ಗದಗ | ಅನುಕಂಪದ ಆಧಾರದ ಮೇಲೆ ನೀಡುವ ಗ್ರೂಪ್ ‘ಡಿ’ ಹುದ್ದೆಗೆ ಮರಣ ಶಾಸನ ಬರೆದ ಕರ್ನಾಟಕ ಸರಕಾರ: ಮುತ್ತು ಬಿಳಿಯಲಿ 

Date:

“ಮರಣ ಹೊಂದಿದ ಸರ್ಕಾರಿ ನೌಕರನ ಕುಟುಂಬಕ್ಕೆ ಆರ್ಥಿಕ ತೊಂದರೆ ಉಂಟಾಗದಂತೆ, ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದು. ಈ ನಿಯಮವು ಮುಖ್ಯವಾಗಿ ಪತ್ನಿ, ಅವಿವಾಹಿತ ಮಕ್ಕಳು, ಮತ್ತು ಕೆಲವು ವಿಶೇಷ ಸಂದರ್ಭಗಳಲ್ಲಿ ಸಹೋದರರಿಗೂ ಕೊಡಬಹುದು. ಆದರೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅನುಕಂಪದ ಆಧಾರದ ಮೇಲೆ ನೀಡುವ ಗ್ರೂಪ್ ‘ಡಿ’ ಹುದ್ದೆಗೆ ಕರ್ನಾಟಕ ಸರಕಾರ ಮರಣ ಶಾಸನ ಬರೆದಿದೆ” ಎಂದು ದಲಿತ ಹೋರಾಟಗಾರ ಮುತ್ತು ಬಿಳಿಯಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗದಗ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀದಿದ ಅವರು, “ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈ ಹಿಂದೆ ಕರ್ತವ್ಯದಲ್ಲಿ ನಿಧನವಾದರೇ ಅವರ ಕುಟುಂಬದ ಸದಸ್ಯರಿಗೆ ಅವರ ಶೈಕ್ಷಣಿಕ ಆಧಾರದಲ್ಲಿ ಸರ್ಕಾರ ಗ್ರೂಪ್ ಡಿ ಹಾಗೂ ಗ್ರೂಪ್ ಸಿ ಹುದ್ದೆಯನ್ನು ನೀಡುತ್ತಿತ್ತು. ಈಗ ಇದೇ ವರ್ಷ ಕಳೆದ ಜುಲೈ ತಿಂಗಳಲ್ಲಿ ಕರ್ನಾಟಕ ಸರ್ಕಾರ ಒಂದು ಆದೇಶ ಹೊರಡಿಸಿದೆ. ಇನ್ನು ಮುಂದೆ ಅನುಕಂಪದ ಆಧಾರದ ಮೇರೆಗೆ ನೀಡುವ ಗ್ರೂಪ್ ‘ಡಿ’ಹುದ್ದೆಗಳನ್ನು ನೀಡಬಾರದು ಹಾಗೂ ಅಂತಹ ಅರ್ಜಿಗಳನ್ನು ಸ್ವಿಕರಿಸಬಾರದು” ಎಂದು ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಆದೇಶ ಹೊರಡಿಸಿದೆ” ಎಂದರು.

“ಸರ್ಕಾರ ಹೊರಡಿಸಿರುವ ಈ ಆದೇಶ ಗ್ರೂಪ್ ‘ಡಿ’ ಹುದ್ದೆಗಳಿಗೆ ಮಾತ್ರ. ಇನ್ನೂಳಿದ ವಿವಿಧ ವೃಂದದ ಹುದ್ದೆಗಳಿಗೆ ಇದು ಅನ್ವಯಿಸುವುದಿಲ್ಲಂತೆ” ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250920 WA0424

“ಈ ಹಿಂದೆ ಈ ಆದೇಶ ಬರುವ ಮುಂಚೆ ಅಂದರೆ ಜುಲೈ 2025 ರ ಮುಂಚೆ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯದಲ್ಲಿ ನಿಧನರಾಗಿ ಅವರ ಕುಟುಂಬದವರು ಕಡಿಮೆ ವಿದ್ಯಾರ್ಹತೆಯಿಂದ ಗ್ರೂಪ್ ‘ಡಿ’ ಹುದ್ದೆಗಳಿಗೆ ಸುಮಾರು ನೂರಕ್ಕಿಂತ ಹೆಚ್ಚು ಜನ ಅರ್ಜಿಗಳನ್ನು ಸಲ್ಲಿಸಿ ನಮಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ‘ಡಿ’ ನೌಕರಿ ಸಿಗುತ್ತದೆ. ಮುಂದೆ ಮನೆಯ ಜವಾಬ್ದಾರಿಯನ್ನು ವಹಿಸಿಕೊಂಡು ಜೀವನ ಸಾಗಿಸುವ ಕನಸನ್ನ ಹೊಂದಿದ್ದರು” ಎಂದು ಹೇಳಿದರು.

“ಆದರೆ ಸರ್ಕಾರದ ಈ ಆದೇಶದಿಂದ ಅವರ ನೌಕರಿಯ ಕನಸು ಮುರಿದು ಬಿದ್ದಿದೆ. ಈ ಹಿಂದೆ ಅರ್ಜಿ ಸಲ್ಲಿಸಿದ ನೂರಾರು ಅವಲಂಬಿತರಿಗೆ ಈ ಆದೇಶ ಗೊತ್ತೆ ಇಲ್ಲ. ಸಂಸ್ಥೆಯು ಕೂಡ ಗ್ರೂಪ್ ‘ಡಿ’ ಹುದ್ದೆ ರದ್ದಾಗಿರುವ ಕುರಿತು ನೌಕರಿಗಾಗಿ ಅರ್ಜಿ ಸಲ್ಲಿಸಿದವರಿಗೆ ಯಾವುದೇ ಮಾಹಿತಿ ಕೊಟ್ಟಿಲ್ಲ” ಎಂದರು.

“ಸರ್ಕಾರದ ಈ ಆದೇಶದಿಂದ ಸಾರಿಗೆ ಸಂಸ್ಥೆಗಳಲ್ಲಿ ಕೆಲಸ ಮಾಡಿ ನಿಧನರಾದ ಕುಟುಂಬದವರು ಈಗ ಬೀದಿ ಪಾಲಾಗುತ್ತಾರೆ. ಸರ್ಕಾರ ಈ ಆದೇಶವನ್ನು ಮರು ಪರಿಶೀಲನೆ ಮಾಡಿ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ರದ್ದುಮಾಡಬೇಕು. ಈ ಹಿಂದೆ ಇದ್ದ ಅನುಕಂಪದ ಆಧಾರದ ನೌಕರಿ ಆದೇಶವನ್ನು ಅನುಸರಿಸಿ ಸಂಸ್ಥೆಯಲ್ಲಿ ದುಡಿದು ನಿಧನ ಹೊಂದಿದ ನೌಕರನ ಕುಟುಂಬದವರಿಗೆ ನ್ಯಾಯ ಒದಗಿಸಿ ಕೊಡಬೇಬೇಕೆಂದು ಗದಗ ಜಿಲ್ಲೆಯ ದಲಿತ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸುತ್ತೇವೆ” ಎಂದು ಮುತ್ತು ಬಿಳಿಯಲಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...