ಗದಗ | 6ನೇ ದಿನದ ಲಕ್ಕುಂಡಿ ಉತ್ಖನನ; ಮೂಳೆ, ಮಣ್ಣಿನ ಬಿಲ್ಲೆಗಳು ಪತ್ತೆ

Date:

ಪ್ರಸಿದ್ಧ ಐತಿಹಾಸಿಕ ಸ್ಥಳ ಲಕ್ಕುಂಡಿ ಗ್ರಾಮದಲ್ಲಿನ ಉತ್ಖನನ ಕಾರ್ಯ ಆರನೇ ದಿನಕ್ಕೆ ಕಾಲಿಟ್ಟಿದ್ದು, ಐತಿಹಾಸಿಕ ಪಾಣಿಪೀಠ, ಮೂಳೆ ತುಂಡುಗಳು, ಮಣ್ಣಿನ ಬಿಲ್ಲೆ(ನಾಣ್ಯ) ಹಾಗೂ ಮಣ್ಣಿನ ಚೂರುಗಳು ಪತ್ತೆಯಾಗಿದ್ದು, ಮತ್ತಷ್ಟು ಇತಿಹಾಸಕ್ತರಿಗೆ ಕುತೂಹಲ ಮೂಡಿಸಿದೆ.

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರ ದೇವಾಲಯದ ಮುಂಭಾಗದ ಅವರಣದಲ್ಲಿ ಇಂದಿಗೆ ಆರು ದಿನಗಳಿಂದ ಉತ್ಖನನದ ಕಾರ್ಯ ಭರದಿಂದ ನಡೆದಿದೆ.

ಎರಡು ಮೂರನೇ ದಿನದ ಶಿವಲಿಂಗದ ಪಾಣಿಪೀಠ, ಕಲ್ಲಿನ ಗಂಟೆ, ನಾಗರಹಾವಿನ ಕಲ್ಲು ಹಾಗೂ ಈಶ್ವರ ಲಿಂಗ ಪತ್ತೆಯಾಗಿದ್ದವು. ನಾಲ್ಕನೇ ದಿನದ ಉತ್ಖನನದಲ್ಲಿ ಒಂದು ಕಲ್ಲಿನ ಕೊಡಲಿ ಹಾಗೂ ಇನ್ನೊಂದು ಕಟ್ಟಡದ ಮೇಲ್ಛಾವಣಿಗೆ ಬಳಸುವ ಕಲ್ಲಿನ ಬೋದಿ ಪತ್ತೆಯಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002814532

ಐದನೇ ದಿನದ ಉತ್ಖನನದಲ್ಲಿ ಎರಡು ಅವಶೇಷಗಳು ಪತ್ತೆಯಾಗಿವೆ. ಒಡೆದ ಮಡಿಕೆ ಆಕೃತಿಯ ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು, ಹಳೆಯ ಕಾಲದ್ದು ಎನ್ನಲಾಗಿದೆ. ಇನ್ನೊಂದು ಎರಡು ತುಂಡುಗಳಾಗಿರುವ ಸ್ಥಿತಿಯಲ್ಲಿ ಪಾಣಿಪೀಠ ಸಿಕ್ಕಿದ್ದು, ಜಿನ ಬಿಂಬವುಳ್ಳ ಪೀಠ (ತೃಟಿತ) ಅರ್ಧ ಭಾಗದ ಪ್ರಾಚ್ಯಾವಶೇಷ ಪತ್ತೆಯಾಗಿದೆ. ಜಿನ ಬಿಂಬವುಳ್ಳ ಪೀಠದ ಒಂದು ಭಾಗದಲ್ಲಿ ಪದ್ಮಾಸನ ಭಂಗಿಯಲ್ಲಿ ಕೈಮುಗಿದು ಕುಳಿತ ರೂಪದ ಕಲಾಕೃತಿಯಿದೆ. ವೈಜ್ಞಾನಿಕವಾಗಿ ಜೋಡಿಸಿ ಮೂಲ ಸ್ವರೂಪಕ್ಕೆ ತರಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1002814279

ಉತ್ಖನನ ಕಾರ್ಯ ಇಂದು(ಬುಧವಾರ) ಆರನೇ ದಿನಕ್ಕೆ ಕಾಲಿಟ್ಟಿದ್ದು, ಮೂಳೆಯ ತುಂಡುಗಳು ಹಾಗೂ ಪ್ರಾಚೀನ ಕಾಲದ ಮಣ್ಣಿನ ಬಿಲ್ಲೆಗಳು ಹಾಗೂ ವಿಶಿಷ್ಟವಾದ ಮಡಿಕೆ ಚೂರುಗಳು (Pottery Shards) ಪತ್ತೆಯಾಗಿವೆ.

1002814602

ಸಿಕ್ಕ ಐದಾರು ಚಿಕ್ಕ ಚಿಕ್ಕ ಮೂಳೆಯ ತುಂಡುಗಳು ಉತ್ಖನನ ಉಸ್ತುವಾರಿ ಸಿಬ್ಬಂದಿಗಳು ಸೂಕ್ಷ್ಮವಾಗಿ ಸಂಗ್ರಹಿಸುತ್ತಿದ್ದಾರೆ. ಈ ಮೂಳೆಗಳು ಪ್ರಾಣಿಗಳದ್ದಾ ಅಥವಾ ಮನುಷ್ಯರದ್ದ ಎನ್ನುವ ಮಾಹಿತಿ ಸಿಕ್ಕಿಲ್ಲ. ಪರೀಕ್ಷೆಗಳ ನಂತರ ಸ್ಪಷ್ಟನೆ ಸಿಗಲಿದೆ. 

ಇನ್ನೂ ಪತ್ತೆಯಾದ ಮಣ್ಣಿನ ಬಿಲ್ಲೆ(ನಾಣ್ಯ) ಮತ್ತು ಮಡಿಕೆ ಚೂರುಗಳನ್ನು ಪುರಾತತ್ವ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಇವುಗಳ ಕಾಲಮಾನ ಮತ್ತು ಅಂದಿನ ಜನರ ಜೀವನಶೈಲಿಯ ಕುರಿತು ಹೆಚ್ಚಿನ ಅಧ್ಯಯನ ನಡೆಯಲಿದೆ.

ಪುರಾತತ್ವ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಉತ್ಖನನ ನಡೆಯುತ್ತಿದೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...