ಗದಗ |  ಕಮಲ್ ಹಾಸನ್ ಹೇಳಿಕೆ ಕನ್ನಡಿಗರಿಗೆ ನೋವು: ಕ್ಷಮೆ ಕೇಳಲು ಕರವೇ ಒತ್ತಾಯ

Date:

“ಕಮಲ್‌ ಹಾಸನ್ ಅವರು ಕನ್ನಡಿಗರ ಋಣದಲ್ಲಿ ಬದುಕುತ್ತಿದ್ದಾರೆ. ಕರ್ನಾಟಕದಲ್ಲಿ ಅವರ ಅಭಿಮಾನಿಗಳ ಸಂಖ್ಯೆ ಕೂಡ ಹೆಚ್ಚಾಗಿತ್ತು. ಅವರ ಈ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದು, ಕೂಡಲೇ ಅವರು ಕ್ಷಮೆ ಕೇಳಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಎಂ ಪಿ ಪಾರ್ವತಗೌಡ ಒತ್ತಾಯಿಸಿದರು.

ಗದಗ ಪಟ್ಟಣದಲ್ಲಿ ಪಾಳಾ-ಬಾದಾಮಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು  ಕನ್ನಡಕ್ಕೆ ಅವಮಾನಿಸಿದ ಬಹುಭಾಷಾ ನಟ ಕಮಲ್‌ ಹಾಸನ್ ಅವರ ಚಿತ್ರವನ್ನು ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು ಎಂದು ಕರವೇ (ಶಿವರಾಮೇಗೌಡ್ರ ಬಣ) ವತಿಯಿಂದ ಪ್ರತಿಭಟಿಸಿ ತಹಸೀಲ್ದಾರರಿಗಮನವಿ ಸಲ್ಲಿಸಿ ಮಾತನಾಡಿದರು.

“ಕರ್ನಾಟಕ ಹೈಕೋರ್ಟ್ ಕೂಡ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿತ್ತು. ಜೊತೆಗೆ ಕ್ಷಮೆ ಕೇಳುವಂತೆ ಸೂಚಿಸಿತ್ತು. ಹಠಮಾರಿ ಕಮಲ್ ಹಾಸನ್ ತನ್ನ ನೀಚ ಬುದ್ದಿ ಬಿಡುತ್ತಿಲ್ಲ. ತನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕನ್ನಡಿಗರ ಕ್ಷಮೆ ಕೇಳದಿದ್ದರೇ ನಾವು ನಿನ್ನ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ” ಎಂದು ಕಮಲ್‌ ಹಾಸನ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಮಲ್ ಹಾಸನ್ ಅವರು ಇತ್ತಿಚೆಗೆ ರಾಜಕೀಯ ಪಕ್ಷವೊಂದನ್ನು ಕಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಕನ್ನಡಿಗರಿಗೆ ಅವಮಾನಿಸಿದರೇ ತನಗೆ ರಾಜಕೀಯ ಲಾಭ ಆಗುತ್ತದೆ ಎನ್ನುವ ದುರುದ್ದೇಶ ಇಟ್ಟುಕೊಂಡು ಅವಮಾನಿಸಿದ್ದಾರೆ. ನಿಮ್ಮ ಈ ನೀತಿಯನ್ನು ತಮಿಳರು ಕ್ಷಮಿಸುವುದಿಲ್ಲ. ರಾಜ್ಯ-ರಾಜ್ಯಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿದರೆ ಜನ ಸಹಿಸುವುದಿಲ್ಲ. ರಾಜಕೀಯದಲ್ಲಿ ಈಗಾಗಲೇ ನೀವು ನಿಮ್ಮ ಅಸ್ತಿತ್ವ ಕಳೆದುಕೊಂಡಿದ್ದಿರಿ. ಇಂತಹ ಹೇಳಿಕೆಗಳಿಂದ ಪುಟಿದೆಳುತ್ತೇನೆ ಎನ್ನುವ ನಿಮ್ಮ ತಪ್ಪು ಕಲ್ಪನೆಯಿಂದ ದೂರವಿರಿ. ನಿಮ್ಮ ರಾಜಕಾರಣ ನಿಮ್ಮ ರಾಜ್ಯದಲ್ಲಿರಲಿ. ಆದರೆ, ಕನ್ನಡಿಗರನ್ನು ಅವಮಾನಿಸುವ ಹೇಳಿಕೆಯನ್ನು ಯಾರೂ ಸಹಿಸುವುದಿಲ್ಲ. ಇನ್ನೂ ಕಾಲ ಮಿಂಚಿಲ್ಲ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ನಮ್ಮ ಹೋರಾಟ ನಿರಂತರವಾಗಿರುತ್ತೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕರ್ತವ್ಯ ಲೋಪ ಎಸಗಿದ್ದಕ್ಕೆ ಪಿಡಿಒ ಅಮಾನತು

ಈ ಪ್ರತಿಭಟನೆ ಕರವೇ ಉತ್ತರ ಕರ್ನಾಟಕ ರೈತ ಘಟಕದ ಅಧ್ಯಕ್ಷ ಬಸಯ್ಯ ಗುಡ್ಡಿಮಠ, ಜಿಲ್ಲಾ ಗೌರವಾದ್ಯಕ್ಷ ಸುನೀಲ ಭಾರಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಮುಳ್ಳಾಳ, ಜಿಲ್ಲಾ ಹಮುಖಂಡರು ಬಶೀರ ಮುಳಗುಂದ, ಶಂಕ್ರಪ್ಪ ಬಿಂಗಿ, ಗದಗ ತಾಲೂಕಾಧ್ಯಕ್ಷ ಸಂತೋಷ ಕುಂಬಾರ, ಪ್ರಸಾದ ಪಾಟೀಲ, ಶರಣಪ್ಪ ಅಡ್ನುರ, ಮುತ್ತು ಬಿಳಿಯಲಿ, ಶರಣಪ್ಪ ಮಣ್ಣೂರ, ಮಂಜುನಾಥ ಕುರ್ತಕೋಟಿ, ಮೈಲಾರಿ ತಡಹಾಳ, ಕೊಟ್ರೇಶ ತಡಹಾಳ, ವಿರೇಶ ಬೊಮ್ಮಸಾಗರ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...