ಗದಗ | ಬಸವಣ್ಣ ಪ್ರತಿಮೆ ಸುತ್ತಲು ತಡೆಗೋಡೆ ನಿರ್ಮಿಸುವಂತೆ ಕರವೇ ಆಗ್ರಹ

Date:

ಗದಗ-ಬೆಟಗೇರಿ ಹೃದಯ ಭಾಗದಲ್ಲಿರುವ ಭೀಷ್ಮ ಕೆರೆ ಬಳಿಯ ಬಸವಣ್ಣ ಪ್ರತಿಮೆ ಎದುರು ಕಸ, ಕಂಟಿಗಳು ತುಂಬಿವೆ. ಅದನ್ನು ಸ್ವಚ್ಛಗೊಳಿಸಿ, ಪ್ರತಿಮೆ ಸುತ್ತ ತಂತಿ ಬೇಲೆ ಆಳವಡಿಸಬೇಕು ಅಥವಾ ತಡೆಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದೆ. ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರಿಗೆ ಹಕ್ಕೊತ್ತಾಯ ಸಲ್ಲಿಸಿದೆ.

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ತೌಸಿಫ ಢಾಲಾಯತ, “ಭೀಷ್ಮ ಕೆರೆ ಬಳಿಯ ಬಸವಣ್ಣ ಪ್ರತಿಮೆ ಇರುವ ಸ್ಥಳ ಅವ್ಯವಸ್ಥೆಯಿಂದ ಕೂಡಿದೆ. ಪ್ರತಿಮೆಯ ಅಕ್ಕಪಕ್ಕದಲ್ಲಿ ಕಸ, ಕಂಟಿಗಳು ಬೆಳದಿದೆ. ಇಲ್ಲಿಗೆ ಬರುವ ಪ್ರವಾಸಿಗರಿಗೆ ಸರಿಯಾದ ಕುಡಿಯವ ನೀರಿನ ವ್ಯವಸ್ಥೆ, ಶೌಚಾಲಯ, ಕುಳಿತಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲ. ಚಿಕ್ಕ ಮಕ್ಕಳು ಬಂದರೆ, ಮಕ್ಕಳು ಆಟವಾಡಲು ಉದ್ಯಾನವನ ಸರಿಯಾದ ವ್ಯವಸ್ಥೆ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗದಗ ತಾಲೂಕು ಅಧ್ಯಕ್ಷ ದಾವಲಸಾಬ ತಹಶೀಲ್ದಾರ ಮಾತನಾಡಿ, “ಕರೆ ಬಳಿಕ ಅವ್ಯವಸ್ಥೆಯನ್ನು ಒಂದು ತಿಂಗಳ ಒಳಗಾಗಿ ಸರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಉಪಾಧ್ಯಕ್ಷ ಮುತ್ತಣ್ಣ ಚವಡಣ್ಣವರ, ಯುವ ಘಟಕದ ಉಪಾಧ್ಯಕ್ಷರಾದ ಕುಮಾರ ರಾವಣ್ಣವರ, ಜಿಲ್ಲಾ ವಕ್ತಾರರಾದ ವಿರುಪಾಕ್ಷಪ್ಪ ಹಿತ್ತಲಮನಿ, ತಾಲೂಕ ಸಂಚಾಲಕರಾದ ಸಲೀಂ ಬೋಧಖಾನ, ತಾಲೂಕ ಘಟಕದ ಕಾರ್ಯದರ್ಶಿ ನಿಯಾಜ್ ಶೇಖರವರು, ಕಾರ್ಮಿಕ ಘಟಕದ ಉಪಾಧ್ಯಕ್ಷರಾದ ಇರ್ಫಾನ ತಾಳಿಕೋಟಿ, ನಗರ ಘಟಕದ ಪ್ರಧಾನ ಕಾರ್ಯದರ್ಶಿ ಸಲೀಮ ಶಿರವಾರ, ಮುಳಗುಂದ ಘಟಕದ ಅಧ್ಯಕ್ಷರಾದ ಹುಸೇನ ಅಕ್ಕಿ, ತಾಲೂಕ ಸಾಮಾಜಿಕ ಜಾಲತಾಣ ಮುಸ್ತಾಕ ಡಾವಣಗೇರಿ, ಇಸಾಕ್ ನದಾಫ, ಗೌಸುಸಾಬ ಶಿರಹಟ್ಟಿ, ಸುಲೇಮಾನ ಮಂಜಾಲಪೂರ. ಮಹಾಂತೇಶ ನಡಗೇರಿ, ಸದಾಶಿವ ಸೊರಟೂರ, ಮುನ್ನಾ ಪಠಾಣ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...