ಗದಗ | ಅನ್ಯಭಾಷೆ ಎಲ್ಲೆಲ್ಲಿ ಕಾಣುತ್ತಿದೆ, ಅಲ್ಲೆಲ್ಲ ಕನ್ನಡ ಭಾಷೆ ಕಾಣಬೇಕು: ಚಂದ್ರು ಪೂಜಾರ್

Date:

ನಮ್ಮ ಕನ್ನಡ ಭಾಷೆಯನ್ನು ಮಾತನಾಡುವ ನೆಲದಲ್ಲಿ ಕನ್ನಡ ಮರೆಯಾಗುತ್ತಿದೆ. ನಾವು ಮಾತನಾಡುವ ಕನ್ನಡ ಭಾಷೆಯನ್ನೇ ವ್ಯವಹಾರಿಕ ಭಾಷೆಯನ್ನಾಗಿ ಮಾಡಬೇಕು. ಆದರೆ ಅದು ಆಗುತ್ತಿಲ್ಲ. ಕನ್ನಡ ಭಾಷೆ ಇರುವ ಜಾಗದಲ್ಲಿ ಅನ್ಯ ಭಾಷೆಗಳೇ ಕಾಣುತ್ತಿರುವುದು ಬೇಸರದ ಸಂಗತಿ. ಹಾಗಾಗಿ “ಅನ್ಯ ಭಾಷೆ ಎಲ್ಲೆಲ್ಲಿ ಕಾಣುತ್ತಿದೆ, ಅಲ್ಲಲ್ಲಿ ಕನ್ನಡ ಭಾಷೆ ಕಾಣಬೇಕು” ಎಂದು ನಮ್ಮ ಕರವೇ ಗದಗ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಆಗ್ರಹಿಸಿದರು.

ಕರ್ನಾಟಕ ಸರ್ಕಾರ 40ರಷ್ಟು ಇಂಗ್ಲೀಷ್ ಹಾಗೂ 60ರಷ್ಟು ಕನ್ನಡ ಪದಗಳನ್ನು ಬಳಸಬೇಕೆಂದು ಆದೇಶವಾದರೂ ಪಾಲಿಸದಿರುವುದನ್ನು ಖಂಡಿಸಿ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ತಹಶೀಲ್ದಾರ್ ಎರ್ರಿಸ್ವಾಮಿ ಪಿ ಎಸ್ ಅವರಿಗೆ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿ ಮಾತನಾಡಿದರು.

“ಮುಂಡರಗಿ ಪಟ್ಟಣದಲ್ಲಿ ಈ ಆದೇಶವನ್ನು ಪಾಲಿಸದೆ ಅನ್ಯಭಾಷೆಗಳೇ ಕಾಣುತ್ತಿವೆ. ಇದರಿಂದ ಕನ್ನಡ ಭಾಷೆಯನ್ನು ಕಡೆಗಣಿಸುತ್ತಿದ್ದಾರೆ” ಎಂದು ನಮ್ಮ ಕರೆವೇ ಜಿಲ್ಲಾಧ್ಯಕ್ಷ ಚಂದ್ರು ಪೂಜಾರ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಟ್ಟಣದಲ್ಲಿ ಮನಬಂದಂತೆ ಕನ್ನಡ ಭಾಷೆಯ ಬದಲಿಗೆ ಅನ್ಯಭಾಷೆಯ ಬೋರ್ಡುಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಅವರಿಗೆ ಎಳ್ಳಷ್ಟು ಕನ್ನಡ ಭಾಷೆಯ ಮೇಲೆ ಗೌರವವಿಲ್ಲ. ಕನ್ನಡ ಅಭಿಮಾನಕ್ಕೆ ಕನ್ನಡಪರ ಸಂಘಟನೆಗಳಿಗೆ, ಧಕ್ಕೆ ತರುತ್ತಿದ್ದಾರೆ. ಕೂಡಲೇ ಪಟ್ಟಣದಲ್ಲಿ ಕಾರ್ಯರೂಪದಲ್ಲಿರುವ ಕನ್ನಡ ವಿರೋಧಿ ಬೋರ್ಡುಗಳನ್ನು ತೆರವುಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ವರದಿ-ಹೋರಾಟಕ್ಕೂ ಬಗ್ಗದ ಅಧಿಕಾರಿಗಳು; 6.90 ಕೋಟಿ ರೂ. ಅನುದಾನದ ಖರ್ಚಿಗೆ ಕುತಂತ್ರ!

“ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ, ನಾವೇ ಕನ್ನಡ ವಿರೋಧಿ ಅಕ್ಷರಗಳಿರುವ ಬೋರ್ಡುಗಳಿಗೆ ಕಪ್ಪು ಮಸಿ-ಬಳಿದು ತೆರುವುಗೊಳಿಸಬೇಕಾಗುತ್ತದೆ” ಎಂದು ಚಂದ್ರು ಪುಜಾರ್ ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಮೋಹನ್ ಪಾಟೀಲ್, ಮುಖಂಡರು ರಾಜಾಭಕ್ಷ ಕೆಂಪಸಾಬಣ್ಣವರ, ಇರ್ಫನ್ ಬೆಪಾರಿ, ಮಂಜುನಾಥ್ ವಡ್ಡಟ್ಟಿ, ಮಲ್ಲೇಶ್ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...