ಗದಗ | ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಸೂಳಿಬಾವಿ ಕಿಡಿ

Date:

ದಿಂಗಾಲೇಶ್ವರ ಸ್ವಾಮೀಜಿ ಒಬ್ಬ ತಂತ್ರಗಾರ ರಾಜಕಾರಣಿಗೆ ಸಮನಾದವರು. ತಂತ್ರ–ಕುತಂತ್ರ ಮಾಡುವುದರಲ್ಲಿ ಎತ್ತಿದ ಕೈ. ಬ್ಲಾಕ್‌ಮೇಲ್‌ ಮಾಡುವುದರಲ್ಲೂ ನಿಸ್ಸೀಮ. ಹಾಗಾಗಿ, ಅವರು ಮಠ ತ್ಯಜಿಸಿ, ತಮ್ಮ ವ್ಯಕ್ತಿತ್ವಕ್ಕೆ ಅನುಗುಣವಾಗಿ ಯಾವುದಾದರೂ ರಾಜಕೀಯ ಪಕ್ಷ ಸೇರಿಕೊಳ್ಳಬೇಕು. ಇಲ್ಲವಾದರೆ ಭಕ್ತರೇ ಅವರನ್ನು ತ್ಯಜಿಸುತ್ತಾರೆ ಎಂದು ಸಾಹಿತಿ ಬಸವರಾಜ ಸೂಳಿಬಾವಿ ತಿಳಿಸಿದರು.

ಗದಗ ನಗರದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ನನ್ನ ವಿರೋಧ ಇರುವುದು ಪ್ರಲ್ಹಾದ ಜೋಶಿ ವಿರುದ್ಧವೇ ಹೊರತು, ಬಿಜೆಪಿ ಮೇಲಲ್ಲ ಎನ್ನುತ್ತಾರೆ. ಜೋಶಿ ಅವರಿಂದ ಲಿಂಗಾಯತರಿಗೆ ಅನ್ಯಾಯವಾಗಿದೆ ಎನ್ನುತ್ತಾರೆ. ಆದರೆ, ಯಾವ ರೀತಿ ಅನ್ಯಾಯ ಆಗಿದೆ? ಎಲ್ಲೆಲ್ಲಿ ಅನ್ಯಾಯ ಆಗಿದೆ? ಎಂಬ ವಿಷಯಗಳನ್ನು ಸ್ಪಷ್ಟಪಡಿಸುವುದಿಲ್ಲ. ಅಂಕಿ ಸಂಖ್ಯೆಗಳ ಸಹಿತವಾಗಿ ಆರೋಪ ಮಾಡಿದರೆ ಅದಕ್ಕೊಂದು ಅರ್ಥ ಇರುತ್ತದೆ” ಎಂದರು.

“ಹಿಂದೂ ಧರ್ಮದ ಅಡಿ ಎಲ್ಲ ಧರ್ಮಗಳನ್ನು ಆಪೋಶನ ತೆಗೆದುಕೊಳ್ಳುವ ಪ್ರಯತ್ನವನ್ನು ಬಿಜೆಪಿ ನಿರಂತರವಾಗಿ ಮಾಡುತ್ತಿದೆ. ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ನಡೆದಾಗ ಇದೇ ಕಾರಣಕ್ಕೆ ಬಿಜೆಪಿ ಅದನ್ನು ಬೆಂಬಲಿಸಲಿಲ್ಲ. ಅಷ್ಟೇ ಏಕೆ, ದಿಂಗಾಲೇಶ್ವರ ಸ್ವಾಮೀಜಿ ಕೂಡ ಇದನ್ನು ವಿರೋಧಿಸಿದ್ದರು. ಅಂತಹವರು ಇವತ್ತು ಲಿಂಗಾಯತರಿಗೆ ಅನ್ಯಾಯವಾಗಿದೆಯೆಂದು ಹೇಳುತ್ತಿದ್ದಾರೆ. ಇದೇ ಮೊದಲ ಬಾರಿಗೆ ಅವರ ಬಾಯಿಂದ ಲಿಂಗಾಯತ ಎಂಬ ಪದ ಹೊರಬಂದಿದೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಲಿಂಗಾಯತ ಪರಂಪರೆ ಹತ್ತಿಕ್ಕುವ, ನಾಶಗೊಳಿಸುವ ಪ್ರಯತ್ನದ ವಿರುದ್ಧ ಹೋರಾಟ ನಡೆಸುವುದಾದರೆ ಅದಕ್ಕೊಂದು ಅರ್ಥ ಇದೆ. ಆದರೆ, ಅವರು ಆ ಮಾತನ್ನು ಹೇಳುತ್ತಿಲ್ಲ. ಜೋಶಿ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಾರೆ. ಈ ಸ್ಪರ್ಧೆಯ ಹಿಂದೆ ಅನೇಕ ತಂತ್ರಗಾರಿಕೆ ಅಡಗಿದೆ” ಎಂಬ ಅನುಮಾನ ವ್ಯಕ್ತಪಡಿಸಿದರು.

