ಗದಗ | ಲೋಕಸಭಾ ಚುನಾವಣೆ; ಚುನಾವಣಾ ಕಾರ್ಯ ನಿರ್ವಹಣೆಗೆ ಸಮಿತಿ ರಚನೆ

Date:

ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ಕಾರ್ಯಕ್ಕೆ ವಿವಿಧ ನೋಡಲ್ ಅಧಿಕಾರಿಗಳನ್ನು ಈಗಾಗಲೇ ನೇಮಕ ಮಾಡುವ ಮೂಲಕ ಸಮಿತಿಗಳನ್ನು ರಚಿಸಲಾಗಿದೆ. ನೋಡಲ್ ಅಧಿಕಾರಿಗಳು ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಸಭಾ ಚುನಾವಣೆ ಸಿದ್ಧತೆಗಳ ಕುರಿತಂತೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಮಾದರಿ ನೀತಿ ಸಂಹಿತೆ ಜಾರಿಯಾದ ತಕ್ಷಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಪ್ರಚುರಪಡಿಸಿದ ವಿವಿಧ ಯೋಜನೆಗಳ, ನಾಯಕರುಗಳ ಪೋಸ್ಟರ್ಸ್‌, ಬ್ಯಾನರ್, ಕಟೌಟ್‍ಗಳನ್ನು ತಕ್ಷಣ ತೆರವುಗೊಳಿಸಬೇಕು. ಜನಪ್ರತಿನಿಧಿಗಳಿಗೆ ನೀಡಲಾದ ಸರ್ಕಾರಿ ವಾಹನಗಳನ್ನು ಹಿಂಪಡೆಯಬೇಕು. ವಿವಿಧ ರಾಜಕೀಯ ಪಕ್ಷಗಳು ನಡೆಸುವ ಸಭೆ ಸಮಾರಂಭಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಅನುಮತಿ ಇಲ್ಲದೇ ಕಾರ್ಯಕ್ರಮ ನಡೆದಲ್ಲಿ ನಿಯಮಾನುಸಾರ ಕ್ರಮ ವಹಿಸಬೇ‌ಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಬ್ಯಾಂಕ್ ವಹಿವಾಟಿನ ಪರಿಶೀಲನೆ ನಡೆಸಲು ಬ್ಯಾಂಕ್‍ನ ನೋಡಲ್ ಅಧಿಕಾರಿಗಳ ಸಭೆಯನ್ನು ಜರುಗಿಸಬೇಕು. ಚೆಕ್‍ಪೋಸ್ಟ್‌ನಲ್ಲಿ ಬರುವ ವಾಹನಗಳ ತಪಾಸಣೆ ಕಾರ್ಯ ಶಿಸ್ತುಬದ್ಧವಾಗಿ ನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳಿದ್ದರೆ ಚುನಾವಣಾ ಸಹಾಯವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಿ ಸಲಹೆ ಪಡೆಯಬಹುದಾಗಿದೆ. ಒಟ್ಟಾರೆಯಾಗಿ ವಿವಿಧ ನೋಡಲ್ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯವನ್ನು ಕಟ್ಟುನಿಟ್ಟಾಗಿ ನಿರ್ವಹಿಸಿ ಚುನಾವಣಾ ಕಾರ್ಯ ಯಶಸ್ವಿಗೊಳಿಸಬೇಕು” ಎಂದರು.

“ಪತ್ರಿಕೆಗಳಲ್ಲಿ ಪ್ರಕಟವಾಗುವ, ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸಂದರ್ಶನ, ಏಕ ವ್ಯಕ್ತಿ ಕೇಂದ್ರಿತ ಸುದ್ದಿಗಳ ಮೇಲೆ ನಿಗಾ ವಹಿಸಿ, ಪೇಯ್ಡ್ ಸುದ್ದಿಯ ಕುರಿತು ಎಚ್ಚರಿಕೆ ವಹಿಸಬೇಕು. ಚುನಾವಣೆಗಾಗಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಪತ್ರಿಕೆಗಳು, ಸುದ್ದಿವಾಹಿನಿಗಳು ಮುಂತಾದ ಮಾಧ್ಯಮಗಳ ಮೂಲಕ ನೀಡುವ ಜಾಹೀರಾತುಗಳ ಮೇಲೆ, ಮಾಧ್ಯಮಗಳಲ್ಲಿ ಬರುವ ಸುದ್ದಿಗಳ ಮೇಲೆ ಸಮಿತಿಯು ನಿಗಾ ವಹಿಸಬೇಕು. ಜಾಹೀರಾತು ವೆಚ್ಚದ ಮಾಹಿತಿಯನ್ನು ಆರ್‌ಒ, ಎಕ್ಸ್‌ಪೆಂಡಿಚರ್ ಅಧಿಕಾರಿಗೆ ಪ್ರತಿದಿನ ನೀಡಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತು, ಸುದ್ದಿಗಳನ್ನು ಗುರುತಿಸಿ ವರದಿ ಮಾಡಬೇಕು” ಎಂದು ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯ ಕಾರ್ಯಗಳು, ಜವಾಬ್ದಾರಿಗಳ ಕುರಿತು ಜಿಲ್ಲಾಧಿಕಾರಿ ವೈಶಾಲಿ ಅವರು ನಿರ್ದೇಶನ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ

ಸಭೆಯಲ್ಲಿ ಇವಿಎಂ ಮ್ಯಾನೇಜ್‍ಮೆಂಟ್, ಪೋಸ್ಟಲ್ ಬ್ಯಾಲೆಟ್, ಇಟಿಸಿ (ಚುನಾವಣಾ ತರಬೇತಿ ಪ್ರಮಾಣ ಪತ್ರ), ಅಂಗವಿಕಲರು ಹಾಗೂ 80 ವರ್ಷದ ಹಿರಿಯ ನಾಗರಿಕರಿಗೆ ಮನೆಗೆ ತೆರಳಿ ಮತದಾನದ ವ್ಯವಸ್ಥೆ ಕುರಿತು ಚರ್ಚಿಸಿದರು.

ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಸಂಖ್ಯಾ ಸಂಗ್ರಹಣಾಧಿಕಾರಿ ಎ ಎ ಕಂಬಾಳಿಮಠ, ಲೀಡ್ ಬ್ಯಾಂಕ್ ಮ್ಯಾನೇಜರ್ ಜಬ್ಬಾರ ಅಹ್ಮದ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎ ರಡ್ಡೇರ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...