕರನ್ನು ಕೆಲಸದಲ್ಲಿ ತೊಡಗಿಸಲು ಮುಂಡರಗಿ ತಾಲೂಕು ಪಂಚಾಯತಿ ಮುಂದಾಗಿದೆ. ಜತೆಗೆ ಕೃಷಿ ಕಾರ್ಮಿಕರನ್ನು ಸೆಳೆಯಲು ಕೆಲಸ ಮುಗಿಸಿದ ನಂತರ ದೇಸಿ ಆಟಗಳನ್ನು ಆಡಿಸಲಾಗುತ್ತಿದೆ. ಮಹಿಳಾ ಕಾರ್ಮಿಕರಿಂದ ಸೋಬಾನ ಪದ (ಜನಪದ ಹಾಡು) ಹಾಡಿಸಿ ಮನರಂಜನೆಯನ್ನೂ ನೀಡಲಾಗುತ್ತಿದೆ. ಜೊತೆಗೆ ಕಬ್ಬಡ್ಡಿ, ಖೋಖೋ ಕ್ರೀಡೆಗಳನ್ನೂ ಆಡಿಸುತ್ತಿದೆ.

ದುಡಿಯುವ ಕೂಲಿಕಾರರಿಗೆ ಮನರಂಜನೆಯು ಮುಖ್ಯ. ಮಳೆಗಾಲ ಮರೀಚಿಕೆಯಾದ ಈ ದಿನಗಳ ನಡುವೆ ನರೇಗಾ ಯೋಜನೆ ಗ್ರಾಮೀಣ ಜನರಿಗೆ ದಾರಿದೀಪ. ಇದನ್ನು ಮನಗಂಡ ಮುಂಡರಗಿ ತಾಲೂಕು ಪಂಚಾಯತಿ ಸುಸ್ಥಿರ ನರೇಗಾ ಅಂಕಿ ಸಂಖ್ಯೆ ಅಭಿವೃದ್ಧಿಯತ್ತ ಸಾಂಸ್ಕೃತಿಕ, ಜನಪದ ಚಟುವಟಿಕೆಗಳ ಮೂಲಕ ಗಮನಹರಿಸಿ ಜನರಿಗೆ ಮಾಹಿತಿ ತಲುಪಿಸುತ್ತಿರುವುದು ಮಾದರಿಯಾಗಿದೆ.

ಪುರುಷರಿಗಿಂತ ಗ್ರಾಮೀಣ ಪ್ರದೇಶದ ಮಹಿಳೆಯರೇ ಈ ಆಟದಲ್ಲಿ ಹೆಚ್ಚು ತೊಡಗಿರುವುದು ಗಮನಿಸತಕ್ಕ ಅಂಶ. ಹಾಗಾಗಿ ಮುಂಡರಗಿ ತಾಲೂಕು ಪಂಚಾಯತ ಕಳೆದ ವರ್ಷ ನರೇಗಾ ಕಾಮಗಾರಿಗಳಲ್ಲಿ ಮಹಿಳಾ ಭಾಗವಹಿಸುವಿಕೆ ಪ್ರಮಾಣದಲ್ಲಿ ಶೇಕಡಾ 50% ರಷ್ಟು ಯಶಸ್ಸು ಸಾಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮನರೇಗಾ ಕಾಮಗಾರಿಗಳ ಜೀವನಾಡಿಯಾಗಿದೆ. ಭಾರತ ಹಳ್ಳಿಗಳಿಂದ ಕೂಡಿದ ದೇಶ. ಬೇಸಿಗೆ ಕಾಲದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರಿಗೆ ಕೆಲಸ ಸಿಕ್ಕರೆ ಆಗುವ ಅನುಕೂಲ ನೂರೆಂಟು. ಆ ದಿಶೆಯಲ್ಲಿ ಮುಂಡರಗಿ ತಾಪಂ ಕಾರ್ಯನಿರತವಾಗಿದೆ” ಎಂದು ಮುಂಡರಗಿ ತಾಲೂಕು ಪಂಚಾಯಿತಿ ಇಓ ವಿಶ್ವನಾಥ ಹೊಸಮನಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...