“ದಿಂಗಾಲೇಶ್ವರ ಸ್ವಾಮೀಜಿ ತಂತ್ರಗಳ ಮೂಲಕವೇ ಮೂರುಸಾವಿರ ಮಠಕ್ಕೆ ಪೀಠಾಧೀಶರಾಗಲು ಹೊರಟ್ಟಿದ್ದರು. ಹುಬ್ಬಳ್ಳಿಯ ‌ರಾಜಕಾರಣಿಗಳು ಪಕ್ಷಾತೀತವಾಗಿ ಇದನ್ನು ವಿರೋಧಿಸಿದ್ದರು. ಅವರಲ್ಲಿ ಜೋಶಿ ಕೂಡ ಒಬ್ಬರು. ಆಗ ವಿರೋಧ ಮಾಡಿದವರ ವಿರುದ್ಧ ಸ್ಪರ್ಧೆ ಮಾಡುವುದು ಇವರ ಈಗಿನ ಉದ್ದೇಶ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಿದರೆ ಕಾಂಗ್ರೆಸ್‌ ಬೆಂಬಲಿಸುತ್ತದೆ. ಜೋಶಿ ಕೂಡ ಹೊಂದಾಣಿಕೆಗೆ ಬರಬಹುದೆಂಬ ತಂತ್ರಗಾರಿಕೆ ಇದರ ಹಿಂದೆ ಅಡಗಿದೆ. ಮೂರುಸಾವಿರ ಮಠದ ಪೀಠಾಧೀಶರಾಗಲು ಇದ್ದ ವಿರೋಧ ತಣ್ಣಗೆ ಮಾಡಲು, ಇವತ್ತಿನ ರಾಜಕಾರಣವನ್ನು ಬಳಸಿಕೊಳ್ಳುತ್ತಿದ್ದಾರೆಯೇ ಹೊರತು, ಜೋಶಿ ಅವರ ಮೇಲೆ ತಾತ್ವಿಕ ವಿರೋಧಗಳು ಏನಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಹೊಳೆ ಮಣ್ಣೂರಲ್ಲಿ ಮನರೇಗಾ ಕೂಲಿ ಕಾರ್ಮಿಕರೊಂದಿಗೆ ಅಂಬೇಡ್ಕರ್ ಜಯಂತಿ ಆಚರಣೆ 

“ಒಂದು ಊರಿನ ಸೌಹಾರ್ದ ಉಳಿಸಿಕೊಂಡು ಹೋಗಲು ಸಾಧ್ಯವಾಗಿಲ್ಲ. ಜನರ ವೈಮನಸ್ಸನ್ನು ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಬದಲಾಗಿ ಅವರನ್ನು ವ್ಯವಸ್ಥಿತವಾಗಿ ಹಣಿಯುವ ಕೆಲಸ ಮಾಡಿದ್ದಾರೆ. ಇವರ ವಿರುದ್ಧ ಅನೇಕ ಪ್ರಕರಣಗಳಿದ್ದು, ಬಂಧಿಸುವಂತೆ ನಿರಂತರ ಹೋರಾಟ ಮಾಡಿದ್ದೇವೆ. ಸ್ವಾಮಿತ್ವಕ್ಕೆ ಬೇರೆ ಅರ್ಥ ಇದೆ. ಆದರೆ, ಸ್ವಾಮಿ ಅನ್ನಿಸಿಕೊಳ್ಳುವ ಯಾವ ಅರ್ಹತೆಯೂ ಇವರಿಗೆ ಇಲ್ಲ. ರಾಜಕಾರಣದ ಎಲ್ಲ ಗುಣಗಳೂ ಇವರಲ್ಲಿದ್ದು, ಮಠ ಬಿಟ್ಟು ನೇರವಾಗಿ ರಾಜಕಾರಣಕ್ಕೆ ಇಳಿಯಲಿ. ಅದುಬಿಟ್ಟು, ಮಠವನ್ನು, ಸ್ವಾಮಿತ್ವವನ್ನು ಬೆದರುಬೊಂಬೆ ರೀತಿ ಇನ್ನೊಬ್ಬರ ವಿರುದ್ಧ ಬಳಸಿಕೊಳ್ಳುವುದು ಸರಿಯಾದ ಕ್ರಮವಲ್ಲ” ಎಂದು ದೂರಿದರು.

ಪತ್ರಿಕಾಗೋಷ್ಟಿಯಲ್ಲಿ ಮುತ್ತು ಬಿಳಿಯಲಿ, ಶೇಖಣ್ಣ ಕವಳಿಕಾಯಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...