ಗದಗ | ಕಾನ್ಸಿರಾಂ ಸಾಹೇಬರ ಶ್ರಮ ಅರಿಯಬೇಕು: ಯಲ್ಲಪ್ಪ ಸಂಕೆಣ್ಣವರ

Date:

“ಕಾನ್ಸಿರಾಂ ಸಾಹೇಬರ ಶ್ರಮ ಅರಿತುಕೊಂಡು ಅವರ ಹಾದಿಯಲ್ಲೇ ಸಾಗಬೇಕಾಗಿದೆ. ಅಕ್ಕ ಮಾಯಾವತಿ ಜೀ ಅವರನ್ನು ಈ ಮುಂದಿನ ಚುನಾವಣೆಯಲ್ಲಿ ಬಹುಜನರು ಒಟ್ಟಾಗಿ ಪ್ರಧಾನಮಂತ್ರಿಯನ್ನಾಗಿ ಮಾಡಲು ಪ್ರತಿ ಗ್ರಾಮೀಣ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಬೇಕು. ಅವರಿಗೆ ಮತ ಹಾಕಿಸಿ ಗೆಲ್ಲಿಸಿ ಅಂಬೇಡ್ಕರ್ ಅವರ ಕನಸನ್ನು ಈಡೇರಿಸಲು ಶ್ರಮಿಸಬೇಕು” ಎಂದು ರಾಜ್ಯ  ಕಾರ್ಯದರ್ಶಿ ಯಲ್ಲಪ್ಪ ಸಂಕೆಣ್ಣವರ ಹೇಳಿದರು.

ಗದಗ ಪಟ್ಟಣದಲ್ಲಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಮಾನ್ಯವಾರ್ ಕಾನ್ಸಿರಾಂ ನಾಯಕರ ೧೯ನೇ ಪರಿನಿಬ್ಬಾಣ ಆಚರಣೆ ಮತ್ತು ಬಹುಜನ ಸಮಾಜ ಕಾರ್ಯಾಲಯ ಆರಂಭದೊಂದಿಗೆ ಕಾರ್ಯಕರ್ತರ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯ ಸಮಿತಿ ನಾಯಕರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಎಂ. ಬಿ. ಸಿದಗೋಣಿ ಮಾತನಾಡಿ, “ಬಹುಜನಗಳಾದ ನಾವೆಲ್ಲರೂ ಒಂದಾಗಬೇಕಿದೆ. ಬುದ್ಧ, ಬಸವ, ಅಂಬೇಡ್ಕರ್ ಅವರ ಆಶಯದ ಭಾರತವನ್ನು ನಿರ್ಮಿಸುವಲ್ಲಿ ಈಗಿನ ಬಿಜೆಪಿ ಕಾಂಗ್ರೆಸ್ ವಿಫಲವಾಗಿವೆ. ಬಿಜೆಪಿ ಸರ್ಕಾರವೂ ಖಾಸಗೀಕರಣಗೊಳಿಸಿ ಬಹುಜನರನ್ನು ಮೋಸಗೊಳಿಸುತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಅಧ್ಯಕ್ಷರು ಗುಡದಪ್ಪ ಕೆಂಚಪ್ಪ ತಳಗೇರಿ ಮಾತನಾಡಿ, “ಜಿಲ್ಲೆಯ ಎಲ್ಲಾ ತಾಲೂಕುಗಳು ಸೇರಿದಂತೆ ವಿವಿಧ ಜನರ ಬಳಿ ಹೋಗಿ ಪಕ್ಷದ ಸಿದ್ಧಾಂತ ತಿಳಿಸಿ, ಸಂವಿಧಾನ ಆಶಯಗಳನ್ನು ಹೊಂದಿರುವ ಬಿ ಎಸ್ ಪಿ ಪಕ್ಷವನ್ನು ಬೆಂಬಲಿಸಲಿ. ಸೈದ್ದಾಂತಿಕವಾಗಿ ಭ್ರಷ್ಟತೆ ಇಲ್ಲದೇ  ಡಂಬಚಾರ ರಾಜಕೀಯ ಮಾಡದಿರುವ ಏಕೈಕ ಪಕ್ಷ   ಬಿ ಎಸ್ ಪಿ ಆಗಿದೆ. ಮುಂದಿನ ದಿನಗಳಲ್ಲಿ ಅಕ್ಕ ಮಾಯಾವತಿ ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಿ ಅಂಬೇಡ್ಕರ್ ಅವರ ಕನಸನ್ನು ಈಡೇರಿಸಲು ಕಾರ್ಯಕರ್ತರು ಪಣತೊಟ್ಟು ನಿಲ್ಲಬೇಕಾಗಿದೆ” ಎಂದರು.

ಇದನ್ನು ಓದಿದ್ದೀರಾ? ಗದಗ | ರಾಜ್ಯೋತ್ಸವ ಪ್ರಶಸ್ತಿ ಸಮಿತಿಗೆ ಬಯಲಾಟ ಅಕಾಡೆಮಿ ಅಧ್ಯಕ್ಷರನ್ನೂ ನೇಮಕ ಮಾಡಲು ಆಗ್ರಹ

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ನಾಯಕರ ಆದೇಶದ ಮೇರೆಗೆ ನೂತನ ಪದಾಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಹನುಮಂತ ಮಾದರ, ಖಜಾಂಚಿ ಮಂಜುನಾಥ ಎಸ್, ಆಕಾಶ್ ಎಸ್ ಆಯ್ಕೆಯಾದರು. ರಾಜ್ಯ ಸಮಿತಿ ನಾಯಕರು, ಗದಗ ಜಿಲ್ಲೆಯ ವಿವಿಧ ತಾಲೂಕಿನ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...