ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

Date:

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ ತಾಲ್ಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾ‌ ಭವನದಲ್ಲಿ ಬೆಳಿಗ್ಗೆ 10:30 ಗಂಟೆಗೆ ಲೋಕಾಯುಕ್ತ ಜನ ಸಂಪರ್ಕ ಸಭೆ ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಸರ್ಕಾರದ ಎಲ್ಲ ಕಚೇರಿಗಳ ತಾಲೂಕು ಮಟ್ಟದ ಸರಕಾರಿ ಅಧಿಕಾರಿಗಳು ಹಾಜರಿರುತ್ತಾರೆ. ಯಾವುದೇ ಸರಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ನೀಡಬಹುದಾಗಿದೆ.

ಸರಕಾರದ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವಲ್ಲಿ ತಾರತಮ್ಯ ಮಾಡುತ್ತಿರುವ ಬಗ್ಗೆ, ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗ ಪಡಿಸಿದ ದೂರುಗಳು ಸೇರಿದಂತೆ ಇನ್ನಿತರೆ ಅಕ್ರಮಗಳ ಬಗ್ಗೆ ದೂರು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಗದಗ ಜಿಲ್ಲಾ ಪೊಲೀಸ್ ಉಪಾಧೀಕ್ಷಕ ವಿಜಯ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...